Needs to put aside boredom and show Doddaballapur JDS strength: Harish Gowda appeals

ಬೇಸರ ಬದಿಗೊತ್ತಿ ದೊಡ್ಡಬಳ್ಳಾಪುರದ ಜೆಡಿಎಸ್ ಶಕ್ತಿ ತೋರಬೇಕಿದೆ: ಹರೀಶ್ ಗೌಡ ಮನವಿ

ದೊಡ್ಡಬಳ್ಳಾಪುರ: ಸೋಲಿನ ಹತಾಶೆ, ಪಕ್ಷದ ಆಂತರಿಕ ಮಟ್ಟದಲ್ಲಿನ ಯಾವುದೇ ಬೇಸರ ಇದ್ದರೂ ಬದಿಗೊತ್ತಿ, ಮುಖಂಡರು, ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಜೆಡಿಎಸ್ (JDS) ಪಕ್ಷದ ಶಕ್ತಿಯನ್ನು ತೋರುವ ಅನಿರ್ವಾರ್ಯತೆ ಎದುರಾಗಿದೆ ಎಂದು ಹಿರಿಯ ಮುಖಂಡ ಹರೀಶ್ ಗೌಡ (Harish Gowda) ಹೇಳಿದ್ದಾರೆ.

ಜ. 10 ರಂದು ದೊಡ್ಡಬಳ್ಳಾಪುರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಭೆಯ ಕುರಿತು ಹಲವು ಮುಖಂಡರ ಆಕ್ಷೇಪ, ಬೇಸರ ಕುರಿತಂತೆ ಈ ರೀತಿ ಹರೀಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ಜೊತೆ ಮೈತ್ರಿಯಿಂದ ಜೆಡಿಎಸ್‌ಗಿಂತ ಹೆಚ್ಚಾಗಿ ಬಿಜೆಪಿಗೆ ಅನುಕೂಲವಾಗಿದೆ. ಆದಾಗ್ಯೂ ಸ್ಥಳೀಯವಾಗಿ ಜೆಡಿಎಸ್ ಪಕ್ಷದ ಸಂಘಟನೆಯನ್ನು ಕುಗ್ಗಿಸಲು, ಆಪರೇಷನ್ ಕಮಲದಂತ ಪ್ರಯತ್ನ ನಡೆಯುತ್ತಿರುವುದು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಕೆರಳಿಸಿದೆ. ಈ ವಿಷಯ ಪಕ್ಷದ ವರಿಷ್ಠರ ಗಮಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ. ಅಂತೆಯೇ ಪಕ್ಷದ ಶಕ್ತಿ ಭದ್ರ ಪಡಿಸಲು, ಕಾರ್ಯಕರ್ತರಿಗೆ ಚೈತನ್ಯ ನೀಡಲು ಪಕ್ಷದ ವರಿಷ್ಠರು ರಾಜ್ಯಾದ್ಯಂತ ಕಾರ್ಯಕರ್ತರ ಸಭೆಯನ್ನು ಆಯೋಜಿಸುತ್ತಿದ್ದಾರೆ.

ಡಿ. 27 ರಂದು ನಡೆದ ಸಭೆಯಲ್ಲಿ ದೊಡ್ಡಬಳ್ಳಾಪುರದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗದ ಕಾರಣ ಇದೇ ತಿಂಗಳ (ಜ. 10)ರಂದು ನಗರದ ಒಕ್ಕಲಿಗರ ಸಮುದಾಯ ಭವದಲ್ಲಿ ಕಾರ್ಯಕರ್ತರ ಸಭೆ ಆಯೋಜಿಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.

ಇಲ್ಲಿ ಕಾರ್ಯಕರ್ತರ ಅಹವಾಲುಗಳನ್ನು ವರಿಷ್ಠರು ಆರಿಸುತ್ತಾರೆ ಎಂದು ತಿಳಿಸಿದ್ದಾರೆ.

ಬಾಶೆಟ್ಟಿಹಳ್ಳಿ ಸೋಲಿಗೆ ಹಣಬಲ ಕಾರಣ

ಇನ್ನೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಹಿನ್ನಡೆಗೆ ಸ್ಥಳೀಯ ಪಕ್ಷದ ಮುಖಂಡರೆಂದು ಕೊಳ್ಳುವವರು ಬಿಜೆಪಿ ಜೊತೆ ಹೊಂದಾಣಿ ಮಾಡಿಕೊಂಡಿದ್ದು, ಹಣ ಬಲದ ನಡೆದ ಚುನಾವಣೆಯಾಗಿ ಮಾರ್ಪಾಡು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯ ಕುರಿತು ಆತಂಕವನ್ನು ಹೆಚ್ಚಿಸಿದೆ.

ಈ ಹಿನ್ನಡೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡರನ್ನು ಹೊಣೆಗಾರನ್ನಾಗಿ ಮಾಡುವುದು ಮೂರ್ಖತನವಾಗುತ್ತದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಸದೃಢಗೊಳಿಸಲು ಮುನೇಗೌಡರ ಪಾತ್ರ ಅಪಾರವಾಗಿದೆ. ಅಂತ ನಾಯಕನ ಬದಿಗೊತ್ತುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.

ಈ ಕುರಿತಂತೆ ಬಿ.ಮುನೇಗೌಡರು ಹಾಗೂ ವರಿಷ್ಠರ ಜೊತೆ ಮಾತನಾಡಲಾಗುವುದು ಎಂದು ಹರೀಶ್ ಗೌಡ ಹೇಳಿದ್ದಾರೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!