Milking competition in Konaghatta: D.K. Suresh launches

ಕೊನಘಟ್ಟದಲ್ಲಿ ಹಾಲು ಕರೆಯುವ ಸ್ಪರ್ಧೆ: ಡಿ.ಕೆ. ಸುರೇಶ್ ಚಾಲನೆ

ದೊಡ್ಡಬಳ್ಳಾಪುರ: ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ ಮತ್ತು ಪಶುಪಾಲನಾ ಇಲಾಖೆ ಜಂಟಿ ಆಶ್ರಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರ ತಳಿ ಪ್ರದರ್ಶನಕ್ಕೆ ಬಮೂಲ್ (Bamul) ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಚಾಲನೆ ನೀಡಿದರು.

ಕೊನಘಟ್ಟದಲ್ಲಿ ಹಾಲು ಕರೆಯುವ ಸ್ಪರ್ಧೆ: ಡಿ.ಕೆ. ಸುರೇಶ್ ಚಾಲನೆ

ಹಾಲು ಕರೆಯುವ ಸ್ಪರ್ಧೆಯಲ್ಲಿ 36 ಹಸುಗಳು ಭಾಗವಹಿಸಿದ್ದು, 45 ಲೀಟರ್ ಹಾಲು ಕರೆದ ಹಸುವಿಗೆ ಮೊದಲ ಬಹುಮಾನ, 39 ಲೀಟರ್ ಹಾಲು ಕರೆದ ಹಸುವಿಗೆ ದ್ವಿತೀಯ ಬಹುಮಾನ ಹಾಗೂ 30 ಲೀಟರ್ ಹಾಲು ಕರೆದ ಹಸುವಿಗೆ ತೃತೀಯ ಬಹುಮಾನ ನೀಡಲಾಯಿತು. ಮಾಲೀಕರನ್ನು ಸನ್ಮಾನಿಸಲಾಯಿತು.

ಕೊನಘಟ್ಟದಲ್ಲಿ ಹಾಲು ಕರೆಯುವ ಸ್ಪರ್ಧೆ: ಡಿ.ಕೆ. ಸುರೇಶ್ ಚಾಲನೆ

ಮಿಶ್ರ ತಳಿ ಪ್ರದರ್ಶನದಲ್ಲಿ ಅನೇಕ ಕರುಗಳು ಭಾಗವಹಿಸಿದ್ದು, 9 ಕರುಗಳಿಗೆ ಬಹುಮಾನ ನೀಡಲಾಯಿತು. ಅಲ್ಲದೆ ಭಾಗವಹಿಸಿದ್ದ ಎಲ್ಲಾ ಕರುಗಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ರೈತರನ್ನು ಹೈನುಗಾರಿಕೆ ಕಡೆಗೆ ಆಕರ್ಷಿಸುವ ಸಲುವಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಆ ಮೂಲಕ ಪೂರೈಕೆ ಕಡಿಮೆಯಾಗಿರುವ ಹಾಲಿನ ಉತ್ಪಾದನೆ ಹೆಚ್ಚಿಸಲು ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವಿಭಿನ ಕಾರ್ಯಕ್ರಮ ಕೈಗೊಳ್ಳಲಾಗುವುದು.

ಹಾಲಿನ ಪ್ರೋತ್ಸಾಹ ಧನವನ್ನು 5 ರೂನಿಂದ 7 ರೂಗೆ ಹೆಚ್ಚಿಸುವ ಕುರಿತು ಚಿಂತನೆ ನಡೆದಿದ್ದು,ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮಹತ್ವದ ಬದಲಾವಣೆಗಳನ್ನು ತರಲು ಬಮೂಲ್‌ ಕಾರ್ಯೋನ್ಮುಖವಾಗಿದೆ. ರೈತರು ಯಾವುದೇ ಕಾರಣಕ್ಕೂ ಹೈನುಗಾರಿಕೆಯಿಂದ ಹಿಂದೆ ಸರಿಯಬಾರದು ಎಂದು ಮನವಿ ಮಾಡಿದರು.

ಇಡೀ ದೇಶದಲ್ಲಿ ಹಾಲಿಗೆ 5 ರೂ ಪ್ರೋತ್ಸಾಹ ಧನ ನೀಡುತ್ತಿರುವ ರಾಜ್ಯ ನಮ್ಮದಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿಗೆ ಹೆಚ್ಚಿನ ದರ ನೀಡಲಾಗುತ್ತಿದೆ. ಆದರೆ ಹೈನುಗಾರಿಕೆಗೆ ನಷ್ಟದ ಕಾರಣ ಒಡ್ಡಿ ರೈತರು ಹೈನುಗಾರಿಕೆಯಿಂದ ವಿಮುಖರಾಗುತ್ತಿದ್ದಾರೆ.

ಹೈನುಗಾರಿಕೆಯಿಂದ ಸ್ವಾವಲಂಭಿ ಬದುಕು ನಡೆಸಲು ವಿಪುಲ ಅವಕಾಶಗಳಿವೆ. ಇದು ಸ್ವಯಂ ಉದ್ಯೋಗಕ್ಕೆ ದಾರಿಯಾಗಲಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸಲು ನೆರವಾಗುತ್ತದೆ. ಆದರೆ ಬೇಸಿಗೆ ಹಾಗೂ ಇತರ ಕಾರಣಗಳಿಂದಾಗಿ ಬಮೂಲ್‌ನಲ್ಲಿ ಹಾಲು ಉತ್ಪಾದನೆ 18 ಲಕ್ಷದಿಂದ 15 ಲಕ್ಷ ಲೀಟರ್ ಗಳಿಗೆ ಇಳಿದಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ 1.80 ಲಕ್ಷ ಲೀ. ನಿಂದ 1.05 ಲಕ್ಷ ಲೀಗೆ ಇಳಿದಿದೆ.

ಇಂದು ನಂದಿನಿ ಬ್ರಾಂಡ್‌ ದಿನೇ ದಿನೇ ಪ್ರಖ್ಯಾತಿ ಹೊಂದುತ್ತಿದ್ದು, ಅದಕ್ಕೆ ರೈತರ ಪರಿಶ್ರಮ ಕಾರಣವಾಗಿದೆ. ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಸಂಸ್ಥೆಯ ಏಳಿಗೆಗೆ ಶ್ರಮಿಸಿದರೆ ಅದರ ಲಾಭ ಸಹ ರೈತರ ಪಾಲಾಗುತ್ತಿದೆ.

ಹಾಲಿನ ಉತ್ಪಾದನೆ ಹೆಚ್ಚಿಸಲು ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ ಹೊಸದಾಗಿ ಹಸುಗಳನ್ನು ಖರೀದಿಸಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಲ್ಲಿನ 25 ಜನ ರೈತರಿಗೆ ಶೇ.3ರ ಬಡ್ಡಿ ದರದಲ್ಲಿ 1.60 ಲಕ್ಷ ದಿಂದ 15 ಲಕ್ಷದವರೆಗೂ ಸಾಲ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ.

ಹಸುಗಳು ಹೆಣ್ಣು ಕರು ಹಾಕಿದಾಗ ರೈತರಿಗೆ ಹೆಚ್ಚಿನ ಲಾಭವಿದ್ದು, ಈ ದಿಸೆಯಲ್ಲಿ ಕಡ್ಡಾಯವಾಗಿ ಹೆಣ್ಣು ಕರುಹಾಕುವ ಕುರಿತಾಗಿ, ತಳಿಗಳನ್ನು ಸಜ್ಜುಗೊಳಿಸಲು ಸರ್ವೆ ಮಾಡಲಾಗುತ್ತಿದೆ. ರೈತರಿಗೆ ಹಸಿ ಮೇವು ಒದಗಿಸುವುದು, 1 ಲಕ್ಷ ಕೌ ಮ್ಯಾಟ್‌ಗಳನ್ನು ಹಾಗು ಹಾಲು ಕರೆಯುವ ಯಂತ್ರಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ . ನಾಟಿ ಹಸು ಹಾಲಿಗೆ ಲೀಟರ್‌ಗೆ 90 ರೂ ನೀಡಲಾಗುತ್ತಿದ್ದು, ನಾಟಿ ಹಸು ಹಾಲಿನ ಸಂಗ್ರಹಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ರೈತರಿಗೆ 5 ದಿನ ಗಿಣ್ಣಿನ ಹಾಲು ಪಡೆಯಲು ಮಾರುಕಟ್ಟೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ನಾಡಿನ ರೈತರ ಹೆಮ್ಮೆಯ ನಂದಿನ ಉತ್ಪನ್ನಗಳನ್ನು ಬಳಸುವಂತೆ ಜನತೆಯನ್ನು ಮನವಿ ಮಾಡಿದ ಅವರು, ಇತರ ಹಾಲಿನ ಘಟಕಗಳಿಗಿಂದ ಬಮೂಲ್ ರೈತರಿಗೆ ಹೆಚ್ಚಿನ ದರ ನೀಡುತ್ತಿದೆ ಎಂದರು.

ಪ್ರಶ್ನೆಗೆ ಉತ್ತರ

ಇನ್ನೂ ಸುದ್ದಿಗಾರರ ರಾಜಕೀಯ ವಿಚಾರಗಳ ಪ್ರಶ್ನೆಗೆ ತೀಕ್ಷ್ಣ ಉತ್ತರ ನೀಡಿದ ಡಿ.ಕೆ. ಸುರೇಶ್ ಅವರು, ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಬಜೆಟ್ ನಿಂದ ರಾಜ್ಯಕ್ಕೆ ಆದ ಲಾಭ ಏನು ಎಂಬುದರ ಬಗ್ಗೆ ಮೊದಲು ಉತ್ತರ ನೀಡಬೇಕಿದೆ. ಕೇಂದ್ರ ಸರ್ಕಾರವೇ ನೇಮಿಸಿರುವ ದರ ನಿಯಂತ್ರಣ ಮಂಡಳಿ ಮೆಟ್ರೋ ದರ ಏರಿಕೆ ಮಾಡುತ್ತದೆ. ಅದನ್ನು ರಾಜಕೀಯಕ್ಕೆ ಬಳಸಿಕೊಂಡು ಮಾಧ್ಯಮಗಳ ಮುಂದೆ ಮಾತಾಡುತ್ತಾರೆ.

ನಾವು ರಾಜಕೀಯ ಮಾಡಲು ಹೋಗುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ದನಿ ಎತ್ತಬೇಕಿದೆ. ವಿವಿಧ ನೀರಾವರಿ ಯೋಜನೆಗೆ ಅನುದಾನ ನೀಡುತ್ತಿಲ್ಲ ಏಕೆ..? ಎಂದು ಪ್ರಶ್ನಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಮೂಲ್ನ ಹಾಳಿನ ಪಾಲಲಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪಾತ್ರವೂ ಮಹತ್ವದ್ದಾಗಿದೆ. ತಾಲೂಕಿನಲ್ಲಿ ನಾಲ್ಕು ವರ್ಷಗಳ ಹಿಂದೆಯೇ ಹಾಲಿನ ಟೆಟ್ರಾಪ್ಯಾಕ್ ಸೇರಿದಂತೆ ನಂದಿನಿಯ ಇತರೆ ಉತ್ಪನ್ನಗಳನ್ನು ತಯಾರಿಸಲು 15 ಎಕರೆ ಜಮೀನು ಖರೀದಿಸಲಾಗಿದೆ. ಬಮೂಲ್ ವತಿಯಿಂದ ಉತ್ಪನ್ನ ತಯಾರಿಕ ಘಟಕ ಸ್ಥಾಪನೆಗೆ ಅನುದಾನ ನೀಡಬೇಕು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಗಳಾಗಿ ಅದನ್ನು ಉದ್ಘಾಟಿಸಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್‌, ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿಯೂ ಹಾಲಿನ ಉತ್ಪನ್ನಗಳ ಘಟಕ ಸ್ಥಾಪಿಸಲು ಜಮೀನುಗಳನ್ನು ಮೀಸಲಿರಿಸಲಾಗಿದೆ. ಈ ಕುರಿತು ಬಮೂಲ್‌ ಕಾರ್ಯಕಾರಿ ಸಭೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ರೈತರು ಹಸುಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಯಾವುದೇ ಆತಂಕವಿಲ್ಲದೇ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಸಂಸದ ಕೆ. ಸುಧಾಕರ್, ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರದ ವಕೀಲ ಹಾಗೂ ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ ಸದಸ್ಯ ದೀಪು ಸಿ.ಆರ್., ಪಿಎಲ್ಡಿ ಬ್ಯಾಂಕ್ ನಿರ್ದೇಶಕ ವಿಶ್ವಾಸ್ ಗೌಡ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!