Abacus graduation ceremony in Doddaballapura

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯ ಗಣೇಶಪ್ಪ ಚೌಟ್ರಿಯಲ್ಲಿ ಇಂದು ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದಿಂದ ಪದವಿ ಪ್ರದಾನ (Abacus graduation ceremony) ಹಾಗೂ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ಅಧ್ಯಕ್ಷ ಸುಬ್ರಹ್ಮಣ್ಯ (Subramya) ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಬಾಕಸ್ ರೀತಿಯ ತರಬೇತಿಗಳು ಬಹಳಷ್ಟು ಸಹಕಾರಿ. ವಿದ್ಯಾರ್ಥಿಗಳಲ್ಲಿನ ಬುದ್ದಿಮತ್ತಿಕೆಯನ್ನು ಹೆಚ್ಚಿಸಲು ಇದು ಮುಖ್ಯ ಪಾತ್ರವಹಿಸುತ್ತದೆ.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಅಬಾಕಸ್ ತರಬೇತಿಯಿಂದ ಗಣಿತ ಪಠ್ಯಕ್ಕೆ ಬಹಳಷ್ಟು ಸಹಕಾರಿಯಾಗಿದ್ದು, ಈ ರೀತಿಯಾದ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಮಕ್ಕಳನ್ನು ಸಿದ್ದಪಡಿಸಿರುವುದು, ಅಚ್ಚುಕಟ್ಟಾದ ವ್ಯವಸ್ಥೆ ಪ್ರಶಂಸನೀಯ.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಪೋಷಕರು ವಿದ್ಯಾರ್ಥಿಗಳನ್ನು ಕೇವಲ ಪಠ್ಯ ಚಟುವಟಿಕೆಗೆ ಮಾತ್ರ ಸೀಮಿತವಾಗಿಸದೆ.‌ ಪಠ್ಯತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸಬೇಕಿದೆ. ಜೊತೆಗೆ ಉತ್ತಮವಾದ ನ್ಯೂಸ್ ಚಾನಲ್‌ಗಳನ್ನು ನೋಡಲು ಮಕ್ಕಳನ್ನು ಪ್ರೇರೇಪಿಸುವ ಕೆಲಸ ಮಾಡಬೇಕಿದೆ ಎಂದರು‌.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಈ ವೇಳೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನಗರ ಪ್ರದೇಶಕ್ಕೆ ಸೀಮಿತವಾದ ಅಬಾಕಸ್ ಅನ್ನು ಪರಿಚಯಿಸಿ, ಯಶಸ್ವಿಯಾಗಿರುವ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥೆ ಪುಷ್ಪ ಅವರ ಶ್ರಮ ಅಪಾರವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಶ್ರೀ ದೇವರಾಜ್ ಅರಸ್ ಅಂತರ ರಾಷ್ಟ್ರೀಯ ವಸತಿ ಶಾಲೆಯ ವ್ಯವಸ್ಥಾಪಕ ಎಸ್. ರವಿಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪದವಿ ಪಡೆಯಲು 21 ವಯಸ್ಸಾಗಿರಬೇಕು. ಅಂತದರಲ್ಲಿ ಅಬಾಕಸ್ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿ ಕೇವಲ 12 ರಿಂದ 13 ವಯಸ್ಸಿಗೆ ಪದವಿ ಪಡೆಯುತ್ತಿರುವುದು ಪ್ರಶಂಸನೀಯ ಎಂದರು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಅಬಾಕಸ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್‌‌ಕಮಲ್ ಸ್ವರ್ಣಾಕರ್ ಮಾತನಾಡಿ, ಐದು ಮಕ್ಕಳಿಂದ ಆರಂಭವಾದ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರ ಇಂದು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದು ಹಾಗೂ ಹೆಚ್ಚು ಮಕ್ಕಳಿಗೆ ತರಬೇತಿ ನೀಡುತ್ತಿರುವುದು, ತರಬೇತಿ ಮುಗಿಸಿದ 27 ಮಕ್ಕಳಿಗೆ ಪದವಿ ವಿತರಣೆ ಪ್ರಶಂಸನೀಯ.

ರಾಷ್ಟ್ರ ಮಟ್ಟದಲ್ಲಿ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಮಾದರಿಯಾಗಿದೆ. ಗ್ರಾಮಾಂತರ ಪ್ರದೇಶವಾದರೂ ಕೂಡ, ಮಕ್ಕಳ ಸಾಧನೆ, ಪೋಷಕರ ಆಸಕ್ತಿ ಯಾವ ಜಿಲ್ಲಾ ಕೇಂದ್ರಗಳಿಗೆ ಕಡಿಮೆ ಇಲ್ಲದಂತಿದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಅಬಾಕಸ್ ತರಬೇತಿ ಕುರಿತು ಪೋಷಕರಾದ ಕೆ.ಪಿ‌. ಮಧುಶ್ರೀ, ಕೆ.ಟಿ. ರಾಮಮೂರ್ತಿ, ದಿವ್ಯ, ಭೈರಮ್ಮ, ಸಂಜೀವ್ ರಾಜ್, ಉಮ್ಮೇ ಸಾಧಿಯ ಅವರು ಅಭಿಪ್ರಾಯ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ 27 ಮಕ್ಕಳಿಗೆ ಪದವಿ ವಿತರಣೆ ಮಾಡಲಾಯಿತು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಕಾರ್ಯಕ್ರಮದಲ್ಲಿ ಎಂಎಸ್‌ವಿ ಶಾಲೆಯ ಉಪಾಧ್ಯಕ್ಷ ಸ್ವರೂಪ್, ಉದ್ಯಮಿ ಸುಮಲತಾ ರಾಮಕೃಷ್ಣಪ್ಪ, ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥೆ ವಿ.ಎ.ಪುಷ್ಪ ಸೇರಿದಂತೆ ನೂರಾರು ಮಂದಿ ಪೋಷಕರು, ವಿದ್ಯಾರ್ಥಿಗಳು ಇದ್ದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!