Doddaballapur Municipal Council Budget Meeting

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ಕೆ.ಎಂ. ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ನಗರಸಭೆ (Doddaballapur Municipal Council) ವತಿಯಿಂದ 2026-27ನೇ ಸಾಲಿನ ಆಯ-ವ್ಯಯ (Budget) ಕುರಿತ ಸಾರ್ವಜನಿಕ ಸಮಾಲೋಚನೆಯ ಸಭೆ ನಗರದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ಆದರೆ ಸಭೆಯಲ್ಲಿ ಸಾರ್ವಜನಿಕರು ಗಮನಕ್ಕೆ ತಂದ ಸಮಸ್ಯೆಗಳು, ಆಡಳಿತ ಮಂಡಳಿಯ ವೈಪಲ್ಯವನ್ನು ಎತ್ತಿತೋರುವಂತಿತ್ತು.

ಹೌದು ಇಂದು ಎರಡನೇ ಬಾರಿಗೆ ನಡೆದ ಸಭೆಯಲ್ಲಿ ನಗರಸಭೆ ಬಜೆಟ್‌ನಲ್ಲಿ ಹಣ ಮೀಸಲಿಗಷ್ಟೇ ಸೀಮಿತವಾಗಿದ್ದು, ಅದರ ಬಳಕೆಯತ್ತ ಕ್ರಮ ಕೈಗೊಳ್ಳುತ್ತಿಲ್ಲ. ಸಾರ್ವಜನಿಕರಿಂದ ಸ್ವೀಕರಿಸುವ ಸಲಹೆ ಸೂಚನೆಗಳನ್ನು ಆಯವ್ಯಯದಲ್ಲಿ ಸೇರ್ಪಡೆ ಮಾಡುವಾಗ ಗಂಭೀರವಾಗಿ ಪರಿಗಣಿಸುವುದಿಲ್ಲ. ನಗರದ ನೈರ್ಮಲ್ಯ, ಪರಿಸರ ಸಂರಕ್ಷಣೆ ಮೊದಲಾಗಿ ಮೂರ್ನಾಲ್ಕು ವರ್ಷಗಳಿಂದ ನೀಡಿರುವ ಯಾವುದೇ ಸಲಹೆಗಳು ಕಾರ್ಯಾಗತವಾಗಿಲ್ಲ. ಸಾರ್ವಜನಿಕ ಸಮಾಲೋಚನಾ ಸಭೆ ನಾಮಕಾವಸ್ತೆಯಾಗುತ್ತಿದೆ. ಬಜೆಟ್ ಸಭೆಯಲ್ಲಿ ಚರ್ಚೆ ನಡೆಸುವ ವಿಚಾರಗಳು ಕಾರ್ಯಗತವಾಗಬೇಕಿದೆ ಎಂದು ಸಭೆಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಯುವ ಸಂಚಲನದ ಚಿದಾನಂದ ಮೂರ್ತಿ ಮಾತನಾಡಿ, ನಾಗರಕೆರೆ ಅಭಿವೃದ್ದಿಗೆ ಮೀಸಲಿರಿಸಿದ 10 ಲಕ್ಷ ರೂ ಅನುದಾನ ಬಳಕೆಯಾಗುತ್ತಿಲ್ಲ. ನಗರದ ಪ್ಲಕ್ಸ್ಗಳ ಹಾವಳಿಗೆ ಕಡಿವಾಣ ಹಾಕುತ್ತಿಲ್ಲ. ಜಾಹಿರಾತು ಶುಲ್ಕಗಳನ್ನು ವಸೂಲಿ ಮಾಡುತ್ತಿಲ್ಲ. ಮಳೆ ನೀರು ಕೊಯ್ಲಿಗೆ ಮೀಸಲಿರಿಸಿರುವ ಅನುದಾನ ಬಳಕೆಯಾಗಬೇಕು. ಜೀವಿ ವೈವಿದ್ಯ ಮಂಡಲಿಯೊಂದಿಗೆ ನಗರಸಭೆ ಜಲ ಮೂಲಗಳನ್ನು ಸಂರಕ್ಷಿಸಬೇಕು. ಪ್ರಸ್ತುತ ನಗರಸಭೆಯಾಗಿರುವ ದೊಡ್ಡಬಳ್ಳಾಪುರ ಪುರಸಭೆ ರೂಪುಗೊಂಡು 100 ವರ್ಷಗಳು ಸಂದಿದ್ದು, ಇದರ ಶತಮಾನೋತ್ಸವ ಆಚರಣೆ ಮಾಡಿ, ಸ್ಮರಣ ಸಂಚಿಕೆ ಹೊರತರಬೇಕು ಎಂದು ಆಗ್ರಹಿಸಿದರು.

ಕರವೇ ಮುಖಂಡರಾದ ಚಂದ್ರಶೇಖರ್, ಅನಿಕೇತನ ಟ್ರಸ್ಟ್ ಕಾರ್ಯದರ್ಶಿ ಡಿ.ಶ್ರೀಕಾಂತ ಮಾತನಾಡಿ, ಬೀದಿ ನಾಯಿಗಳ ಹಾವಳಿ ನಿಯಂತ್ರಣವಾಗುತ್ತಿಲ್ಲ. ಘನತ್ಯಾಜ್ಯವನ್ನು ಎಲ್ಲಂದರಲ್ಲಿ ಸುರಿಯುವ ನಾಗರಿಕರ ಮೇಲೆ ಮಾರ್ಷಲ್ಗಳನ್ನು ನೇಮಿಸಿ ದಂಡ ವಿಧಿಸುವ ಕುರಿತು ಕ್ರಮ ಕೈಗೊಂಡಿಲ್ಲ. ವಾಣಿಜ್ಯ ಮಳಿಗೆಗಳು ನಿರ್ಮಾಣವಾಗಿಲ್ಲ. ಸಂಚಾರಿ ದೀಪಗಳ ವ್ಯವಸ್ಥೆ ಆಗಬೇಕು. ಮುಖ್ಯವಾಗಿ ನಗರದಲ್ಲಿ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಲು ಸಿ.ಸಿ.ಟಿವಿ ಕ್ಯಾಮರಾ ಅಳವಡಿಕೆಗೆ ಹಣ ಮೀಸಲಿದ್ರೂ ಆಗುತ್ತಿಲ್ಲ ಎಂದರು.

ಮುಖಂಡರಾದ ಗಂಗರಾಜು ಶಿರವಾರ, ರಾಜು ಸಣ್ಣಕ್ಕಿ ಮಾತನಾಡಿ, ರಸ್ತೆ ಅಗಲೀಕರಣಕ್ಕೆ ಅನಧಿಕೃತವಾಗಿ ಒತ್ತುವರಿ ಮಾಡಿರುವವರನ್ನು ತೆರವು ಮಾಡುವುದು ಕಷ್ಟಸಾಧ್ಯವಲ್ಲ. ನಗರಸಭೆಗೆ ಆದಾಯ ತರುವ ಕಲ್ಯಾಣ ಮಂದಿರಗಳು, ಪೆಟ್ರೋಲ್ ಬಂಕ್ಗಳು ಮೊದಲಾದ ವಾಣಿಜ್ಯ ಸಂಕೀರ್ಣಗಳಲ್ಲಿ ತೆರಿಗೆ ವಸೂಲಾತಿ, ಘನತ್ಯಾಜ್ಯ ನಿರ್ವಹಣೆ ಶುಲ್ಕಗಳನ್ನು ವಸೂಲಿ ಮಾಡಬೇಕು.

ಪೌರ ಕಾರ್ಮಿಕರಿಗೆ ಉಪಹಾರ ನೀಡುವುದಕ್ಕೆ ಶೇ.24.10 ಅನುದಾನದ ಬಳಕೆ ಮಾಡುವುದು ಸರಿಯಲ್ಲ. ಈ ಬಗ್ಗೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದರು.

ಓಬದೇನಹಳ್ಳಿ ಬಳಿ ಮೀಸಲಿರಿಸಿದ ನಗರಸಭೆ ಜಾಗದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಲುಇರುವ ಅಡೆತಡೆಗಳನ್ನು ನಿವಾರಿಸಿ, ಶೀಘ್ರ ನಿರ್ಮಾಣ ಮಾಡಬೇಕು ಎಂದು ಮುಖಂಡರಾದ ಚೌಡರಾಜ್ ಸಲಹೆ ನೀಡಿದರು.

ಕಸಾಪ ಮಾಜಿ ಅಧ್ಯಕ್ಷೆ ಪ್ರಮೀಳಾ ಮಹಾದೇವ್ ಮಾತನಾಡಿ, ಮಹಿಳಾ ಸಮಾಜ ಸ್ಥಾಪಕಿ ಭೀಮಕ್ಕ ಅವರ ಹೆಸರನ್ನು ನಗರದ ಯಾವುದಾದರೂ ರಸ್ತೆಗೆ ಹೆಸರಿಡಬೇಕು. ಬಜೆಟ್ನ ಪ್ರತಿ ಸಿದ್ದಗೊಳಿಸುವಾಗ ಲೋಪಗಳಾಗದಂತೆ ಎಚ್ಚರ ವಹಿಸಬೇಕು ಎಂದರು.

ಸಭೆಯಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ನಗರದ ಸ್ವಚ್ಛತೆ, ಪರಿಸರ, ರಸ್ತೆ ಅಗಲೀಕರಣ, ಸಿಸಿಟಿವಿ ಅಳವಡಿಕೆ ಭದ್ರತೆ ಮೊದಲಾದ ವಿಚಾರಗಳಲ್ಲಿ ಸಾರ್ವಜನಿಕರ ಸಲಹೆಗಳನ್ನು ನಗರಸಭೆ ಗಂಭೀರವಾಗಿ ಪರಿಗಣಿಸಬೇಕಿದೆ. ನಗರಸಭೆಗೆ ಬರುವ ಆದಾಯ ಮೂಲಗಳನ್ನು ನಿರ್ಲಕ್ಷಿಸದೇ ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ.

ನಗರದಲ್ಲಿ ಎಲ್ಲಂದರಲ್ಲಿ ಬಿಸಾಡುತ್ತಿರುವ ಕಸದ ನಿರ್ವಹಣೆಗೆ ಹೆಚ್ಚಿನ ಗಮನ ಹರಿಸಬೇಕಿದೆ. ನಾಗರಿಕರಿಂದ ನಗರಸಭೆಗೆ ಗ್ರಂಥಾಲಯ, ಆರೋಗ್ಯ, ಬಿಕ್ಷುಕರು, ಸಾರಿಗೆ ಮೊದಲಾದ ಕರವನ್ನು ತೆರಿಗೆಯೊಂದಿಗೆ ಕಟ್ಟಿಸಿಕೊಂಡು ಸಂಬಂಧಿಸಿದ ಇಲಾಖೆಗೆ ನೀಡಲಾಗುತ್ತಿದೆ. ಆದರೆ ಆಯಾ ಇಲಾಖೆಗಳಿಂದ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ಪೌರಾಯುಕ್ತ ಆರ್.ಕಾರ್ತಿಕೇಶ್ವರ, ಸರ್ವ ಸದಸ್ಯರ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಲಾಗುವುದು. ಬಜೆಟ್ನಲ್ಲಿ ಹಣ ಮೀಸಲಿಟ್ಟಾಗ ಮಾತ್ರಮ ವಿವಿಧ ಯೋಜನೆಗಳಿಗೆ ಬಳಕೆ ಮಾಡಲು ಸಾಧ್ಯ. ಆದಷ್ಟೂ ಅನುದಾನ ಬಳಕೆಗೆ ಒತ್ತು ನೀಡಲಾಗುವುದು ನಾಗರಿಕರ ಸಲಹೆಗಳನ್ನು ಅಳವಡಿಸಿಕೊಳ್ಳಲು ಕ್ರಮ ವಹಿಸಲಾಗುವುದು ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ನಗರಸಭೆ (Doddaballapur Municipal Council) ವತಿಯಿಂದ 2026-27ನೇ ಸಾಲಿನ ಆಯ-ವ್ಯಯ (Budget) ಕುರಿತ ಸಾರ್ವಜನಿಕ ಸಮಾಲೋಚನೆಯ ಸಭೆ ನಗರದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ಆದರೆ

[ccc_my_favorite_select_button post_id="119326"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!