Seniors should hand over leadership to the younger generation: Nitin Gadkari

ಹಿರಿಯರು ಯುವ ಪೀಳಿಗೆಗೆ ನಾಯಕತ್ವವನ್ನು ಹಸ್ತಾಂತರಿಸಬೇಕು; ನಿತಿನ್ ಗಡ್ಕರಿ

ನಾಗುರ: ಹೊಸ ಪೀಳಿಗೆ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕು ಮತ್ತು ಹಳೆಯ ಪೀಳಿಗೆಯು ಪಕ್ಕಕ್ಕೆ ಸರಿಯಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

ಈ ಕುರಿತಂತೆ ನಾಗ್ಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗಡ್ಕರಿ ಅವರು ಮಾತನಾಡಿದ್ದು, 75 ವರ್ಷದ ಬಳಿಕವೂ ಅಧಿಕಾರದಲ್ಲಿ ಮುಂದುವರಿದಿರುವ ಪ್ರಧಾನಿ ಮೋದಿ ಅವರಿಗೆ ಟಾಂಗ್ ನೀಡಲು ಹೇಳಿದ್ದಾರೆ ಎಂದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಅಡ್ವಾಂಟೇಜ್ ವಿದರ್ಭ ಉಪಕ್ರಮದಲ್ಲಿ ಕಾಳೆ ಯುವ ಪೀಳಿಗೆಯನ್ನು ತೊಡಗಿಸಿಕೊಂಡಿದ್ದಾರೆ. ನಾಯಕತ್ವವನ್ನು ನಿಧಾನವಾಗಿ ಯುವ ಪೀಳಿಗೆಗೆ ಹಸ್ತಾಂತರಿಸಬೇಕು. ಹಿರಿಯರು ಮಾರ್ಗದರ್ಶನ ಮತ್ತು ಬೆಂಬಲ ನೀಡಿದರೆ, ಕೆಲಸಗಳು ಸುಗಮವಾಗಿ ನಡೆಯಲು ಪ್ರಾರಂಭಿಸಿದ ನಂತರ, ಅವರು ಹಿಂದೆ ಸರಿದು ಹೊಸ ಪೀಳಿಗೆಗೆ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅವಕಾಶ ನೀಡಬೇಕು ಮತ್ತು ತಾವು ಇತರ ಪಾತ್ರಗಳನ್ನು ನಿರ್ವಹಿಸಬೇಕು’ ಎಂದು ತಿಳಿಸಿದರು.

ಫೆಬ್ರುವರಿ 6 ರಿಂದ 8 ರವರೆಗೆ ನಾಗುರದಲ್ಲಿ ನಡೆಯುತ್ತಿರುವ ಅಡ್ವಾಂಟೇಜ್ ವಿದರ್ಭಎಕ್ಸ್‌ಪೋದ ಮೂರನೇ ವರ್ಷ ಇದಾಗಿದೆ. ವಿದರ್ಭ ಪ್ರದೇಶದಲ್ಲಿ ವಿವಿಧ ವಲಯಗಳಲ್ಲಿ ಉತ್ತಮ ಉದ್ಯಮಿಗಳಿದ್ದಾರೆ ಎಂದು ಎಐಡಿಯ ಮುಖ್ಯ ಮಾರ್ಗದರ್ಶಕರಾಗಿರುವ ಗಡ್ಕರಿ ಹೇಳಿದರು.

ವಿದರ್ಭ ಪ್ರದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅತ್ಯುತ್ತಮ ಉದ್ಯಮಿಗಳಿದ್ದಾರೆ ಎಂದು ಹೇಳಿದ ಅವರು,ವಿದರ್ಭವನ್ನು ಭಾರತೀಯ ಕೈಗಾರಿಕಾ ರಂಗದಲ್ಲಿ ಪ್ರಬಲ ಮತ್ತು ಉದಯೋನ್ಮುಖ ಬೆಳವಣಿಗೆ ಕೇಂದ್ರವನ್ನಾಗಿ ಮಾಡುವುದು ಮಹೋತ್ಸವದ ಉದ್ದೇಶವಾಗಿದೆ ಎಂದರು.

ಯಾವುದೇ ಪ್ರದೇಶದ ಅಭಿವೃದ್ಧಿಯಲ್ಲಿ ಕೈಗಾರಿಕಾ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳು ಹಾಗೂ ಸೇವಾ ಕ್ಷೇತ್ರದ ಮಹತ್ವವನ್ನೂ ಗಡ್ಕರಿ ಒತ್ತಿ ಹೇಳಿದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!