ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Land as the sixth guarantee: DCM D.K. Shivakumar promises

ರಾಯಚೂರು: “ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ ಅವಕಾಶ ಕೊಟ್ಟರೆ ಪೋಲಾಗುತ್ತಿರುವ 30 ಟಿಎಂಸಿ ತುಂಗಭದ್ರಾ ನೀರನ್ನು ನಿಲ್ಲಿಸಿ, ಈ ಭಾಗದ ರೈತರು, ಜನರಿಗೆ ನ್ಯಾಯ ಒದಗಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಭರವಸೆ ನೀಡಿದರು.

ರಾಯಚೂರು ಉತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

“ನಿಮ್ಮ ಜಿಲ್ಲೆಯ ಶಾಸಕರು ನನ್ನ ಮೇಲೆ ಒತ್ತಡ ತಂದು, ಕಾಲುವೆಗಳ ಕೊನೆ ಭಾಗದವರೆಗೂ ನೀರು ಹರಿಯುವಂತೆ ಮಾಡಲು ಕಾನೂನು ತರುವಂತೆ ಮಾಡಿದರು. ಕಾಲುವೆಗಳ ಮೇಲ್ಬಾಗದಲ್ಲಿ ನೀರೆತ್ತುವ ಮೂಲಕ ಕೊನೆ ಭಾಗದವರೆಗೆ ನೀರು ತಲುಪುತ್ತಿರಲಿಲ್ಲ. ಹೀಗಾಗಿ ನಾವು ಹೊಸ ಕಾನೂನು ತಂದಿದ್ದೇವೆ. ಕಳೆದ ಬಾರಿ ನೀರಾವರಿ ಸಚಿವನಾಗಿದ್ದಾಗ ಇಲ್ಲಿಗೆ ಬಂದಿದ್ದೆ. ಬಂಗಾರಪ್ಪನವರ ಕೆರೆಗೆ 300 ಕೋಟಿ ನೀಡಿದ್ದು ಆ ಯೋಜನೆ ಕಾರ್ಯರೂಪಕ್ಕೆ ಬರುತ್ತಿದೆ. ಟಿಬಿ ಅಣೆಕಟ್ಟಿನ ಎಲ್ಲಾ ಗೇಟ್ ಬದಲಾಯಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ನಾವು ಇನ್ನು ಮಾಡಿಯೇ ತೀರುತ್ತೇವೆ” ಎಂದು ತಿಳಿಸಿದರು.

ಗಾಂಧಿ ಹಾಗೂ ಅಂಬೇಡ್ಕರ್ ಅವರ ಹೆಸರಿನಂತೆ ಖರ್ಗೆ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಿ

“ಈ ಹಿಂದೆ ಕಾಂಗ್ರೆಸ್ ಸರ್ಕಾರದ ಮಧ್ಯಾಹ್ನ ಬಿಸಿಯೂಟ, ಮನರೇಗಾ, ಸ್ತ್ರೀಶಕ್ತಿ ಕಾರ್ಯಕ್ರಮಗಳನ್ನು ಈ ಭಾಗದಿಂದಲೇ ನಾವು ಆರಂಭಿಸಿದೆವು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೋರಾಟ ಮಾಡಿ ನಿಮ್ಮೆಲ್ಲರ ಅಭಿವೃದ್ಧಿಗೆ 371ಜೆ ಜಾರಿಗೆತಂದು ನಿಮ್ಮ ಬದುಕಿನಲ್ಲಿ ದೊಡ್ಡ ಬದಲಾವಣೆ ತಂದಿದ್ದಾರೆ. ಹೀಗಾಗಿ ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ಸ್ಮರಿಸುವಂತೆ ಈ ಭಾಗದ ಜನ ಖರ್ಗೆ ಅವರನ್ನು ಸ್ಮರಿಸಬೇಕು. ಆ ಮೂಲಕ ಖರ್ಗೆ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಬೇಕು ಎಂದು ನಿಮ್ಮಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮನವಿ ಮಾಡಿದರು.

“ಶರಣರು, ದಾಸರು, ಸಂತರ ಪರಂಪರೆಯ ನೆಲೆಬೀಡು. ರೈತರನ್ನು ಕಾಪಾಡುವ ಕೃಷ್ಣ, ತುಂಗಭದ್ರೆಯ ಬೀಡು. ಎಡೆದೊರೆ ಖ್ಯಾತಿಯ ರಾಯಚೂರು ಜಿಲ್ಲೆ ಇಡೀ ರಾಜ್ಯಕ್ಕೆ ಬೆಳಕು ಕೊಟ್ಟ ಪವಿತ್ರವಾದ ನಾಡು. ನಮ್ಮೆಲ್ಲರಿಗೂ ಉತ್ತಮವಾದ ಸೋನಾ ಮಸೂರಿ ಅಕ್ಕಿ, ಹತ್ತಿ, ಚಿನ್ನ ನೀಡುತ್ತಿರುವ ಪವಿತ್ರವಾದ ನೆಲಕ್ಕೆ ಬಂದು, ರಾಯಚೂರು ಉತ್ಸವದಲ್ಲಿ ಭಾಗಿಯಾಗಿರುವುದು ನನ್ನ ಭಾಗ್ಯ” ಎಂದರು.

“ಇದು ಪರಂಪರೆಯ ಬೇರು, ಪ್ರಗತಿಯ ಗುರಿ ಇಲ್ಲಿದೆ. ರಾಯಚೂರು ಉತ್ಸವ ನಮ್ಮೆಲ್ಲರ ಹೆಮ್ಮೆ. ಕಲೆ, ಸಂಸ್ಕೃತಿ ಸಂಗಮವೇ ರಾಯಚೂರು ಉತ್ಸವ. ಇತ್ತೀಚೆಗೆ ನಾನು ಕನಕಪುರದಲ್ಲಿ ತಾಲ್ಲೂಕು ಮಟ್ಟದ ಕನಕೋತ್ಸವ ಕಾರ್ಯಕ್ರಮ ಮಾಡಿದೆ. ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವ ಬೇಡಿಕೊಳ್ಳೋ – ಮಂಕುತಿಮ್ಮ ಎಂದು ಡಿವಿಜಿ ಅವರು ಹೇಲಿದ್ದಾರೆ. ಅದೇ ರೀತಿ 20 ವರ್ಷಗಳ ಬಳಿಕ ರಾಯಚೂರಿನಲ್ಲಿ ಈ ಉತ್ಸವವನ್ನು ಮಾಡುವ ಮೂಲಕ ನಿಮ್ಮನ್ನು ಸಂತೋಷವಾಗಿಡಲು ಈ ಪ್ರಯತ್ನ ಮಾಡಿದ್ದಾರೆ” ಎಂದು ಹೇಳಿದರು.

ಈ ನಾಡಿನ ನಾಡಿ, ಜನರ ಸೌಹಾರ್ದತೆಯನ್ನು ರಾಯಚೂರು ಜಿಲ್ಲೆಯಲ್ಲಿ ಕಾಣುತ್ತಿದ್ದೇವೆ. ಕಳೆದ ಮೂರು ದಿನಗಳಲ್ಲಿ ಲಕ್ಷಾಂತರ ಜನ ಈ ಸಂಭ್ರಮದ ಉತ್ಸವದಲ್ಲಿ ಪಾಲ್ಗೊಂಡಿದ್ದೀರಿ ಎಂದು ನಮ್ಮ ನಾಯಕರು ಹೇಳಿದ್ದು ಕೇಳಿ ಬಹಳ ಸಂತೋಷವಾಯಿತು.

ಜನಪದವೇ ನಮ್ಮೆಲ್ಲರ ಗುರುತು. ಸಂಸ್ಕೃತಿ, ಕಲೆಯೇ ನಮ್ಮೆಲ್ಲರ ಶಕ್ತಿ. ನಿಮ್ಮನ್ನು ಸಂತೋಷವಾಗಿಡುವುದು ನಮ್ಮ ಸರ್ಕಾರದ ಗುರಿ. ನಾನು ಚುನಾವಣೆ ಸಮಯದಲ್ಲಿ ಇಲ್ಲಿಗೆ ಬಂದಾಗ ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ ಎಂದು ಹೇಳಿದ್ದೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದಿದ್ದಕ್ಕೆ ಈ ಸಂತೋಷ ಬಂದಿದೆ.

ಎಲ್ಲರಿಗೂ 200 ಯೂನಿಟ್ ವರೆಗೂ ವಿದ್ಯುತ್ ಉಚಿತ, 10 ಕೆ.ಜಿ ಅಕ್ಕಿ, ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರಿಗೆ ತಿಂಗಳಿಗೆ 2 ಸಾವಿರ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಈ ಐದು ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲಾಗುತ್ತಿದೆ ಎಂದರು.

“ಆಕಾಶಕ್ಕೆ ಏಣಿ ಇಲ್ಲ, ಸಮುದ್ರಕ್ಕೆ ಸೇತುವೆ ಇಲ್ಲ. ಆದರೆ ರಾಯಚೂರು ನಾಡು, ಭತ್ತದ ಬೀಡು ನಮಗೆ ಶಕ್ತಿ ನೀಡುತ್ತಿದೆ. ಆಭರಣದ ರೂಪ ಬೇರೆಯಾದರೂ ಅದನ್ನು ಮಾಡುವ ಚಿನ್ನ ಒಂದೇ ಆಗಿದೆ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆಯಾಯವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು. ಇಲ್ಲಿ ನಾವು ಬೇರೆ ಬೇರೆ ಸಮುದಾಯದ ಜನ ಸೇರಿದ್ದೇವೆ. ಕಲೆಗಳು ಬೇರೆಯಾದರೂ ಕಲಾವಿದರೆಲ್ಲರೂ ಒಂದೇ. ಕಲಾವಿದರಿಗೆ ಜಾತಿ ಧರ್ಮದ ಬೇಧವಿಲ್ಲ. ಇದು ರೈತರ ನಾಡು. ಹಸಿದಾಗ ಅನ್ನ ಕೊಟ್ಟು, ಬದುಕಿದಾಗ ಶಿಕ್ಷಣ ನೀಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನೀವು ಹೊಸ ರೂಪ ನೀಡುತ್ತಿದ್ದೀರಿ” ಎಂದು ಹೇಳಿದರು.

“ಇದು ಚಾಲುಕ್ಯರು, ಚೋಳರು, ವಿಜಯನಗರ ಅರಸರು ಆಳಿದ ಭೂಮಿ. ಎಲ್ಲಾ ಧರ್ಮದ ನಾಯಕರು ಬಂದ ಭೂಮಿ. ನಮ್ಮ ಸರ್ಕಾರ ನಿಮ್ಮ ಜತೆಯಲ್ಲಿದೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಬದ್ಧರಾಗಿದ್ದೇವೆ. ಈ ಜಿಲ್ಲೆಯ ಆಸ್ಪತ್ರೆ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಂಕಲ್ಪ ಮಾಡಿದ್ದಾರೆ. ಈ ಭಾಗದಲ್ಲಿ ಏಮ್ಸ್ ತರಬೇಕು ಎಂದು ಪಣ ತೊಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ” ಎಂದರು.

“ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಸರ್ಕಾರ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ.14ರಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದೆಯೂ ನೀವು ಈ ಕೈ ಅನ್ನು ಅಧಿಕಾರಕ್ಕೆ ತಂದು ಶಕ್ತಿ ಕೊಡಬೇಕು” ಎಂದು ಮನವಿ ಮಾಡಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]