ಮೋದಿ ಮಿತ್ರನಿಂದ ಭಾರತದ ಮೇಲೆ ಶೇ.500 ತೆರಿಗೆ?

Trump increases H-1B visa fee to 88 lakhs.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಪ್ತ ಮಿತ್ರ ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಭಾರತಕ್ಕೆ ಮಾರಕವಾಗುವಂಹ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದು, ಈ ಕುರಿತಂತೆ ಭಾರತ ಸರ್ಕಾರ ಕನಿಷ್ಠ ಪ್ರತಿಕ್ರಿಯೆ ನೀಡದೆ ಇರುವುದು ಅಚ್ಚರಿಗೆ ಕಾರಣವಾಗಿದೆ.

ಕೆಲ ವರ್ಷಗಳ ಹಿಂದಷ್ಟೇ ತನ್ನ ಆಪ್ತ ಗೆಳೆಯ ನೆಂದು ನಂಬಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಆಡಿರುವ ಮಾತು, ಭಾರತದ ಮೇಲೆ ವಿಧಿಸುತ್ತಿರುವ ತೆರೆಗೆಯ ದಂಡದಿಂದಾಗಿ, ಟ್ರಂಪ್ ಅಧ್ಯಕ್ಷನಾಗಿಸಲು ಮೋದಿ ಕೈಗೊಂಡ ಪ್ರಚಾರ ಕಾರಣಕ್ಕೆ ಭಾರತ ಕೈಸುಟ್ಟುಕೊಳ್ಳುವಂತಾಗಿದೆ.

ಈಗಾಗಲೇ ರಷ್ಯಾದಿಂದ ಕಡಿಮೆ ದರದಲ್ಲಿ ಭಾರತದ ಖಾಸಗಿ ಕಂಪನಿ ಪೆಟ್ರೋಲ್ ಉತ್ಪಾದನ್ಮ ಖರೀದಿ ಮಾಡುತ್ತಿರುವುದಕ್ಕೆ ಕೆರಳಿರುವ ಟ್ರಂಪ್ ಶೇ.50 ತೆರಿಗೆಯ ದಂಡ ವಿಧಿಸಿದ್ದಾರೆ, ಈಗ ಅದನ್ನು ಶೇ.500 ರಷ್ಟು ಹೆಚ್ಚಿಸುವುದಾಗಿ ವಾರ್ನಿಂಗ್ ಕೂಡ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಮಸೂದೆಯೊಂದನ್ನು ರಿಪಬ್ಲಿಕನ್ ಸಂಸದ ಲಿಂಡ್ಡೆ ಗ್ರಹಾಮ್ ಮತ್ತು ಡೆಮೋಕ್ರಾಟ್ ಸಂಸದ ರಿಚರ್ಡ್ ಬ್ಲೂಮೆಂಥಲ್ ಸಿದ್ದಪಡಿಸಿದ್ದು, ಟ್ರಂಪ್ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ಹೇಳಲಾಗಿದೆ.

ಮುಂದಿನ ವಾರ ಅಮೆರಿಕದ ಸಂಸತ್ತಿನಲ್ಲಿ ರಷ್ಯಾ ನಿರ್ಬಂಧ ಮಸೂದೆಯನ್ನು ಮಂಡಿಸಲಾಗುತ್ತದೆ. ಅಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಭಾರತ ಇಕ್ಕಟ್ಟಿಗೆ ಸಿಲುಕಲಿದೆ.

ಈ ವರ್ಷಾರಂಭದಲ್ಲೇ ಭಾರತದ ಮೇಲೆ ಗರಿಷ್ಠ ತೆರಿಗೆ ಹೇರುವುದಾಗಿ ಟ್ರಂಪ್ ಸುಳಿವು ನೀಡಿದ್ದರು. ರಷ್ಯಾದಿಂದ ಕಡಿಮೆ ಬೆಲೆಯಲ್ಲಿ ತೈಲ, ಯುರೇನಿ ಯಮ್ ಉತ್ಪನ್ನಗಳನ್ನು ಖರೀದಿಸುವ ರಾಷ್ಟ್ರಗಳಿಗೆಲ್ಲ ಇದು ಅನ್ವಯಿಸುತ್ತದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಮತ್ತೊಂದೆಡೆ ಮೊದಿ ಅವರು, ‘ಸರ್, ನಾನು ನಿಮ್ಮನ್ನು ಭೇಟಿಯಾಗಬಹುದೇ?’ ಎಂದು ಪ್ರಧಾನಿ ಮೋದಿ ನನ್ನನ್ನು ಭೇಟಿಯಾಗಲು ಬಂದರು ಎಂದು ಲೇವಡಿ ರೂಪದಲ್ಲಿ ಆಡಿರುವ ಮಾತು ಭಾರತೀಯರ ಕೆರಳಿಸಿದೆ.

ಗೋದಿ ಮೀಡಿಯಾಗಳ ತೇಪೆ ಹಚ್ಚುವ ಕಾರ್ಯ

ಇನ್ನೂ ಅಮೇರಿಕಾ ಸುಂಕದ ಬರೆ ಕುರಿತು ಗೋದಿ ಮೀಡಿಯಾಗಳು ಭಾರತಕ್ಕಿಂತ ಅಮೇರಿಕಾದ ಮೇಲೆ ಪರಿಣಾಮ ಬೀರುತ್ತದೆ ಎಂದು ತೇಪೆ ಹಚ್ಚುವ ಕಾರ್ಯಕ್ಕೆ ಮುಂದಾಗಿವೆ.

ಈಗಾಗಲೇ ಶೇ. 50 ರ ಸುಂಕಕ್ಕೆ ಭಾರತದ ಗಾರ್ಮೆಂಟ್ಸ್ ಉದ್ಯಮ ತತ್ತರಿಸಿ ಹೋಗಿದೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ, ಇದರ ನಡುವೆ ಶೇ.500 ತೆರಿಗೆ ಆತಂಕ ಭಾರತದ ಕ್ಷೇತ್ರದ ಮೇಲೆ ಉಂಟಾಗುವ ಪರಿಣಾಮ ಆತಂಕಕಾರಿಯಾಗಿದೆ.

ಆದಾಗ್ಯೂ ರಷ್ಯಾದಿಂದ ಕಡಿಮೆ ದರದಲ್ಲಿ ಖರೀದಿ ಮಾಡುತ್ತಿರುವ ತೈಲ ಉತ್ಪನ್ನದಿಂದ ಭಾರತೀಯ ಜನಸಾಮಾನ್ಯರಿಗೆ ಆದ ಲಾಭವೇನು.‌? ಅದರ ಲಾಭ ಯಾರಿಗೆ ಸಿಗುತ್ತಿದೆ..? ಅಮೇರಿಕಾದ ಶೇ.500 ತೆರಿಗೆಯ ಪರಿಣಾಮ ಭಾರತದ ಜನಸಾಮಾನ್ಯ ಏಕೆ ಹೊರಬೇಕು ಎಂಬ ಪ್ರಶ್ನೆಯನ್ನು ಕೇಳುವವರೇ ಇಲ್ಲವಾಗಿದೆ..?

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!