Doddaballapura reels drizzle, cold winds

ಶೀತಗಾಳಿ: ಈ ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬೆಂ ಗ್ರಾ ಜಿಲ್ಲೆ: ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯಾದ್ಯಂತ ಪ್ರಸ್ತುತ ಹೆಚ್ಚಾಗಿರುವ ತೀವ್ರ ಶೀತಗಾಳಿ (Cold wave) ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಮತ್ತು ಅದನ್ನು ಳನ್ನು ತಡೆಯುವ ಉದ್ದೇಶದಿಂದ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಶೀತ ಅಲೆ/ಗಾಳಿಯಿಂದ ಸುರಕ್ಷತೆ ಪಡೆಯಲು ದಪ್ಪನಾದ ಒಂದೇ ಬಟ್ಟೆಯ ಬದಲಿಗೆ, ಹಲವು ಪದರಗಳ ಸಡಿಲವಾದ, ಹಗುರವಾದ, ಉಣ್ಣೆಯ ಬಟ್ಟೆಗಳನ್ನು ಧರಿಸಿ.

  • ಕೈ ಕಾಲುಗಳನ್ನು ಸಂಪೂರ್ಣವಾಗಿ ಮುಚ್ಚಿ, ತಲೆಗೆ ಟೋಪಿ/ಮಫ್ಲರ್ ಗಳನ್ನು ಹಾಕಿಕೊಳ್ಳಿ, ಬೆಚ್ಚಗಿನ ಕಾಲುಚೀಲಗಳು ಮತ್ತು ಜಲನಿರೋಧಕ (waterproof) ಶೂಗಳನ್ನು ಬಳಸಿ.
  • ಬಟ್ಟೆ ಒಣಗಿರಬೇಕು. ಬಟ್ಟೆ ಒದ್ದೆಯಾದರೆ (ಬೆವರಿನಿಂದ ಮಳೆಯಿಂದ ಇತ್ಯಾದಿ) ತಕ್ಷಣ ಬದಲಾಯಿಸಿ, ದೇಹವನ್ನು ಹೈಡ್ರೆಟ್ ಆಗಿಡಲು ಬೆಚ್ಚಗಿನ ದ್ರವಗಳನ್ನು (ನೀರು, ಗಿಡಮೂಲಿಕೆ ಚಹಾ ಮತ್ತು ಸೂಪ್ ಇತ್ಯಾದಿ) ನಿಯಮಿತವಾಗಿ ಕುಡಿಯಿರಿ.
  • ರೋಗ ನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ದೇಹದ ಶಾಖವನ್ನು ಹೆಚ್ಚಿಸಲು ವಿಟಿಮಿನ್-ಸಿ ಸಮೃದ್ಧ ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಆಹಾರಗಳನ್ನು ಸೇವಿಸಿ.
  • ಸಾಧ್ಯವಾದಷ್ಟು ಮನೆಯೊಳಗ ಇರಿ, ವಿಶೇಷವಾಗಿ ಹೆಚ್ಚು ಚಳಿಯಿರುವ ಸಮಯದಲ್ಲಿ (ಬೆಳಗಿನ ಜಾವ ಮತ್ತು ತಡರಾತ್ರಿ).
  • ದುರ್ಬಲರ ಬಗ್ಗೆ, ಗಮನ ಕೊಡಿ: ವೈದ್ಯರು, ಮಕ್ಕಳು ಮತ್ತು, ಶಿಶುಗಳು ಸಾಕಷ್ಟು ಬೆಚ್ಚಗಿರಲು ವಿಯಮಿತವಾಗಿ ಅವರನ್ನು ಪರಿಶೀಲಿಸಿ.
  • ಹೈಪೋಥರ್ಮಿಯಾ (ನಡುಕ, ಗೊಂದಲ, ತೊದಲುವ ಮಾತು) ಮತ್ತು ಫ್ರಾಸ್ಟ್ ಬೈಟ್ (ನಿಶ್ಲೇಷತೆ, ಬಿಳಿ ಅಥವಾ ಮೇಣದಂತಹ ಚರ್ಮ) ನಂತಹ ಚಳಿ-ಸಂಬಂಧಿತ ಕಾಯಿಲೆಗಳ ಲಕ್ಷಣಗಳನ್ನು ತಿಳಿದುಕೊಳ್ಳಿ.
  • ಚಳಿ ಮತ್ತು ಒಣಗಾಳಿಯಿಂದ ಚರ್ಮಬಿರುಕು ಬಿಡುವುದನ್ನು ತಡೆಯಲು ಎಣ್ಣೆ, ಪೆಟ್ರೋಲಿಯಂ, ಜೆಲ್ಲಿ ಅಥವಾ ಕ್ರೀಮ್‌ನಿಂದ ನಿಯಮಿತವಾಗಿ ಚರ್ಮವನ್ನು ತೇವಗೊಳಿಸಿ.
  • ದೂರದರ್ಶನ, ರೇಡಿಯೋ ಅಥವಾ ಪತ್ರಿಕೆಗಳ ಮೂಲಕ ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ದೈನಂದಿನ ಹವಾಮಾನ ಮಾಹಿತಿಯನ್ನು ನೋಡುತ್ತೀರಿ.

ಶೀತ ಅಲೆ/ಗಾಳಿ ಸಂದರ್ಭದಲ್ಲಿ ಮಾಡಬಾರದ ಕೆಲಸಗಳು

  • ಮದ್ಯಪಾನ ಮಾಡಬೇಡಿ. ಇದು ಬೆಚ್ಚಗಿನ ಭಾವನೆಯನ್ನು ನೀಡುತ್ತದೆ ಎಂಬುದು ಸುಳ್ಳು. ಆದರೆ ವಾಸ್ತವವಾಗಿ ನಿಮ್ಮ ದೇಹದ ಮುಖ್ಯ ತಾಪಮಾನವನ್ನು ಕಡಿಮೆ ಮಾಡುತ್ತದೆ, ಹೈಪೋಥರ್ಮಿಯಾದ ಅಪಾಯವನ್ನು ಹೆಚ್ಚಿಸುತ್ತದೆ.
  • ನಡುಕವನ್ನು ನಿರ್ಲಕ್ಷಿಸಬೇಡಿ. ಇದು ನಿಮ್ಮ ದೇಹವು ಶಾಖವನ್ನು ಕಳೆದುಕೊಳ್ಳುತ್ತಿದೆ ಎಂಬುದರ ಮೊದಲ ಚಿಹ್ನೆ. ತಕ್ಷಣ ಮನೆಯೊಳಗೆ ಹೋಗಿ.
  • ಫ್ರಾಸ್ಟ್ ಬೈಟ್ ಅಥವಾ ಚಳಿಯಿಂದ ಮರಗಟ್ಟಿದ ಚರ್ಮದ ಪ್ರದೇಶವನ್ನು ಉಜ್ಜಬೇಡಿ ಅಥವಾ ಮಸಾಜ್ ಮಾಡಬೇಡಿ. ಇದು ತೀವ್ರವಾದ ಅಂಗಾಂಶ ಹಾನಿಯನ್ನು ಉಂಟುಮಾಡಬಹುದು.
  • ಫ್ರಾಸ್ಟ್ ಬೈಟ್ ಆದ ಚರ್ಮವನ್ನು ಬೆಚ್ಚಗಾಗಿಸಲು ನೇರವಾದ, ತೀವ್ರವಾದ ಶಾಖವನ್ನು (ಹೀಟಿಂಗ್ರಾಡ್, ಬೆಂಕಿ ಅಥವಾ ಬಿಸಿನೀರು) ಬಳಸಬೇಡಿ, ಏಕೆಂದರೆ ನಿಶ್ಲೇಷಗೊಂಡ ಪ್ರದೇಶವು ಸುಲಭವಾಗಿ ಸುಟ್ಟು ಹೋಗಬಹುದು.
  • ಗಾಳಿಯಿಲ್ಲದ ಮುಚ್ಚಿದ ಕೋಣೆಯಲ್ಲಿ ಕಲ್ಲಿದ್ದಲು, ಕಟ್ಟಿಗೆ ಅಥವಾ ಕ್ಯಾಂಡಲ್‌ಗಳನ್ನು ಉರಿಸಬೇಡಿ. ಇದು ಮಾರಣಾಂತಿಕ ಕಾರ್ಬನ್ ಅಂಶಕ್ಕೆ ಕಾರಣವಾಗಬಹುದು.
  • ಬೆಂಕಿ ಅಥವಾ ತಾಪನ ಸಾಧನವನ್ನು ಹಾಗಾಗ ಗಮನಿಸುತ್ತಿರಿ.
  • ಹೆಚ್ಚು ದೈಹಿಕ ಶ್ರಮ ಮಾಡಬೇಡಿ (ಉದಾಹರಣೆಗೆ, ತೀವ್ರವಾದ ಹೊರಾಂಗಣ ಕೆಲಸ) ಹೆಚ್ಚು ಬೆವರುವಿಕೆಯು ನಿಮ್ಮ ಬಟ್ಟೆಗಳನ್ನು ಒದ್ದೆ ಮಾಡಿ ವೇಗವಾಗಿ ತಣ್ಣಗಾಗಲು ಕಾರಣವಾಗಬಹುದು.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!