VB Ji Ram Ji Yojana has put an end to corruption: MP Dr. K. Sudhakar

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಡಾ.ಕೆ.ಸುಧಾಕರ್‌

ದೇವನಹಳ್ಳಿ: ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ (Dr. K. Sudhakar) ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮನರೇಗಾ ಯೋಜನೆಯನ್ನು ಸುಧಾರಣೆ ಮಾಡಿ ವಿಬಿ ಜಿ ರಾಮ್‌ ಜಿ ಯೋಜನೆ ತಂದಿದೆ. ಇದು 2047 ರ ‘ವಿಕಸಿತ ಭಾರತ’ದ ಗುರಿಯನ್ನು ತಲುಪಲು ಪೂರಕವಾಗಿದೆ. 2005 ರ ಮೂಲ ಕಾಯಿದೆಯನ್ನು ಈಗಿನ ಕಾಲಕ್ಕೆ ತಕ್ಕಂತೆ ಸುಧಾರಣೆ ಮಾಡುವುದು ಅನಿವಾರ್ಯವಾಗಿತ್ತು.

ಯುಪಿಎ ಆಡಳಿತದ ಅವಧಿಯಲ್ಲಿ ಈ ಯೋಜನೆಯಡಿ ಭ್ರಷ್ಟಾಚಾರ ಹಾಗೂ ರಾಜಕೀಯ ಹಸ್ತಕ್ಷೇಪ ನಡೆಯುತ್ತಿತ್ತು. ಗ್ರಾಮ ಪಂಚಾಯಿತಿಗಳ ಪಾತ್ರ ಹೆಸರಿಗೆ ಮಾತ್ರವಿದ್ದು, ರಾಜಕೀಯ ತೀರ್ಮಾನಗಳೇ ಹೆಚ್ಚಾಗಿರುತ್ತಿತ್ತು. ಇದನ್ನು ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು.

ಹಾಜರಾತಿಯಲ್ಲಿ ಭ್ರಷ್ಟಾಚಾರ ಸಾಮಾನ್ಯವಾಗಿದ್ದು, 10 ಜನ ಕೆಲಸಕ್ಕೆ ಬಂದರೆ 50 ಜನರ ಹೆಸರು ನೋಂದಾಯಿಸಲಾಗುತ್ತಿತ್ತು. ಯೋಜನೆಯ ಹಣದಲ್ಲಿ ಶೇ.40 ರಿಂದ 50 ರಷ್ಟು ಮೊತ್ತ ದುರುಪಯೋಗವಾಗಿದೆ ಎಂದು ಸಿಎಜಿ ವರದಿ ಕೂಡ ಹೇಳಿತ್ತು ಎಂದರು.

ಗುತ್ತಿಗೆದಾರರಿಗೆ ಕೆಲಸ ನೀಡುವುದು ಹಾಗೂ ಕೂಲಿ ಪಾವತಿಯಲ್ಲಿ 2 ರಿಂದ 4 ತಿಂಗಳ ವಿಳಂಬವಾಗುತ್ತಿತ್ತು. ಇದರಿಂದ ಶ್ರಮ ಪಟ್ಟ ಗ್ರಾಮೀಣ ಜನರಿಗೆ ತೀವ್ರ ಅನ್ಯಾಯವಾಗಿತ್ತು. ಬೋಗಸ್‌ ಬಿಲ್‌ಗಳನ್ನು ತಡೆಹಿಡಿರುವುದಕ್ಕೆ, ಮಹಾತ್ಮ ಗಾಂಧೀಜಿ ಹೆಸರಲ್ಲಿ ನೂರಾರು ಕೋಟಿ ಲೂಟಿ ಮಾಡಿರುವುದನ್ನು ತಡೆದಿರುವುದಕ್ಕೆ ಕಾಂಗ್ರೆಸ್‌ ಈಗ ಹೋರಾಟ ಮಾಡುತ್ತಿದೆ.

ಗಾಂಧೀಜಿಯವರು ಶ್ರೀರಾಮನನ್ನು ಇಷ್ಟಪಡುತ್ತಿದ್ದರು. ಆದರೆ ಕಾಂಗ್ರೆಸ್‌ಗೆ ಶ್ರೀರಾಮನ ಹೆಸರು ಆಗುತ್ತಿಲ್ಲ. ಆ ಹೆಸರನ್ನೇ ಕಾಂಗ್ರೆಸ್‌ ವಿರೋಧಿಸುತ್ತಿದೆ. ಕಾಂಗ್ರೆಸ್‌ ಹೋರಾಟದ ಮೂಲಕ ಭ್ರಷ್ಟಾಚಾರಕ್ಕೆ ಮಣೆ ಹಾಕುತ್ತೇವೆ ಎಂಬ ಸಂದೇಶ ನೀಡುತ್ತಿದೆ ಎಂದರು.

ಹೊಸ ಯೋಜನೆಯಲ್ಲಿ ಪಾರದರ್ಶಕತೆ ತರಲಾಗಿದೆ. ಜಿಯೋ ಟ್ಯಾಗ್‌, ಸ್ಯಾಟಲೈಟ್‌ ಚಿತ್ರ, ಗ್ರಾಮ ಪಂಚಾಯಿತಿಗೆ ಅಧಿಕಾರ, ಗತಿಶಕ್ತಿ ಕಚೇರಿಗೆ ಸಂಪರ್ಕ ಮೊದಲಾದ ಕ್ರಮಗಳ ಮೂಲಕ ಯೋಜನೆಯಲ್ಲಿ ಅಕ್ರಮವನ್ನು ತಡೆಗಟ್ಟಲಾಗಿದೆ.

ಗ್ರಾಮೀಣ ಭಾರತದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಯಾವುದೇ ಹಣ ಪೋಲಾಗುವುದನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಹವಾಮಾನ ವೈಪರೀತ್ಯ, ಆಸ್ತಿಯ ಸೃಜನೆ, ಜಲ ಸಂರಕ್ಷಣೆ, ರೈತರ ಕೃಷಿ ಭೂಮಿ ಫಲವತ್ತತೆ ಕಾಪಾಡುವುದು ಮೊದಲಾದ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದರು.

ಹೋಲಿಕೆ ನೋಡಿ

ಹಿಂದಿನ ಯುಪಿಎ ಅವಧಿಯಲ್ಲಿ ಯೋಜನೆಗೆ 2.13 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದರೆ, ಎನ್‌ಡಿಎ ಸರ್ಕಾರ 8.53 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಅಂದರೆ ಅನುದಾನ 4 ಪಟ್ಟು ಅಧಿಕವಾಗಿದೆ. ಹಿಂದೆ 1,660 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದ್ದರೆ, ನಮ್ಮ ಸರ್ಕಾರದ ಅವಧಿಯಲ್ಲಿ 3,210 ಕೋಟಿ ದಿನಗಳನ್ನು ಸೃಜಿಸಲಾಗಿದೆ.

ಹಿಂದೆ ವರ್ಷಕ್ಕೆ 153 ಲಕ್ಷ ಕಾಮಗಾರಿ ನಡೆಯುತ್ತಿದ್ದರೆ, ಈಗ 862 ಲಕ್ಷ ಆಗಿದೆ. ಅಂದರೆ 4 ಪಟ್ಟು ಹೆಚ್ಚಾಗಿದೆ. ಹಿಂದೆ ಆಸ್ತಿ ನಿರ್ಮಾಣ 12% ಆಗಿದ್ದರೆ, ಈಗ 62.95% ಆಗಿದೆ. ವರ್ಷದಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಹಾಗೂ ಪರಿಶಿಷ್ಟ ವರ್ಗ ಮತ್ತು ಗುಡ್ಡಗಾಡು ಪ್ರದೇಶಗಳಿಗೆ 150 ದಿನಗಳಿಗೆ ಹೆಚ್ಚಿಸಲಾಗಿದೆ. ಆದ್ದರಿಂದ ಈ ಹೋಲಿಕೆಯನ್ನು ನೋಡಬೇಕು ಎಂದು ಹೇಳಿದರು.

ಈ ಯೋಜನೆಯ ಮೂಲಕ ಮಹಾತ್ಮ ಗಾಂಧೀಜಿಯವರ ಸ್ವರಾಜ್ಯ ಕನಸಿನಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಹೆಸರು ಬದಲಾವಣೆಯ ನೆಪದಲ್ಲಿ ರಾಜಕೀಯ ಮಾಡುತ್ತಿದೆ. ಆದರೆ ದೇಶದ 600 ಕ್ಕೂ ಹೆಚ್ಚು ಸರ್ಕಾರಿ ಸಂಸ್ಥೆಗಳು ಒಂದೇ ಕುಟುಂಬದ ಹೆಸರಿನಲ್ಲಿ ಇರುವುದಕ್ಕೆ ಮೊದಲು ಕಾಂಗ್ರೆಸ್ ಉತ್ತರಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!