Convinced the Governor about the Hate Speech Prevention Bill: R. Ashoka

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

ಬೆಂಗಳೂರು: ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್‌ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕಿತ್ತು. ಇಂತಹ ಮಸೂದೆ ತರುವಾಗ ಅದು ಜನರ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನೋಡಬೇಕಾಗುತ್ತದೆ. ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿಸಿದ ಸಂವಿಧಾನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವಿದೆ.

ವಿಧಾನಸಭೆ ಇರುವುದು ಮಸೂದೆ ಮಂಡನೆ ಹಾಗೂ ಚರ್ಚೆಗೇ ಹೊರತು ಗಲಾಟೆ ಮಾಡುವುದಕ್ಕಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಇದರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾನು ಮಸೂದೆಯ ಬಗ್ಗೆ ಚರ್ಚೆ ಮಾಡಲು ಮುಂದಾದಾಗ ಕಾಂಗ್ರೆಸ್‌ ಶಾಸಕರು, ಸಚಿವರು ಭಯಗೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಿದರು. ಈ ವಿಚಾರದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರ ನಡೆಯೂ ನನಗೆ ಬೇಸರ ತಂದಿದೆ ಎಂದರು.

ಬಿಜೆಪಿಯಲ್ಲಿ 15 ಶಾಸಕರು ಈ ಬಗ್ಗೆ ಮಾತನಾಡುವುದಿತ್ತು. ಬಳಿಕ ಮಸೂದೆಯನ್ನು ಸದನ ಸಮಿತಿಗೆ ಒಪ್ಪಿಸಬೇಕೆಂದು ತೀರ್ಮಾನಿಸಿದ್ದೆವು. ಆದರೆ ಏಕಾಏಕಿ ಮಸೂದೆ ಪಾಸ್‌ ಮಾಡಲಾಗಿದೆ. ಈಗ ಅದು ರಾಜ್ಯಪಾಲರ ಬಳಿಗೆ ಹೋಗಿದೆ. ಸೋಮವಾರ ನಾನು, ರಾಜ್ಯಾಧ್ಯಕ್ಷರು ಹಾಗೂ ಇತರ ಮುಖಂಡರು ರಾಜ್ಯಪಾಲರ ಬಳಿಗೆ ಹೋಗಿ ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಇದು ಜನರ ಹಾಗೂ ಮಾಧ್ಯಮಗಳ ಸ್ವಾತಂತ್ರ್ಯ ಕಸಿಯುವ ಮಸೂದೆ.

ತುರ್ತು ಪರಿಸ್ಥಿತಿ ತಂದು ವಾಕ್‌ ಸ್ವಾತಂತ್ರ್ಯ ಕಸಿದುಕೊಂಡಂತೆಯೇ ಇಲ್ಲಿ ಮಸೂದೆ ಮೂಲಕ ಸ್ವಾತಂತ್ರ್ಯ ಕಸಿಯಲಾಗುತ್ತಿದೆ. ನಮ್ಮ ಅಹವಾಲಿಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಆದ್ದರಿಂದ ರಾಜ್ಯಪಾಲರ ಬಳಿಗೆ ಹೋಗುತ್ತಿದ್ದೇವೆ. ರಾಜ್ಯಪಾಲರು ಮೀಸಲಾತಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಕೇಳಿದ್ದಾರೆ. ಯಾವುದೇ ಕಾನೂನು ತರುವಾಗ ಹೀಗೆಯೇ ಚರ್ಚೆ ಮಾಡಬೇಕಾಗುತ್ತದೆ ಎಂದರು.

ಕೇರಳದ ಕನ್ನಡ ಶಾಲೆಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯನವರ ಆಪ್ತ ಪಾಲುದಾರರಾದ ಮುಖಂಡರೇ ಇದನ್ನು ಮಾಡಿದ್ದಾರೆ. ಇದರಲ್ಲಿ ಸಿಎಂ, ಡಿಸಿಎಂ ಕೈವಾಡ ಇದ್ದು, ಈ ಎಲ್ಲ ಬೆಳವಣಿಗೆಗಳು ಅವರಿಗೆ ಮೊದಲೇ ಗೊತ್ತಿತ್ತು. ನೀನು ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎಂದು ಮೊದಲೇ ತೀರ್ಮಾನಿಸಿಕೊಂಡಿದ್ದರು.

ಇವರ ಬ್ರದರ್‌ಗಳು ಎಲ್ಲವನ್ನೂ ಮೊದಲೇ ಚರ್ಚೆ ಮಾಡಿಕೊಂಡು ಮ್ಯಾಚ್‌ ಫಿಕ್ಸಿಂಗ್‌ ಮಾಡಿದ್ದಾರೆ. ಮುಖ್ಯಮಂತ್ರಿಗಳು ಕೇರಳಕ್ಕೆ ಪತ್ರ ಬರೆದಿರುವುದು ಕೂಡ ಮೊದಲೇ ಹೊಂದಾಣಿಕೆ ಮಾಡಿಕೊಂಡಿರುವುದರ ಭಾಗ. ಕೇರಳ ಸಿಎಂ ಬುಲ್ಡೋಜರ್‌ ಎಂದಾಗ ಅದಕ್ಕೆ ಸಿಎಂ ಸಿದ್ದರಾಮಯ್ಯ ಏನೂ ಹೇಳಲಿಲ್ಲ. ಇದು ಕನ್ನಡಕ್ಕೆ ದ್ರೋಹ ಬಗೆದ ಸರ್ಕಾರ. ವೇದಿಕೆಯಲ್ಲಿ ಕೇರಳ ಮುಖ್ಯಮಂತ್ರಿಯನ್ನು ಭೇಟಿ ಮಾಡಿದಾಗಲೇ ಈ ಬಗ್ಗೆ ಚರ್ಚೆ ಮಾಡಬೇಕಿತ್ತು.

ಎಲ್ಲದಕ್ಕೂ ಮೋದಿಯಿಂದ ಅನ್ಯಾಯ ಎನ್ನುತ್ತಾರೆ. ಈಗ ಇದನ್ನು ಏಕೆ ಅನ್ಯಾಯ ಎಂದು ಹೇಳುತ್ತಿಲ್ಲ? ಸಿಎಂ ಸಿದ್ದರಾಮಯ್ಯ ಕನ್ನಡಕ್ಕೆ ಮಾರಕವಾದ ನಡೆ ಇಟ್ಟಿದ್ದಾರೆ. ಇದರ ವಿರುದ್ಧ ತೀವ್ರ ಪ್ರತಿಭಟನೆ ಮಾಡಲಿ. ಇಲ್ಲವಾದರೆ ಇದರಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಶಾಮೀಲಾಗಿದ್ದಾರೆ ಎಂದೇ ಭಾವಿಸುತ್ತೇವೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!