Bangladesh: Unrelenting cruelty against Hindus

ಬಾಂಗ್ಲಾ: ಹಿಂದೂಗಳ ಮೇಲೆ ನಿಲ್ಲದ ಕ್ರೌರ್ಯ.. ಪತ್ರಕರ್ತ ಸೇರಿ 6 ಹಿಂದೂಗಳ ಕಗ್ಗೋಲೆ

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ (Hindus) ಮೇಲಿನ ಪೈಶಾಚಿಕ ದಾಳಿ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಪತ್ರಿಕೆಯೊಂದರ ಸಂಪಾದಕ ಮತ್ತು ದಿನಸಿ ಅಂಗಡಿಯ ಮಾಲೀಕ ಸೇರಿದಂತೆ ಇಬ್ಬರು ಹಿಂದೂಗಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕಳೆದ 18 ದಿನಗಳಲ್ಲಿ ನಡೆದ ಹಿಂದೂ ಸಮುದಾಯದವರ ಆರನೇ ಹತ್ಯೆ ಪ್ರಕರಣ ಇದಾಗಿದೆ. ಇದೇ ವೇಳೆ 40 ವರ್ಷದ ಹಿಂದೂ ವಿಧವೆಯೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದು, ಮಾತ್ರವಲ್ಲದೇ ಆಕೆಯ ಕೂದಲನ್ನು ಕತ್ತರಿಸಿ, ಮರಕ್ಕೆ ಕಟ್ಟಿಹಾಕಿ, ಹಣಕ್ಕೆ ಬೇಡಿಕೆ ಇಟ್ಟ ಘಟನೆಯೂ ವರದಿಯಾಗಿದೆ.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ರಾಜಧಾನಿ ಢಾಕಾಗೆ ಸಮೀಪದಲ್ಲಿರುವ ನರಸಿಂಗಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂ ದೂ‌ರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತ ವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ಸಂಜೆ 6 ಗಂಟೆ ಸುಮಾರಿಗೆ, ಜರ್ಶೋ ಜಿಲ್ಲೆಯ ಮಣಿರಾಂಪುರ ಉಪಜಿಲ್ಲೆಯ ಕೊಪಾ ಲಿಯಾ ಬಜಾರ್‌ನಲ್ಲಿ 45 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರನ್ನು ಬರ್ಬರವಾಗಿ ಗುಂಡಿಕ್ಕಿ ಕೊಲ್ಲಲಾಗಿದೆ.

ರಾಣಾ ಪ್ರತಾಪ್ ನರೈಲ್ ಜಿಲ್ಲೆಯಿಂದ ಪ್ರಕಟವಾಗುವ ಕಾರ್ಯನಿರ್ವಾಹಕ ದಿನಪತ್ರಿಕೆಯ ಸಂಪಾದಕ ರಾಗಿದ್ದು, ಐಸ್ ಕಾರ್ಖಾನೆಯನ್ನು ಹೊಂದಿದ್ದರು.

ಸ್ಥಳೀಯರ ಹೇಳಿಕೆಗಳ ಮಾಹಿತಿಗಳ ಪ್ರಕಾರ, ಕೆಲವು ಪುರುಷರು ಬೈಕ್‌ನಲ್ಲಿ ಬಂದು ಅವರನ್ನು ಕಾರ್ಖಾನೆಯಿಂದ ಹೊರ ಗೆಳೆದು, ಒಂದು ಗಲ್ಲಿಗೆ ಕರೆದೊಯ್ದು ಅವರ ತಲೆಗೆ ಹಲವು ಬಾರಿ ಗುಂಡು ಹಾರಿಸಿದ್ದರು. ಅಷ್ಟೇ ಅಲ್ಲದೆ ಕುತ್ತಿಗೆ ಕೊಯ್ದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ದೇಹದಿಂದ ಏಳು ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ. ಪ್ರತಾಪ್ ಅವರ ತಲೆಗೆ ಮೂರು ಗುಂಡುಗಳು ತಗುಲಿವೆ ಎಂದು ಹಿರಿಯ ಅಧಿಕಾರಿ ಯೊಬ್ಬರು ದೃಢಪಡಿಸಿದ್ದಾರೆ.

ಯೂನಸ್ ನೇತೃತ್ವದ ಮಧ್ಯಂತರ ಸರಕಾರದ ಅವಧಿಯಲ್ಲಿ ಬಾಂಗ್ಲಾದೇಶ ದಲ್ಲಿ ಅಲ್ಪಸಂಖ್ಯಾತರ ಮೇಲೆ 2,900ಕ್ಕೂ ಹೆಚ್ಚು ಹಿಂಸಾಚಾರದ ಘಟನೆಗಳು ನಡೆದಿವೆ. ಇದರ ನಡುವೆ ಭಾರತ ಮೋದಿ ಸರ್ಕಾರ ಹಿಂದೂಗಳ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳದೆ ಉಳಿದಿದೆ ಎಂಬ ಆಕ್ರೋಶದ ಮಾತುಗಳು ಕೇಳಿಬಂದಿದೆ.

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!