Fast unto death in Doddaballapur

ದೊಡ್ಡಬಳ್ಳಾಪುರದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ: ನಿತ್ರಾಣ ಹೋರಾಟಗಾರರ ಆರೋಗ್ಯ ತಪಾಸಣೆ

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): ಒಳಚರಂಡಿ ನೀರನ್ನು ಶುದ್ದೀಕರಿಸಿ ಬಿಡುವ ಸಲುವಾಗಿ ಎಸ್‌ಟಿಪಿ ಘಟಕ ಸ್ಥಾಪಿಸಬೇಕೆಂದು ಒತ್ತಾಯಿಸಿ ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಹಾಗೂ ‘ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಭಾಗ ಆರಂಭಿಸಿರುವ ಆಮರಣಾಂತ ಉಪವಾಸ ಸತ್ಯಾಗ್ರಹ (Fast unto death) ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ವರು ಹೋರಾಟಗಾರರು ನಿತ್ರಾಣರಾಗಿದ್ದಾರೆ.

ಶುಕ್ರವಾರ ಸಂಜೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೃಷ್ಣಾ ರೆಡ್ಡಿ, ವೈದ್ಯಾಧಿಕಾರಿ ಡಾ. ಪರಮೇಶ್ವರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.

ಭರವಸೆ ಬೇಡ

ನಮಗೆ ಇಲ್ಲಿನ ಯಾವುದೇ ಅಧಿಕಾರಿಗಳ ಭರವಸೆ ಬೇಡ. ಎಸ್‌ಟಿಪಿ ಘಟಕಕ್ಕೆ 57 ಕೋಟಿ ರೂ ಮಂಜೂರು ಮಾಡುವ ಸರ್ಕಾರದ ಕಾರ್ಯದರ್ಶಿಗಳು ಇಲ್ಲಿಗೆ ಬಂದು ಉತ್ತರ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಉಪವಾಸ ಕೈಬಿಡಿ ಎಂದು ಭರವಸೆ ನೀಡಲು ಬಂದ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಪ್ರತ್ಯುತ್ತರ ನೀಡಿದರು.

ರಾಜ್ಯ ಸರ್ಕಾರ ದೊಡ್ಡಬಳ್ಳಾಪುರದ ಕೊಳಚೆ ನೀರಿಗೆ ಎಸ್‌ಟಿಪಿ ಘಟಕ ಮಾಡಲು ಹಣ ಇಲ್ಲ ಎಂದು ಲಿಖಿತ ರೂಪದಲ್ಲಿ ಕೊಟ್ಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾಯಿಗಳಿಗೆ ಕೋಳಿ ಮಾಂಸ ಹಾಕಲು ಕೋಟಿ ಕೋಟಿ ಹಣವಿರುತ್ತದೆ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾಪಿ ಕುಡಿಯಲು ಬಿಸ್ನತ್ ತಿನ್ನಲು 200 ಕೋಟಿಗೂ ಹೆಚ್ಚು ಹಣವಿರುತ್ತದೆ. ಆದರೆ ಸಾವಿರಾರು ಜನರು ಶುದ್ಧ ನೀರು ಕುಡಿಯಲು, ಕೊಳದ ನೀರನ್ನು ಶುದ್ಧ ಮಾಡಲು 50 ಕೋಟಿ ಹಣವಿರುವುದಿಲ್ಲ ಎಂದು ದೂರಿದರು.

ಸ್ಥಳಕ್ಕೆ ಆಗಮಿಸಿದ ನಗರಾಭಿವೃದ್ದಿ ಇಲಾಖೆಯ ಜಿಲ್ಲಾ ಯೋಜನಾ ನಿರ್ದೇಶಕ ರಮೇಶ್‌ ಮಾತನಾಡಿ, ನಾಗರಕೆರೆಯಿಂದ ಹರಿಯುತ್ತಿರುವ ಒಳ ಚರಂಡಿ ನೀರಿನ ಪೈಪ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿದೆ. ನಗರಸಭೆ ತ್ಯಾಜ್ಯ ನೀರಿನ ಮೂರನೇ ಹಂತದ ಶುದ್ದೀಕರಣ ಮಾಡಲು 57 ಕೋಟಿ ರೂಗೆ ಇನ್ನೂ ಅನುಮೋದನೆ ದೊರೆತಿಲ್ಲ. ಈ ಬಗ್ಗೆ ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ.

ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗಳ ಸಹ ಈ ಬಗ್ಗೆ ಗಮನ ಹರಿಸುತ್ತಿದ್ದು, ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ. ಉಪವಾಸ ಸತ್ಯಾಗ್ರಹವನ್ನು ಕೈಬಿಡಿ ಎಂದು ಮನವಿ ಮಾಡಿದರು.

ತಹಶೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಇಲ್ಲಿಯೇ ಕಾರ್ಯಾರಂಭ ಮಾಡಲಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಸಹ ಸೂಚನೆ ನೀಡಿದ್ದಾರೆ. ಕೊಳಚೆ ನೀರಿನ ಶುದ್ದೀಕರಣಕ್ಕಾಗಿ ಖಾಸ್‌ಭಾಗ್ ಸಮೀಪ ಎರಡು ಎಕರೆ ಜಮೀನು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ಈಗಾಗಲೇ ಇದನ್ನು ನಗರಸಭೆಗೆ ಹಸ್ತಾಂತರಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಅವರೊಂದಿಗೆ ವೈಯಕ್ತಿಕ ಚರ್ಚೆ ಸಹ ನಡೆಸಲಾಗಿದ್ದು, ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳುವುದಾಗಿ ತಿಳಿಸಿದ್ದಾರೆ. ಸರ್ಕಾರದ ಕಾರ್ಯದರ್ಶಿಗಳೂ ಸಹ ಆದ್ಯತೆ ಮೇರೆಗೆ ಕಾಮಗಾರಿಗೆ ಅನುದಾನ ಪಡೆಯುವ ಭರವಸೆ ನೀಡಿದ್ದಾರೆ ಎಂದರು.

ನಗರಸಭೆ ವ್ಯಾಪ್ತಿಯಿಂದ ಬರುತ್ತಿರುವ ಒಳಚರಂಡಿ ನೀರನ್ನು ಶುದ್ದೀಕರಿಸಿ ಬಿಡುವಂತೆ ಏಳು ವರ್ಷಗಳಿಂದಲೂ ಹೋರಾಟ ಮಾಡಲಾಗುತ್ತಿದೆ. ನಮಗೆ ಯಾವುದೇ ಭರವಸೆ ಬೇಡ. ಕ್ಯಾನ್ಸರ್‌, ಕಿಡ್ನಿ ಮೊದಲಾದ ಸಮಸ್ಯೆಗಳಿವೆ. ನಮ್ಮ ಆರೋಗ್ಯಕ್ಕಿಂತ ನಮ್ಮ ಊರಿನ ಜನರ ಆರೋಗ್ಯ ಮುಖ್ಯ. ಸರ್ಕಾರ ಕಣ್ಣು ತೆರೆಯಲ್ಲ.

ಹಿಂದೆ ದಯಾಮರಣ ಸಹ ನೀಡಿ ಎಂದಿದ್ದೆವು. ಈಗ ಕಾಮಗಾರಿ ಹಣವನ್ನು ಕಾರ್ಖಾನೆಗಳ ಬಳಿಯೇ ವಸೂಲಿ ಮಾಡಿ. ಸಧ್ಯಕ್ಕೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಗಣರಾಜ್ಯೋತ್ಸವ ದಿನದಂದು ಕಪ್ಪು ಬಾವುಟ ಹಾರಿಸುವುದು ನಿಶ್ವಿತ ಎಂದು ಹೋರಾಟಗಾರರು ತಮ್ಮ ಹೋರಾಟ ಮುಂದುವರೆಸಿದರು.

ಧರಣಿ ಮುಂದುವರಿಕೆ

ಧರಣಿ ಮಾಡಿ ಆದರೆ ಉಪವಾಸ ಮಾಡಬೇಡಿ ಎಂದು ಅಧಿಕಾರಿಗಳಾದಿಯಾಗಿ ಮಹಿಳಾ ಠಾಣೆ ಇನ್ಸ್ಪೆಕ್ಟರ್‌ ನವೀನ್‌ ಕುಮಾರ್‌ ಮನವಿ ಮಾಡಿದರೂ ಸತ್ಯಾಗ್ರಹ ನಿರತರು, ರಾತ್ರಿ 9 ಗಂಟೆಯಾದರೂ ಸಹ ಹೋರಾಟ ಮುಂದುವರೆಸಿದ್ದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!