Internal fighting among JDS leaders who took to the streets in Rajghat..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಯಾವುದೇ ರಾಜಕೀಯ ಪಕ್ಷಗಳು ಚುನಾವಣ ಪ್ರಚಾರ, ನಾಮಪತ್ರ ಸಲ್ಲಿಕೆಗು ಮುನ್ನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆಸಲ್ಲಿಸುವ ಮೂಲಕ ಪ್ರಾರಂಭಿಸಲಾಗುತ್ತದೆ. ಅದೇ ರೀತಿ ಶುಕ್ರವಾರ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮುನೇಗೌಡ ಅವರು ಇಂದು ದೇವಾಯದಲ್ಲಿ ಪೂಜೆ ಸಲ್ಲಿಸಿ ಬೂತ್ ಮಟ್ಟದ ಸದಸ್ಯರ ನೋಂದಣಿ ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹುಸ್ಕೂರು ಆನಂದ್, ಹರೀಶ್ ಗೌಡ, ವಡ್ಡರಹಳ್ಳಿ ರವಿಕುಮಾರ್, ತ.ನ. ಪ್ರಭುದೇವ ಅವರ ನಡುವಿನ ವಾಗ್ವಾದ ತಾರಕಕ್ಕೆ ಹೋಗಿತ್ತು.

ಅರಳಿಕಟ್ಟೆಯಲ್ಲಿ ಮುಖಂಡರು ವಾಕ್ಸಸಮರ ನಡೆಸುತ್ತಿದ್ದರೆ, ಅರಳಿಕಟ್ಟೆಯ ಮುಂದೆ ನಿಂತಿದ್ದ ಕಾರ್ಯಕರ್ತರು ‘ಪಕ್ಷದಲ್ಲಿನ ಮುಖಂಡರ ಕಿತ್ತಾಟವು ನಾಚಿಕೆಗೇಡಿನ ಸಂಗತಿ. ಇದೇ ರೀತಿ ಮುಂದುವರೆದರೆ ಯಾರೊಬ್ಬರು ಪಕ್ಷದಲ್ಲಿ ಉಳಿಯುವುದಿಲ್ಲ. ನಿಮ್ಮ ಸ್ವಪ್ರತಿಷ್ಠೆಗಳನ್ನು ಬದಿಗಟ್ಟು ಬನ್ನಿ, ಇಲ್ಲವೆ ಮನೆಯಲ್ಲಿ ಇದ್ದುಬಿಡಿ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಾಕ್ಸ್ಸಮರ ಕೈ ಮೀರುತ್ತಿರುವದನ್ನು ಅರಿತ ಮುನೇಗೌಡ ಅವರು ಎಲ್ಲರನ್ನೂ ಸಮಾಧಾನಪಡಿಸುವ ಮೂಲಕ ಪಕ್ಷದ ಹಿತದೃಷ್ಠಿಯಿಂದ ಬೀದಿ ಜಗಳ ಬಿಟ್ಟು ಎಲ್ಲರು ಒಂದಾಗಿ ಮುನ್ನಡೆಯಬೇಕಿದೆ ಎಂದರು.

ಬೂತ್ ಮಟ್ಟದಿಂದ ಸದಸ್ಯತ್ವ ನೋಂದಣಿ, ಬೂತ್ ಕಮಿಟಿಯನ್ನು ರಚಿಸುವ ಮೂಲಕ ಪಕ್ಷ ಸಂಘಟನೆಗೆ ಸಜ್ಜಾಗುವಂತೆ ಜೆಡಿಎಸ್ ವರಿಷ್ಠರು ಹಾಗೂ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸೂಚನೆಯಂತೆ ಸ್ಥಳೀಯ ಸಂಸ್ಥೆಗಳ ಚುಣಾವಣೆಗಳು ಸಮೀಪಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟೆನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಹೇಳಿದರು.

ಪಕ್ಷದಲ್ಲಿ ನಿಷ್ಟಾವಂತ ಕಾರ್ಯಕರ್ತರು ಇದ್ದಾರೆ. ಇವರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಜ.10 ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲರೂ ಒಟ್ಟಾಗಿ ಭಾಗವಹಿಸಬೇಕು ಎಂದರು.

ಸಾಮೂಹಿಕ ನಾಯಕತ್ವ: ಹರೀಶ್ ಗೌಡ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹರೀಶ್ ಗೌಡ, ರಾಷ್ಟ್ರೀಯ ಪಕ್ಷಗಳ ಮಾದರಿಯಲ್ಲಿ ಪಕ್ಷವನ್ನು ಸಂಘಟಿಸಲು ಪಕ್ಷದ ವರಿಷ್ಠರು ನಿರ್ಣಯಿಸಿ, ಇಂದು ಬೂತ್ ಕಮಿಟಿಗೆ, ಸಾಮಾಜಿಕ ಜಾಲತಾಣ ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಚಾಲನೆ ನೀಡಲಾಗಿದೆ.

ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆಗೆ ಪಕ್ಷವನ್ನು ಸದೃಢಗೊಳಿಸಲು ಎಲ್ಲರು ಪ್ರಾಮಾಣಿಕವಾಗಿ ಸಾಗುತ್ತೇವೆ. ನಾಳೆ ದೊಡ್ಡಬಳ್ಳಾಪುರ ತಾಲೂಕಿಗೆ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಕೃಷ್ಣಾ ರೆಡ್ಡಿ ಅವರು ಕಾರ್ಯಕರ್ತರ ಸಭೆಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ ಎಂದರು.

ಆರ್ಭಟದಿಂದ ಏನು ನಡಿಯಲ್ಲ

ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನದೇ ಆದ ಶಕ್ತಿಯನ್ನು ಹೊಂದಿದೆ‌, ಮುಂಬರುವ ದಿನಗಳಲ್ಲಿ ಜನರ ಸೇವೆ ಮೂಲಕ ಜನ ವಿಶ್ವಾಸಗಳಿಸುತ್ತೇವೆ. ಕೋಲಾರದಲ್ಲಿ ಎನ್‌ಡಿಎ ಮೈತ್ರಿ ಮಾಡಿಕೊಂಡ ಬಳಿಕ ಹಾಲಿ ಸಂಸದ ಬಿಜೆಪಿ ಮುನಿಸ್ವಾಮಿ ಇದ್ರು ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಟಿಕೆಟ್ ನೀಡಲಾಯ್ತು, ಹಾಗೆಯೇ ದೊಡ್ಡಬಳ್ಳಾಪುರ ವಿಧಾನಸಭಾ ಚುನಾವಣೆಯಲ್ಲು ಆಗುತ್ತೆ, ತಾಳ್ಮೆಯಿಂದ ಹೋಗೋಣ ಎಂದರು.

ಪಕ್ಷಕ್ಕೆ ದ್ರೋಹ ಬಗೆದಿರುವ ಗುಂಪನ್ನು ಸರಿದಾರಿಗೆ ತರುತ್ತಿದ್ದಾರೆ: ಹುಸ್ಕೂರು ಆನಂದ್

ಮತ್ತೋರ್ವ ಮುಖಂಡ ಹುಸ್ಕೂರು ಆನಂದ್ ಮಾತನಾಡಿ, ಪಕ್ಷದಲ್ಲಿನ ಮುಖಂಡರ ನಡುವೆ ಇದ್ದ ಮೈತ್ರಿಗೊಂದಲದಿಂದ ಬೇಸತ್ತಿದವರ ಮನವೊಲಿಸಲಾಗಿದ್ದು, ಎಲ್ಲರೂ ಒಂದಾಗಿ ಪಕ್ಷವನ್ನು ಸದೃಢಗೊಳಿಸಲು ಕೈಜೋಡಿಸುತ್ತಿದ್ದಾರೆ. ನಾಳೆ ಜ.10 ರಂದು ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಎಲ್ಲರೂ ಸೇರಿ ವರಿಷ್ಠರ ಸಲಹೆಯನ್ನು ಸ್ವೀಕರಿಸಲಿದ್ದೇವೆ.

ಹಣ, ಅಧಿಕಾರದ ಆಸೆಗೆ ಪಕ್ಷಕ್ಕೆ ದ್ರೋಹ ಬಗೆದು, ಬೇರೆ ಪಕ್ಷಕ್ಕೆ ಸಹಕಾರ ಮಾಡಿದ ಗುಂಪನ್ನು ಕೃಷ್ಣ ರೆಡ್ಡಿ ಅವರು ಸರಿ ಮಾಡಿ ಜೊತೆ ಗೂಡಿಸುವುದಾಗಿ ಹೇಳಿದಾಗ, ನಾವು ಜೊತೆ ಗೂಡಲೇ ಬೇಕಲ್ಲವೇ. ತಪ್ಪು ಮಾಡೋದು ಸಹಜ, ಅದನ್ನು ತಿದ್ದಿ ನಡೆಯುವುದೆ ಧರ್ಮ. ಆ ರೀತಿ ಅವರು ತಪ್ಪನ್ನು ತಿದ್ದಿಕೊಂಡು ಬರುವುದಾದರೆ ಸ್ವಾಗತ ಮಾಡಿ, ಒಂದಾಗಿ ಸಾಗುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ರಾಜಘಟ್ಟ ಹರೀಶ್, ಹಾಡೋನಹಳ್ಳಿ ನಾಗರಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಣ್ಣ, ಹೋಬಳಿ ಅಧ್ಯಕ್ಷರಾದ ಸತೀಶ್, ರಂಗಸ್ವಾಮಿ, ಸಿದ್ದಪ್ಪ, ಜಗನ್ನಾಥ ಚಾರ್, ಟಿಎಪಿಎಂಸಿ ನಿರ್ದೇಶಕರಾದ ಆನಂದ್, ಪುರುಷೋತ್ತಮ್, ವಕೀಲರಾದ ಚನ್ನೇಗೌಡ, ಮುಖಂಡರಾದ ಮುದ್ದಣ್ಣ, ವೆಂಕಟರಮಣಪ್ಪ, ಅಂಚರಹಳ್ಳಿ ಆನಂದ್, ಕೆಂಪೇಗೌಡ, ಪ್ರಭಾಕರ್, ಧರ್ಮೇಂದ್ರ, ಶಶಿಕಲಾ, ಜ್ಯೋತಿ, ಭಾಗ್ಯಮ್ಮ, ಯುವ ಮುಖಂಡರಾದ ವಿನಯ್, ಅಭಿಜಿತ್ ಗೌಡಹಳ್ಳಿ, ಮನೂ ಗೌಡಹಳ್ಳಿ, ಆರೂಢಿ ಎಸಿ ಹರೀಶ್, ಹೇಮಂತ್ ಮತ್ತಿತರರಿದ್ದರು.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!