Astrology: ಬುಧವಾರ, ಫೆಬ್ರವರಿ 11, 2026, ದೈನಂದಿನ ರಾಶಿ ಭವಿಷ್ಯ
ಮೇಷ ರಾಶಿ
ನಿಮ್ಮ ಮಕ್ಕಳು ನಿಮಗೆ ಸಹ ಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ.
ವೃಷಭ ರಾಶಿ
ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ.
ಮಿಥುನ ರಾಶಿ
ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ.
ಕಟಕ ರಾಶಿ
ದಿನ ನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವುದ ರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ.
ಸಿಂಹ ರಾಶಿ
ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ.
ಕನ್ಯಾ ರಾಶಿ
ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿ ನ ಸ್ಥಿತಿ ಉತ್ತಮವಾಗಿರು ತ್ತದೆ , ಕಿರಿಕಿರಿ ಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ.
ತುಲಾ ರಾಶಿ
ನಿರಾಶಾದಾಯಕ ನಡವಳಿಕೆ ಇಂದಾಗಿ ನೀವು ಯಾವುದೇ ಪ್ರಗತಿಯ ನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿಯನ್ನು ಕುಂಠಿತ ಗೊಳಿಸಿದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.
ವೃಶ್ಚಿಕ ರಾಶಿ
ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷ ವಾಗಿ ನೀವು ನಿಮ್ಮ ಪ್ರೀತಿ ಪಾತ್ರರು ಇತರ ರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ, ಎಲ್ಲರಿಗೂ ಅಸೂಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.
ಧನಸ್ಸು ರಾಶಿ
ದೂರ ಸಂಚಾರದಿಂದ ದೇಹಾಯಾಸವಾದೀತು. ವೃತ್ತಿರಂಗ ದಲ್ಲಿ ಸಮಾಧಾನಕರವಲ್ಲದ ವಾತಾವರಣ. ವಿದ್ಯಾರ್ಥಿಗಳಿಗೆ ವಿದ್ಯಾ ಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ.
ಮಕರ ರಾಶಿ
ವಾದ ವಿವಾದಗಳಿಗೆ ಕಾರಣ ರಾಗದಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ, ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆ ಗೊಳಿಸಿರಿ.
ಕುಂಭ ರಾಶಿ
ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.
ಮೀನ ರಾಶಿ
ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸ ಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು.ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು.
ತಿಥಿ: ನವಮಿ
ನಕ್ಷತ್ರ: ಅನುರಾಧ ನಕ್ಷತ್ರ.
ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122