BJP supports transport workers' protest: R. Ashoka

ಬಿಜೆಪಿ ಶಾಸಕರು, ಸಚಿವರ ಮೇಲೆ ದಾಳಿ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್. ಅಶೋಕ

ಬೆಂಗಳೂರು: ಓಂ ಶಕ್ತಿ ಸಂಘದ ಮೇಲೆ ನಡೆದ ದಾಳಿಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ, ಇಂತಹ ದಾಳಿಗಳು ಮರುಕಳಿಸಲಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಬರಿಮಲೆ ಮಾದರಿಯಲ್ಲೇ ಓಂ ಶಕ್ತಿ ಮಾಲಾಧಾರಿಗಳು ದೇವಿಯ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ಚಾಮರಾಜಪೇಟೆಯಲ್ಲೂ ಇದೇ ರೀತಿ ಆಚರಣೆ ನಡೆಯುತ್ತದೆ.

ಜೆಜೆ ನಗರದಲ್ಲಿ ಮೂವರು ಮುಸ್ಲಿಂ ಹುಡುಗರಿಗೆ ತರಬೇತಿ ಕೊಟ್ಟು ಕಲ್ಲು ಹೊಡೆಯಲು ಕಳುಹಿಸಿದ್ದಾರೆ. ಭಕ್ತರು ದೇವಸ್ಥಾನಕ್ಕೆ ಹೋಗಿ ಸುಮ್ಮನೆ ಬರುವಾಗ ದಾಳಿ ಮಾಡಿದ್ದಾರೆ. ದಾಳಿಗೆ ಒಳಗಾದ ಕಾಲೇಜಿನ ಯುವತಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ.

ಮಾಧ್ಯಮಗಳ ಮುಂದೆ ಬಂದರೆ ನಂತರ ಮುಖ ತೋರಿಸಲು ಸಾಧ್ಯವಿಲ್ಲ ಎಂದು ಆಕೆ ಭಯ ಪಡುತ್ತಿದ್ದಾಳೆ. ಅವರಿಗೆ ಎಲ್ಲ ಬಗೆಯ ಚಿಕಿತ್ಸೆ ನೀಡಲು ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದೇವೆ ಎಂದರು.

ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಇವರನ್ನು ಯಾರೂ ಕೇಳುವವರಿಲ್ಲ. ಚಾಮರಾಜಪೇಟೆಯಲ್ಲೇ ಈ ಹಿಂದೆ ಹಸುವಿನ ಕೆಚ್ಚಲು ಕೊಯ್ದ ಘಟನೆ ನಡೆದಿತ್ತು. ಇಂತಹ ಕೃತ್ಯ ಎಸಗಲು ಪಾಕಿಸ್ತಾನ, ಬಾಂಗ್ಲಾದೇಶದಿಂದ ಹಣ ಬರುತ್ತದೆ. ಕಲ್ಲು ಹೊಡೆದ ಬಳಿಕ ಜಾಮೀನು ಪಡೆದು ಹೊರಗೆ ಬರುತ್ತಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಅಮಾಯಕರನ್ನು ರಕ್ಷಣೆ ಮಾಡುತ್ತಿಲ್ಲ. ಅಮಾಯಕರಿಗೆ ಭಯ ಮೂಡಿಸುವ ಕೆಲಸ ನಡೆಯುತ್ತಿದೆ. ಇಂತಹ ದುಷ್ಕರ್ಮಿಗಳನ್ನು ಜೈಲಿಂದ ಬಿಡಿಸಲು ಲಾಯರ್‌ಗಳೂ ಬರುತ್ತಾರೆ. ಇದು ಮುಸ್ಲಿಮರನ್ನು ಓಲೈಕೆ ಮಾಡುವ ಸರ್ಕಾರ. ಈ ದುರುಳರು ತೊಲಗುವವರೆಗೂ ಹಿಂದೂಗಳಿಗೆ ನೆಮ್ಮದಿಯಿಲ್ಲ.

ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸದೇ ಇದ್ದರೆ ಓಂ ಶಕ್ತಿ ಸಂಘಗಳ ಮೇಲೆ ದಾಳಿಗಳು ನಡೆಯುತ್ತವೆ. ಈ ಸಂಘಗಳು ಕೂಡ ಬೀದಿಗಿಳಿದು ಹೋರಾಟ ಮಾಡಬೇಕಿದೆ ಎಂದರು.

ಬೀದರ್‌ ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ ಯತ್ನ ನಡೆದಿದೆ. ಆದರೆ ಸಚಿವರು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದರು. ಮತ್ತೊಂದು ಕಡೆ ಕಾಂಗ್ರೆಸ್‌ನವರು ಕೇಂದ್ರ ಸಚಿವ ವಿ.ಸೋಮಣ್ಣನವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಚೇರ್‌ ಎಸೆದಿರುವುದು ಕಂಡುಬಂದಿದೆ. ಶಾಸಕರಿಗೆ, ಕೇಂದ್ರದ ಸಚಿವರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.

ರಾಜ್ಯದಲ್ಲಿ ಗೃಹ ಇಲಾಖೆಯನ್ನು ಸಿಎಂ ನಡೆಸುತ್ತಾರೆಯೇ, ಅಥವಾ ಜಿಲ್ಲೆಗೆ ಒಬ್ಬ ಗೃಹಸಚಿವರು ಇದ್ದಾರೆಯೇ ಎಂದು ಅನ್ನಿಸುತ್ತಿದೆ. ಸಿಎಂ ಡಿಸಿಎಂ ನಡುವಿನ ಕಲಹದಲ್ಲಿ ಪೊಲೀಸ್‌ ಇಲಾಖೆಯಲ್ಲಿ ಹೊಸ ನೇಮಕ ನಡೆಯುತ್ತಿಲ್ಲ. ವರ್ಗಾವಣೆ ದಂಧೆ ಮಾತ್ರ ನಡೆಯುತ್ತಿದೆ ಎಂದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!