ದೊಡ್ಡಬಳ್ಳಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಹಿಂದೂ ಸಮಾಜ್ಯೋತ್ಸವ (Hindu Samajotsava) ಸಮಿತಿ ಅಡಿಯಲ್ಲಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜ.28 ಮತ್ತು 29 ರಂದು ಹಿಂದೂ ಸಮಾಜೋತ್ಸವ ನಡೆಯಲಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ಹಿಂದೂ ಸಮಾಜೋತ್ಸವ ಕಾರ್ಯಕ್ರಮವು ಬರೀ ಧಾರ್ಮಿಕ ಉತ್ಸವವಲ್ಲ. ಸಮಾಜದ ಏಕತೆ, ಸಂಸ್ಕೃತಿ ಉಳಿವು ಮತ್ತು ಧಾರ್ಮಿಕ ಜಾಗೃತಿಯ ಪ್ರತೀಕವಾಗಿದ್ದು, ಎಲ್ಲಾ ಹಿಂದೂಗಳಿಗೆ ಕಾರ್ಯಕ್ರಮಕ್ಕೆ ಮುಕ್ತ ಆಹ್ವಾನವಿದೆ. ಕಾರ್ಯಕ್ರಮದ ಅಂಗವಾಗಿ ಈಗಾಗಲೇ ಜ.24ರಂದು ಭಜನೆ ಕಾರ್ಯಕ್ರಮ ನಡೆದಿದೆ. ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ದವಾಗುತ್ತಿದೆ.
ಜ. 28 ರಂದು ಸಂಜೆ 4.00ಕ್ಕೆ ಬೈಕ್ ರ್ಯಾಲಿ ನಗರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ಆರಂಭಗೊಳ್ಳುವ ಬೈಕ್ ಯಾರ್ಲಿ ಡಿ.ಕ್ರಾಸ್, ಗಾಂಧಿ ವೃತ್ತ, ತೇರಿನ ಬೀದಿ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ತಾಲ್ಲೂಕು ಕಚೇರಿ ಮೂಲಕ ಭಗತ್ ಸಿಂಗ್ ಕ್ರೀಡಾಂಗಣ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹಿಂದೂ ಬಾಂಧವರು ಹೆಲ್ಮೆಟ್ ಧರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಜ. 29ಕ್ಕೆ ಶ್ರೀ ರಾಮ ಶೋಭಾಯಾತ್ರೆ
ಜ.29 ರಂದು ಬೆಳಿಗ್ಗೆ 8 ಗಂಟೆಗೆ ತಾಲ್ಲೂಕಿನ ಎಲ್ಲಾ ಶಕ್ತಿ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ನಂತರ ಸುದರ್ಶನ ಹೋಮ ನಡೆಯಲಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಭಜನಾ ಮಂಡಳಿಗಳಿಂದ ‘ಭಕ್ತಿ ಪಾರಾಯಣ’ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ , ಪ್ರಸಾದ ವಿನಿಯೋಗವಿದೆ.
ಜ.29 ರಂದು ಮಧ್ಯಾಹ್ನ 2.30ಕ್ಕೆ ನಗರದ ನೆಲದಾಂಜನೇಯ ದೇವಾಲಯದಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ನಡೆಯಲಿದೆ.
ನಂತರ ಸಂಜೆ 5 ಗಂಟೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಸಾನಿಧ್ಯವನ್ನು ಹಂಪಿ ಹೇಮಕೂಟ ಗಾಯತ್ರಿ ಪೀಠ ಮಹಾಸಂಸ್ಥಾನ ಮತ್ತು ದೇವಾಂಗ ಜಗದ್ಗುರು ದಯಾನಂದಪುರಿ ಮಹಾಸ್ವಾಮೀಜಿ, ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ವಹಿಸಲಿದ್ದಾರೆ.
ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಡೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.