Astrology: ಮಂಗಳವಾರ, ಜನವರಿ 27, 2026, ದೈನಂದಿನ ರಾಶಿ ಭವಿಷ್ಯ /

ಮೇಷ ರಾಶಿ
ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿ ಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದು ಕೊಡುತ್ತದೆ. ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.
ವೃಷಭ ರಾಶಿ
ಯಾವುದಾದರು ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದ ರಿಂದ ಘನತೆ ಗೌರವ ನಿಮ್ಮನ್ನು ಹುಡುಕಿ ಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ.
ಮಿಥುನ ರಾಶಿ
ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ.
ಕಟಕ ರಾಶಿ
ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.
ಸಿಂಹ ರಾಶಿ
ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.
ಕನ್ಯಾ ರಾಶಿ
ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತ ವಿಚಾರಗಳನ್ನು ಬಹಿರಂಗ ಪಡಿಸಲು ಇದು ಸರಿಯಾದ ಸಮಯ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ.
ತುಲಾ ರಾಶಿ
ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.
ವೃಶ್ಚಿಕ ರಾಶಿ
ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥ ಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ.
ಧನಸ್ಸು ರಾಶಿ
ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ.
ಮಕರ ರಾಶಿ
ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರ ಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನ ವನ್ನು ನೀಡುತ್ತದೆ.
ಕುಂಭ ರಾಶಿ
ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹು ದು.ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು.
ಮೀನ ರಾಶಿ
ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರ ವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ.
ತಿಥಿ: ನವಮಿ
ನಕ್ಷತ್ರ: ಭರಣಿ ನಕ್ಷತ್ರ.
ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122