Give priority to drinking water and fodder: Minister K.H. Muniyappa issues strict instructions

ಕುಡಿಯುವ ನೀರು, ಮೇವಿಗೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ ಕಟ್ಟುನಿಟ್ಟಿನ ಸೂಚನೆ

ಬೆಂ.ಗ್ರಾ. ಜಿಲ್ಲೆ: ಕುಡಿಯುವ ನೀರಿಗಾಗಿ ಗ್ರಾಮಪಂಚಾಯಿತಿ ವತಿಯಿಂದ ಕೊರೆಸಲಾದ ಬೋರ್ ವೆಲ್ ಗಳಿಗೆ ವಿದ್ಯುತ್ ಸಂಪರ್ಕ ನೀಡದೆ ಇರುವ ಆರೋಪ ಬೆಸ್ಕಾಂ ಇಲಾಖೆಯ ಮೇಲಿದೆ, ಇದರ ಬೆನ್ನಲ್ಲೇ, ಮುಂಬರುವ ಬೇಸಿಗೆಯಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ (K.H. Muniyappa) ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಬರುವ ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಬೇಸಿಗೆ ಇರುತ್ತದೆ. ಈ ಸಂದರ್ಭದಲ್ಲಿ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಯಾವುದಾದರೂ ಪ್ರದೇಶದಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗಿ ಕೊಳವೆ ಬಾವಿ ಕೊರೆದರೆ, ತಕ್ಷಣವೇ ಒಂದು ವಾರದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಒದಗಿಸಬೇಕು. ಕುಡಿಯುವ ನೀರು ಸಮಸ್ಯೆ ಬಂದಲ್ಲಿ ಡಿಸಿ ಖಾತೆಯಲ್ಲಿ ಹಣ ಇದೆ ತಕ್ಷಣ ಹಣ ಬಿಡುಗಡೆ ಮಾಡಿ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುವುದು.

ಜಾನುವಾರುಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಮೇವಿನ ಸಮಸ್ಯೆ ಉಂಟಾಗಿಲ್ಲ ಎಂದು ಪಶು ಅಧಿಕಾರಿಗಳು ತಿಳಿಸಿದ್ದಾರೆ. ಪಶು ಇಲಾಖೆ, ಕೆಎಂಎಫ್ ಸಹಕಾರದಿಂದ ಬೇಸಿಗೆಯಲ್ಲಿ ನೀರಿರುವ ರೈತರ ಜಮೀನುಗಳಿಗೆ ಉಚಿತವಾಗಿ ಮೇವು ಕಿಟ್ ವಿತರಿಸಲಾಗುವುದು. ಜೊತೆಗೆ ಕಾಲಕಾಲಕ್ಕೆ ಜಾನುವಾರುಗಳಿಗೆ ಲಸಿಕೆ ಹಾಕಲು ಪಶು ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ತಯಾರಿ ನಡೆಸಲಾಗಿದೆ. ಎಲ್ಲಿ ಸರ್ಕಾರಿ ಜಾಗ ಇದೆ ಅಲ್ಲಿ ನಿವೇಶನ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೇ ತಾಲ್ಲೂಕು ವ್ಯಾಪ್ತಿಯಲ್ಲಿ 500 ಕ್ಕಿಂತ ಹೆಚ್ಚು ಸೈಟ್ ಗಳನ್ನು ಸಿದ್ದ ಪಡಿಸಲಾಗಿದೆ. ದೇವನಹಳ್ಳಿಯಲ್ಲಿ ಮುಂದಿನ 15 ದಿನದಲ್ಲಿ 1000 ಸೈಟ್ ಕೊಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ವಸತಿ ಯೋಜನೆಯಡಿ ಜಿಲ್ಲೆಗೆ 2500 ನಿವೇಶನ ಮಂಜೂರು ಆಗಿದೆ. ತಾಲ್ಲೂಕಿಗೆ 500 ರಂತೆ ಹಂಚಿಕೆ ಮಾಡಲಾಗುವುದು. ಮನೆ ಕಟ್ಟಲು ನಿವೇಶನ ಬೇಕು ಹಾಗಾಗಿ ಮೊದಲು ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು ಎಂದರು.

ಜೆಜೆಎಂ ಕಾಮಗಾರಿಯಿಂದ ಹಳ್ಳಿಗಳಲ್ಲಿ ರಸ್ತೆಗಳು ಹಾಳಾಗಿವೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಕಾಮಾಗಾರಿಗೆ ತೆಗೆದಿರುವ ಗುಂಡಿಗಳನ್ನು 15 ದಿನಗಳೊಳಗೆ ಮುಚ್ಚಲು ಅಧಿಕಾರಿಗಳಿಗೆ ತಿಳಿಸಿದರು.

ಇಂದಿರಾ ಕಿಟ್ ಟೆಂಡರ್ ಹಂತದಲ್ಲಿದ್ದು, ಜನವರಿ ಅಂತ್ಯಕ್ಕೆ ಇಲ್ಲವೇ ಫೆಬ್ರವರಿ ತಿಂಗಳಲ್ಲಿ ಪಡಿತರ ಅಕ್ಕಿ ಜತೆಗೆ ಇಂದಿರಾ ಕಿಟ್ ವಿತರಿಸಲಾಗುವುದು ಎಂದು ಸಚಿವರು ಹೇಳಿದರು.

ಬೆಂಬಲ ಬೆಲೆ ಯೋಜನೆಯಡಿ ರಾಗಿ ನೋಂದಣಿಗೆ ಜಿಲ್ಲೆಯಲ್ಲಿ ಸುಮಾರು 2500 ರೈತರು ಬಾಕಿ ಉಳಿದಿದ್ದಾರೆ. ಅವರಿಗೆ ಉಪ ಸಮಿತಿಯಲ್ಲಿ ಚರ್ಚಿಸಿ ನಂತರ ತೀರ್ಮಾನಿಸಲಾಗುವುದು. ಜಿಲ್ಲೆಯಲ್ಲಿ ಒಟ್ಟು ಕೈಗಾರಿಕೆಗಳ ಸಂಖ್ಯೆ ಹಾಗೂ ಅಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಪಟ್ಟಿ ತಯಾರಿಸಿ ತ್ವರಿತವಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಪೋಡಿ ದುರಸ್ತಿಯಲ್ಲಿ 10 ನೇ ಸ್ಥಾನ

ಪಹಣಿ ಆಗಿಲ್ಲ, ಖಾತೆ ಆಗಿಲ್ಲ, ಹದ್ದುಬಸ್ತು ಆಗಿಲ್ಲ ಅಂತ ರೈತರು ನಮ್ಮ ಬಳಿ ಬರ್ತಾರೆ. ಜಿಲ್ಲೆಯು ಪೋಡಿ ದುರಸ್ತಿಯಲ್ಲಿ 10 ನೇ ಸ್ಥಾನದಲ್ಲಿದ್ದು ಪೋಡಿ ದುರಸ್ತಿಯಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಶೀಘ್ರ ಗತಿಯಲ್ಲಿ ಪೋಡಿ ದುರಸ್ತಿ ಆಗಬೇಕು. 2026 ರ ಅಂತ್ಯದ ವೇಳೆಗೆ ಒಂದು ಹಂತಕ್ಕೆ ತರಲು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು ಸಾರ್ವಜನಿಕರ ಸಂಪರ್ಕಕ್ಕೆ ಸಿಗಬೇಕು

ಅಧಿಕಾರಿಗಳು, ತಹಶೀಲ್ದಾರ್ ಗಳ ಮೇಲೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಸಾರ್ವಜನಿಕರು ಕಚೇರಿಗಳಿಗೆ ಬಂದಾಗ ಸೌಜನ್ಯದಿಂದ ವರ್ತಿಸುವುದು ಮುಖ್ಯ. ತಹಶೀಲ್ದಾರರು ವಾರಕ್ಕೆ ಎರಡು ದಿನ ಸೋಮವಾರ, ಗುರುವಾರ ಸಾರ್ವಜನಿಕರ ಸಂಪರ್ಕಕ್ಕೆ ಸಿಗಬೇಕು. ಇದರಿಂದ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದರು.

ನೆಲಮಂಗಲ ಶಾಸಕರಾದ ಶ್ರೀನಿವಾಸ್ ಎನ್ ಅವರು ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರೇ ಇರುವುದಿಲ್ಲ, ತ್ಯಾಮಗೊಂಡ್ಲು ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿಂದ ಅಂಬುಲೆನ್ಸ್ ಇಲ್ಲದೇ ರೋಗಿಗಳ ಪರದಾಟ ಅನುಭವಿಸುತ್ತಿದ್ದರು, ನಾನು ಸಂಪರ್ಕಿಸಿದ ನಂತರ ಅಂಬುಲೆನ್ಸ್ ಸೇವೆ ಸರಿಪಡಿಸಿದ್ದಾರೆ. ನೆಲಮಂಗಲದಲ್ಲಿ 31 ವಾರ್ಡ್ಗಳಿದ್ದು, 15 ನ್ಯಾಯಬೆಲೆ ಅಂಗಡಿ ಅವಶ್ಯಕತೆ ಇದೆ ಇದರ ಬಗ್ಗೆ ಕ್ರಮ ವಹಿಸಬೇಕು ಎಂದರು.

ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಮಾತನಾಡಿ ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಉದ್ಘಾಟನೆ ಆಗಿದೆ ಆದರೆ ಇದುವರೆಗೂ ಬೀಗ ತೆಗೆದಿಲ್ಲ, ಅಧಿಕಾರಿಗಳು ಕಚೇರಿಗೆ ಬಂದಿರುವುದಿಲ್ಲ. ಕೂಡಲೇ ಇದರ ಬಗ್ಗೆ ಕ್ರಮ ವಹಿಸಬೇಕು ಎಂದರು.

ದೊಡ್ಡಬಳ್ಳಾಪುರ ಟೌನ್ ನ ಮುತ್ತೂರಿನಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಪಟಾಕಿ ಅವಘಡದಲ್ಲಿ ಮೃತಪಟ್ಟ ಯುವಕರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲಿ, ಜೊತೆಗೆ ತಪ್ಪಿತಸ್ಥರ ವಿರುದ್ಧವಾಗಿ ಯಾವುದೇ ಕಾನೂನು ಕ್ರಮ ಆಗಿಲ್ಲ ಎಂದು ದೊಡ್ಡಬಳ್ಳಾಪುರ ಶಾಸಕರು ಪ್ರಸ್ತಾಪಿಸಿದರು, ಇದಕ್ಕೆ ಎಸ್ಪಿ ಅವರು ಪ್ರತಿಕ್ರಿಯಿಸಿ ಖುದ್ದಾಗಿ ಪ್ರಕರಣದ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆಯಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳೆಯರಿಗೆ ಮೀನು ಮರಿಗಳನ್ನು ವಿತರಣೆ ಮಾಡಲಾಯಿತು.

ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ ಹೆಗಡೆ, ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಚಂದ್ರಕಾಂತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!