Doddaballapur: Sir CV Raman book launch

ದೊಡ್ಡಬಳ್ಳಾಪುರ: ಸರ್ ಸಿ.ವಿ.ರಾಮನ್ ಪುಸ್ತಕ ಬಿಡುಗಡೆ

ದೊಡ್ಡಬಳ್ಳಾಪುರ: ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ’ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಕನ್ನಡ ಓದುವ ಹವ್ಯಾಸವನ್ನು ಉತ್ತೇಜಿಸುತ್ತಿರುವ ಅತ್ಯಂತ ಶ್ಲಾಘನೀಯವಾಗಿದೆ ಎಂದು ಸಿ.ವಿ.ರಾಮನ್ (Sir C.V. Raman) ಪುಸ್ತಕ ಪ್ರಕಟಣೆಯ ಪ್ರಾಯೋಜಕರಾದ ಎಸ್.ಶ್ರೀಕಾಂತ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು, ವಿಕಾಸ ಪ್ರಕಾಶ ಸಂಸ್ಥೆ ಎಸ್.ರಾಜಲಕ್ಷ್ಮಿ ಸ್ಮರಣಾರ್ಥ ಪ್ರಕಟಿಸಿರುವ ನೋಬಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ.ರಾಮನ್  ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪುಸ್ತಕ ಓದುವ ಸ್ಪರ್ಧೆಯು ಜ್ಞಾನಾರ್ಜನೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ, ಪುಸ್ತಕಗಳ ಪ್ರೀತಿಯನ್ನು ಬೆಳೆಸುತ್ತದೆ. ಇಂತಹ ಕಾರ್ಯಕ್ರಮಗಳು ಓದುಗರನ್ನು ಪುಸ್ತಕಗಳ ಮೂಲಕ ಜಗತ್ತಿನ ಅರಿವು ಮೂಡಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ ಎಂದರು.

ಕನ್ನಡ ಜಾಗೃತ ಪರಿಷತ್ತು ಟ್ರಸ್ಟಿ  ಎಸ್.ಮಹಾಬಲೇಶ್ವರ್ ಮಾತನಾಡಿ,  ಮೊಬೈಲ್ ವ್ಯಸನವು ವಿದ್ಯಾರ್ಥಿಗಳಲ್ಲಿ ಓದಿನಿಂದ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ. ಇದು ಮುಖಾಮುಖಿ ಸಂವಹನವನ್ನು ಕಡಿಮೆ ಮಾಡಿ, ಸಾಮಾಜಿಕ ಪ್ರತ್ಯೇಕತೆಗೆ ಕಾರಣವಾಗುತ್ತದೆ. ಅತಿಯಾದ ಮೊಬೈಲ್ ಬಳಕೆ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಬಿ.ಗುರುದೇವ್ ಮಾತನಾಡಿ, ಸರ್ ಸಿ.ವಿ. ರಾಮನ್ ಅವರು ಅಸಾಧಾರಣ ಸಮಯಪ್ರಜ್ಞೆ ಮತ್ತು ಕಟ್ಟುನಿಟ್ಟಿನ ಶಿಸ್ತಿಗೆ ಹೆಸರಾಗಿದ್ದರು.  ಸಿ.ವಿ.ರಾಮನ್ ಜೀವನದ ಕೊನೆಯವರೆಗೂ ಸಂಶೋಧನೆ ಮತ್ತು ಅಧ್ಯಯನದಲ್ಲಿ ನಿರತರಾಗಿ, ಶಿಸ್ತಿನ ಪ್ರತಿರೂಪವಾಗಿ ಬದುಕಿದವರು. 

ರಾಮನ್ ಅವರ ಜನಪ್ರಿಯ ಆವಿಷ್ಕಾರ ‘ರಾಮನ್ ಎಫೆಕ್ಟ್’ ಪ್ರಕಟವಾದ ದಿನದ ನೆನಪಿಗಾಗಿ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.

ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮಾತನಾಡಿ,  ಶ್ರೀ ಕೊಂಗಾಡಿಯಪ್ಪ. ವಿದ್ಯಾಸಂಸ್ಥೆಯ ನಿರ್ದೇಶಕಿಯಾಗಿದ್ದ ಎಸ್.ರಾಜಲಕ್ಷ್ಮಿ ಅವರ ಸ್ಮರಣಾರ್ಥ ಸಿ.ವಿ.ರಾಮನ್ ಪುಸ್ತಕ ಪ್ರಕಟಿಸಲಾಗಿದೆ. ಈ ಪುಸ್ತಕವನ್ನು ಪುಸ್ತಕ ಓದಿ ಬಹುಮಾನ ಗೆಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ‌ಸ್ಪರ್ಧಾತ್ಮಕ ಪರೀಕ್ಷೆ  ಫೆ.22 ರಂದು ನಡೆಯಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಗೆ ನೂರು ವಿದ್ಯಾರ್ಥಿಗಳನ್ನು ಪ್ರೇರಣೆ ಮಾಡಿದವರಿಗೆ ಕನ್ನಡ ಪ್ರೇರಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಿ.ವಿ. ರಾಮನ್ ಪುಸ್ತಕ ಸಂಪಾದಕ ಮಂಡಲಿಯ ಸದಸ್ಯರುಗಳಾದ ಪಿ.ಗೋವಿಂದರಾಜು, ಎಚ್.ಎನ್.ಪ್ರಕಾಶ್, ಡಿ.ಪುಷ್ಪವತಿ, ಸಂಚಾಲಕ ಸಿ.ವೆಂಕಟರಾಜು, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ್, ನಿವೃತ್ತ ಉಪನ್ಯಾಸಕರುಗಳಾದ ಎಸ್.ಇಕ್ಬಾಲ್ ಅಹಮದ್, ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡಪರ ಸಂಘಟನೆಗಳ ಮುಖಂಡರುಗಳಾದ  ಸಂಜೀವ್ ನಾಯಕ್, ಗುರುರಾಜಪ್ಪ, ಡಿ.ವೆಂಕಟೇಶ್, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಜಿ.ಸುರೇಶ್, ಕೋದಂಡರಾಮ್, ಸಿ.ಅಣ್ಣಯ್ಯ, ರಂಗಸ್ವಾಮಯ್ಯ, ಸೂರ್ಯನಾರಾಯಣ್,  ಮುಖ್ಯಶಿಕ್ಷಕಿ ಲಕ್ಷ್ಮೀಕಾಂತಮ್ಮ, ಕರಾಟೆ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!