Awareness about heart attack is necessary: ​​Dr. Vijayakumar

ಹೃದಯಾಘಾತದ ಬಗ್ಗೆ ಜಾಗೃತಿ ಅಗತ್ಯ: ಡಾ.ವಿಜಯಕುಮಾರ್

ದೊಡ್ಡಬಳ್ಳಾಪುರ: ಹೃದಯಾಘಾತದಿಂದ (Heart attack) ಸಾವನ್ನಪ್ಪುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಆತಂಕಗೊಳ್ಳಬೇಕಿಲ್ಲ. ಹೃದಯದ ಕಾಯಿಲೆಗಳನ್ನು ತಡೆಗಟ್ಟಲು ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡುವುದು ಅತ್ಯಗತ್ಯವಾಗಿದ್ದು, ಮುಂಜಾಗ್ರತೆಯಿಂದ ಪ್ರತಿಯೊಬ್ಬರೂ ನಿಯಮಿತ ತಪಾಸಣೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಮುದಾಯ ಆರೋಗ್ಯ ತಜ್ಞರಾದ ಡಾ.ಎಚ್‌.ಜಿ.ವಿಜಯಕುಮಾರ್ (Dr. Vijayakumar) ತಿಳಿಸಿದರು.

ನಗರದ ಬಸ್‌ ನಿಲ್ದಾಣದ ಬಳಿಯಿರುವ ಮಹಿಳಾ ಸಮಾಜ ಕಸ್ತೂರಿ ಬಾ ಶಿಶು ವಿಹಾರದ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಹೃದಯಾಘಾತ ಮತ್ತು ತುರ್ತು ಚಿಕಿತ್ಸೆ ಜಾಗೃತಿ ಮತ್ತು ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ದೇಹದ ಅತಿ ಪ್ರಮುಖ ಅಂಗವಾಗಿರುವ ಹೃದಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಇತ್ತೀಚೆಗೆ ಸಂಭವಿಸುತ್ತಿರುವ ಸಾವಿನ ಪ್ರಕರಣಗಳಲ್ಲಿ ಹೃದಯಾಘಾತದ ಕಾರಣಗಳೇ ಹೆಚ್ಚಾಗುತ್ತಿರುವುದು ಗಂಭೀರವಾದ ವಿಚಾರ.

ಕಿಡ್ನಿ, ಕಣ್ಣು, ಕೈ, ಕಾಲು ಮೊದಲಾದ ಅಂಗಗಳಿಗೆ ಮತ್ತೊಂದು ಬದಲಿ ಇವೆ. ಆದರೆ ಹೃದಯಕ್ಕೆ ಯಾವುದೇ ಬದಲಿ ಇಲ್ಲ. ನಿರಂತರವಾಗಿ ಕಾರ್ಯಾ ನಿರ್ವಹಿಸುವ ದೇಹದ ಒಂದೇ ಅದು ಹೃದಯ. ಇದು ವಿಶ್ರಾಂತಿ ಪಡೆದರೆ ಸಾವು ಖಚಿತ. ಈ ದಿಸೆಯಲ್ಲಿ ಹೃದಯಕ್ಕೆ ಮಾರಕವಾಗಿರುವ ಅಂಶಗಳನ್ನು ಅನುಸರಿಸದೇ ಇರುವುದು ಒಳ್ಳೆಯದು. ಹೃದಯಾಘಾತ ಸಂಭವಿಸಿದಾಗ ಆಸ್ಪತ್ರೆಗೆ ಹೋಗುವುದು ಮುಖ್ಯ, ಆದರೆ ಅದಕ್ಕಿಂತ ಮುಂಚೆ ನಮ್ಮ ಸಮುದಾಯದಲ್ಲಿ ಪ್ರತಿಯೊಬ್ಬರಿಗೂ ಪ್ರಥಮ ಚಿಕಿತ್ಸೆಯ ಅರಿವು ಇರಬೇಕು.

ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಬರುವವರೆಗೆ ನಾವು ಮಾಡುವ ಸಣ್ಣ ಸಹಾಯ ಒಬ್ಬರ ಜೀವ ಉಳಿಸಬಹುದು. ರಕ್ತದೊತ್ತಡ, ಮಧುಮೇಹ ಇರುವವರಿಗೆ ಹೃದಯಾಘಾತದ ಅಪಾಯ ಹೆಚ್ಚು.ಈ ನಿಟ್ಟಿನಲ್ಲಿ 30 ವರ್ಷ ದಾಟಿದ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆಯಾದರೂ ತಪಾಸಣೆ ಮಾಡಿಸಿಕೊಳ್ಳಬೇಕು.

ಧೂಮಪಾನ, ಮದ್ಯಪಾನಗಳನ್ನು ತ್ಯಜಿಸಬೇಕು. ಪೌಷ್ಟಿಕಯುಕ್ತ ವಾಹಾರಗಳನ್ನು ಸೇವಿಸಬೇಕು. ಜಂಕ್ ಫುಡ್ಗಳ ಸೇವನೆ ಬೇಡ. ದಿನಕ್ಕೆ ಕನಿಷ್ಠ 30 ನಿಮಿಷಗಳಾದರೂ ನಡೆಯುವುದು, ಯೋಗ, ಅಥವಾ ಯಾವುದೇ ದೈಹಿಕ ಚಟುವಟಿಕೆಯನ್ನು ರೂಢಿಸಿಕೊಳ್ಳಿ. ಇದು ನಿಮ್ಮ ಹೃದಯದ ಸ್ನಾಯುಗಳನ್ನು ಬಲಪಡಿಸುತ್ತದೆ. ಒತ್ತಡದ ಬದುಕು ಸಹ ಹೃದಯದ ಆರೋಗ್ಯಕ್ಕೆ ಘಾಸಿ ಮಾಡುತ್ತದೆ.

ಧ್ಯಾನ ಮಾಡುವುದು, ಸಂಗೀತ ಕೇಳುವುದು, ಅಥವಾ ಹವ್ಯಾಸಗಳಲ್ಲಿ ತೊಡಗುವ ಮೂಲಕ ಒತ್ತಡವನ್ನು ಕಡಿಮೆ ಮಾಡಬೇಕಿದೆ. ವಿಶೇಷವಾಗಿ ಕುಟುಂಬದ ಜವಾಬ್ದಾರಿ ಹೊತ್ತಿರುವ ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದರು.

ಕನ್ನಡ ವೈದ್ಯ ಬರಹಗಾರರ ಉಪ ಸಮಿತಿಯ ಡಾ. ಇಂದಿರಾ ಶ್ಯಾಮ ಪ್ರಸಾದ್‌ ಮಾತನಾಡಿ, ಕ್ಯಾನ್ಸರ್ ಎಂಬುದು ಕೇವಲ ಕಾಯಿಲೆಯಲ್ಲ, ಅದು ಸಮಯಕ್ಕೆ ಸರಿಯಾಗಿ ಪತ್ತೆಯಾಗದಿದ್ದರೆ ಜೀವಕ್ಕೆ ಕಂಟಕವಾಗುವ ರೋಗ. ಆದರೆ, ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದರೆ ಇದನ್ನು ಖಂಡಿತವಾಗಿಯೂ ಗುಣಪಡಿಸಬಹುದು. ಭಾರತದಲ್ಲಿ ಮಹಿಳೆಯರಲ್ಲಿ ಮುಖ್ಯವಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್ ಈ ಮೂರು ವಿಧದ ಕ್ಯಾನ್ಸರ್‌ಗಳು ಹೆಚ್ಚಾಗಿ ಕಂಡುಬರುತ್ತವೆ.

ಸ್ತನದಲ್ಲಿ ಅಥವಾ ಕಂಕುಳಿನ ಭಾಗದಲ್ಲಿ ನೋವಿಲ್ಲದ ಗಡ್ಡೆಗಳು., ಸ್ತನದ ಗಾತ್ರ ಅಥವಾ ಆಕಾರದಲ್ಲಿ ಅಸಹಜ ಬದಲಾವಣೆ, ಅಸಹಜ ಯೋನಿ ರಕ್ತಸ್ರಾವ ಹೊಟ್ಟೆಯಲ್ಲಿ ನಿರಂತರ ನೋವು ಅಥವಾ ಅತಿಯಾದ ಸುಸ್ತು. ವಿವರಿಸಲಾಗದ ತೂಕ ಇಳಿಕೆಗಳು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಬೇಕಿದೆ.

ಪ್ರತಿ ತಿಂಗಳು ಮಹಿಳೆಯರು ತಾವೇ ಸ್ತನ ಪರೀಕ್ಷೆ ಮಾಡಿಕೊಳ್ಳಬೇಕು. 40 ವರ್ಷ ದಾಟಿದ ಮಹಿಳೆಯರು ವರ್ಷಕ್ಕೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದು ಸೂಕ್ತ. ಎಳೆಯ ಹೆಣ್ಣುಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್‌ಪಿವಿ ಲಸಿಕೆ ಕೊಡಿಸುವುದು ಉತ್ತಮ. ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ ಮತ್ತು ತಂಬಾಕಿನಿಂದ ದೂರವಿರುವುದು ಅತ್ಯಗತ್ಯ.

ಮುನ್ನೆಚ್ಚರಿಕೆ ಚಿಕಿತ್ಸೆಗಿಂತ ಮೇಲು. ನಾಚಿಕೆ ಅಥವಾ ಭಯದಿಂದ ಲಕ್ಷಣಗಳನ್ನು ಮುಚ್ಚಿಡಬೇಡಿ. ಕ್ಯಾನ್ಸರ್ ಬಗ್ಗೆ ಅರಿವು ಹೊಂದೋಣ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸೋಣ ಎಂದು ಕರೆ ನೀಡಿದರು.

ಸ್ತ್ರೀ ರೋಗ ತಜ್ಞರಾದ ಡಾ. ಮಾಲಾ ವಿಜಯ ಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಕ್ಯಾನ್ಸರ್ ತಡೆಗಟ್ಟುವ ಲಸಿಕೆಗಳ ಕುರಿತು ಮಾಹಿತಿ ನೀಡಿ, ಗರ್ಭಕಂಠದ ಕ್ಯಾನ್ಸರ್ ತಡೆಯಲು ಇಂದು ಎಚ್‌ಪಿಪಿ ಮಲಸಿಕೆಯಿದೆ, ಹೆಪಟೈಟಿಸ್ ಬಿ ಲಸಿಕೆ ಇದು ಯಕೃತ್ತಿನ ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಕ್ಯಾನ್ಸರ್ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ಅದು ಬರದಂತೆ ತಡೆಯುವುದು ಸುಲಭ ಮತ್ತು ಸುರಕ್ಷಿತ. ಬರಿ ಲಸಿಕೆ ಹಾಕಿಸಿಕೊಂಡರೆ ಸಾಲದು, 30 ವರ್ಷ ದಾಟಿದ ಪ್ರತಿಯೊಬ್ಬ ಮಹಿಳೆಯೂ ನಿಯಮಿತವಾಗಿ ಪ್ಯಾಪ್ ಸ್ಮೀಯರ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ತುರ್ತು ಚಿಕಿತ್ಸಾ ವಿಭಾಗ ಪರಿಣಿತರಾದ ಡಾ.ಮಹೇಶ್ ಮೈಲಾರಪ್ಪ ಮಾತನಾಡಿದರು.

ಮಹಿಳಾ ಸಮಾಜದ ಅಧ್ಯಕ್ಷೆ ಎಂ.ಕೆ. ವತ್ಸಲ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ ವಿ.ನಿರ್ಮಲ, ಗೌರವ ಕಾರ್ಯದರ್ಶಿ ಬಿ.ಎ.ಗಿರಿಜ, ಸಹ ಕಾರ್ಯದರ್ಶಿ ಎಸ್.ವೀಣಾ, ಖಜಾಂಚಿ ಬಿ.ಸಿ.ಕವಿತ ಹಾಗೂ ನಿರ್ದೇಶಕರು ಭಾಗವಹಿಸಿದ್ದರು.

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!