Trump increases H-1B visa fee to 88 lakhs.

ಮೋದಿ ಮಿತ್ರನಿಂದ ಭಾರತದ ಮೇಲೆ ಶೇ.500 ತೆರಿಗೆ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಪ್ತ ಮಿತ್ರ ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಭಾರತಕ್ಕೆ ಮಾರಕವಾಗುವಂಹ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದು, ಈ ಕುರಿತಂತೆ ಭಾರತ ಸರ್ಕಾರ ಕನಿಷ್ಠ ಪ್ರತಿಕ್ರಿಯೆ ನೀಡದೆ ಇರುವುದು ಅಚ್ಚರಿಗೆ ಕಾರಣವಾಗಿದೆ.

ಕೆಲ ವರ್ಷಗಳ ಹಿಂದಷ್ಟೇ ತನ್ನ ಆಪ್ತ ಗೆಳೆಯ ನೆಂದು ನಂಬಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಆಡಿರುವ ಮಾತು, ಭಾರತದ ಮೇಲೆ ವಿಧಿಸುತ್ತಿರುವ ತೆರೆಗೆಯ ದಂಡದಿಂದಾಗಿ, ಟ್ರಂಪ್ ಅಧ್ಯಕ್ಷನಾಗಿಸಲು ಮೋದಿ ಕೈಗೊಂಡ ಪ್ರಚಾರ ಕಾರಣಕ್ಕೆ ಭಾರತ ಕೈಸುಟ್ಟುಕೊಳ್ಳುವಂತಾಗಿದೆ.

ಈಗಾಗಲೇ ರಷ್ಯಾದಿಂದ ಕಡಿಮೆ ದರದಲ್ಲಿ ಭಾರತದ ಖಾಸಗಿ ಕಂಪನಿ ಪೆಟ್ರೋಲ್ ಉತ್ಪಾದನ್ಮ ಖರೀದಿ ಮಾಡುತ್ತಿರುವುದಕ್ಕೆ ಕೆರಳಿರುವ ಟ್ರಂಪ್ ಶೇ.50 ತೆರಿಗೆಯ ದಂಡ ವಿಧಿಸಿದ್ದಾರೆ, ಈಗ ಅದನ್ನು ಶೇ.500 ರಷ್ಟು ಹೆಚ್ಚಿಸುವುದಾಗಿ ವಾರ್ನಿಂಗ್ ಕೂಡ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಮಸೂದೆಯೊಂದನ್ನು ರಿಪಬ್ಲಿಕನ್ ಸಂಸದ ಲಿಂಡ್ಡೆ ಗ್ರಹಾಮ್ ಮತ್ತು ಡೆಮೋಕ್ರಾಟ್ ಸಂಸದ ರಿಚರ್ಡ್ ಬ್ಲೂಮೆಂಥಲ್ ಸಿದ್ದಪಡಿಸಿದ್ದು, ಟ್ರಂಪ್ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ಹೇಳಲಾಗಿದೆ.

ಮುಂದಿನ ವಾರ ಅಮೆರಿಕದ ಸಂಸತ್ತಿನಲ್ಲಿ ರಷ್ಯಾ ನಿರ್ಬಂಧ ಮಸೂದೆಯನ್ನು ಮಂಡಿಸಲಾಗುತ್ತದೆ. ಅಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಭಾರತ ಇಕ್ಕಟ್ಟಿಗೆ ಸಿಲುಕಲಿದೆ.

ಈ ವರ್ಷಾರಂಭದಲ್ಲೇ ಭಾರತದ ಮೇಲೆ ಗರಿಷ್ಠ ತೆರಿಗೆ ಹೇರುವುದಾಗಿ ಟ್ರಂಪ್ ಸುಳಿವು ನೀಡಿದ್ದರು. ರಷ್ಯಾದಿಂದ ಕಡಿಮೆ ಬೆಲೆಯಲ್ಲಿ ತೈಲ, ಯುರೇನಿ ಯಮ್ ಉತ್ಪನ್ನಗಳನ್ನು ಖರೀದಿಸುವ ರಾಷ್ಟ್ರಗಳಿಗೆಲ್ಲ ಇದು ಅನ್ವಯಿಸುತ್ತದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಮತ್ತೊಂದೆಡೆ ಮೊದಿ ಅವರು, ‘ಸರ್, ನಾನು ನಿಮ್ಮನ್ನು ಭೇಟಿಯಾಗಬಹುದೇ?’ ಎಂದು ಪ್ರಧಾನಿ ಮೋದಿ ನನ್ನನ್ನು ಭೇಟಿಯಾಗಲು ಬಂದರು ಎಂದು ಲೇವಡಿ ರೂಪದಲ್ಲಿ ಆಡಿರುವ ಮಾತು ಭಾರತೀಯರ ಕೆರಳಿಸಿದೆ.

ಗೋದಿ ಮೀಡಿಯಾಗಳ ತೇಪೆ ಹಚ್ಚುವ ಕಾರ್ಯ

ಇನ್ನೂ ಅಮೇರಿಕಾ ಸುಂಕದ ಬರೆ ಕುರಿತು ಗೋದಿ ಮೀಡಿಯಾಗಳು ಭಾರತಕ್ಕಿಂತ ಅಮೇರಿಕಾದ ಮೇಲೆ ಪರಿಣಾಮ ಬೀರುತ್ತದೆ ಎಂದು ತೇಪೆ ಹಚ್ಚುವ ಕಾರ್ಯಕ್ಕೆ ಮುಂದಾಗಿವೆ.

ಈಗಾಗಲೇ ಶೇ. 50 ರ ಸುಂಕಕ್ಕೆ ಭಾರತದ ಗಾರ್ಮೆಂಟ್ಸ್ ಉದ್ಯಮ ತತ್ತರಿಸಿ ಹೋಗಿದೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ, ಇದರ ನಡುವೆ ಶೇ.500 ತೆರಿಗೆ ಆತಂಕ ಭಾರತದ ಕ್ಷೇತ್ರದ ಮೇಲೆ ಉಂಟಾಗುವ ಪರಿಣಾಮ ಆತಂಕಕಾರಿಯಾಗಿದೆ.

ಆದಾಗ್ಯೂ ರಷ್ಯಾದಿಂದ ಕಡಿಮೆ ದರದಲ್ಲಿ ಖರೀದಿ ಮಾಡುತ್ತಿರುವ ತೈಲ ಉತ್ಪನ್ನದಿಂದ ಭಾರತೀಯ ಜನಸಾಮಾನ್ಯರಿಗೆ ಆದ ಲಾಭವೇನು.‌? ಅದರ ಲಾಭ ಯಾರಿಗೆ ಸಿಗುತ್ತಿದೆ..? ಅಮೇರಿಕಾದ ಶೇ.500 ತೆರಿಗೆಯ ಪರಿಣಾಮ ಭಾರತದ ಜನಸಾಮಾನ್ಯ ಏಕೆ ಹೊರಬೇಕು ಎಂಬ ಪ್ರಶ್ನೆಯನ್ನು ಕೇಳುವವರೇ ಇಲ್ಲವಾಗಿದೆ..?

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!