Tamannaah Bhatia becomes Mysore Sandal's brand ambassador

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಬೆಂಗಳೂರು: ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು ತಿಳಿಗೆಂಪು ಬಣ್ಣದ ಐಕಾನಿಕ್ ಮೈಸೂರು ಸಿಲ್ಕ್ ಸೀರೆ.

ಇದಕ್ಕೆಲ್ಲ ಕಾರಣವಾಗಿದ್ದು ನಾಡಿನ ಮತ್ತೊಂದು ಐಕಾನಿಕ್‌ ಉತ್ಪನ್ನ ಮೈಸೂರು ಸ್ಯಾಂಡಲ್‌ ಸೋಪ್!‌ ಇವೆಲ್ಲ ಸೇರಿಕೊಂಡು, ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಮಂಗಳವಾರ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು ತಾಜ್‌ ವೆಸ್ಟ್‌ ಎಂಡ್‌ ಹೋಟೆಲಿನ ಝಗಮಗಿಸುವ ಸಭಾಂಗಣ.

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಹೌದು, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್‌ಡಿಎಲ್‌, ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಹಾಲುಬಣ್ಣದ ಬೆಡಗಿ ತಮನ್ನಾ ವಿಶೇವಾಗಿ ಸಿದ್ಧಪಡಿಸಿದ್ದ ವೇದಿಕೆ‌ ಮೇಲೆ ಬೆಳಕಿನ ಹೊನಲಿನಲ್ಲಿ ನಗೆ ಸೂಸುತ್ತ ಪ್ರತ್ಯಕ್ಷರಾದರು.
ಹೊಚ್ಚಹೊಸ ಪ್ಯಾಕ್‌ನ ರೂಪ ತಾಳಿರುವ ಮೈಸೂರು ಸ್ಯಾಂಡಲ್‌ ಸೋಪ್‌ ಜತೆಗೆ ಸಂಸ್ಥೆಯ 57 ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಹೀಗೆ ನವನವೀನ ಪ್ಯಾಕಿಂಗ್‌ ಪಡೆದುಕೊಂಡಿರುವ ಉತ್ಪನ್ನಗಳಲ್ಲಿ ಗಂಧದ ಎಣ್ಣೆ, ಮಲ್ಲಿಗೆ (ಜಾಸ್ಮೀನ್)‌ ಪರಿಮಳದ ಸೋಪು, ಸುಗಂಧದ್ರವ್ಯ, ಟೂತ್‌ ಪೇಸ್ಟ್‌, ಕೊಬ್ಬರಿ ಎಣ್ಣೆ, ಪೆಟ್ರೋಲಿಯಂ ಜೆಲ್ಲಿ, ಸಾವಯವ ಉತ್ಪನ್ನಗಳವರೆಗೆ 60 ಉತ್ಪನ್ನಗಳಿವೆ. ಇದರೊಂದಿಗೆ ಕೆಎಸ್‌ಡಿಎಲ್‌ನ ಮುಂದಿನ ಹಾದಿ ಅಲ್ಲಿ ತೆರೆದುಕೊಂಡಿತು. ಜೊತೆಯಲ್ಲೇ ತಮನ್ನಾ ಸಂಸ್ಥೆಯ ಪರವಾಗಿ ನಡೆಸಿರುವ ಪ್ರಚಾರದ ಹತ್ತಾರು ಜಾಹೀರಾತುಗಳು ಕೂಡ ಬಿಡುಗಡೆಯಾದವು. ಇದೇ ಸಂದರ್ಭದಲ್ಲಿ ಸಂಸ್ಥೆಯ ಇತಿಹಾಸವನ್ನು ಕಟ್ಟಿಕೊಡುವ ʻಸುಗಂಧ ಸಿರಿʼ ಮತ್ತು ʻಅರೋಮ್ಯಾಟಿಕ್‌ ಜರ್ನೀಸ್ʼ ಕಾಫಿ ಟೇಬಲ್‌ ಪುಸ್ತಕಗಳ ಲೋಕಾರ್ಪಣೆಯೂ ನೆರವೇರಿತು.

ಸಾಂಪ್ರದಾಯಿಕವಾಗಿ ಕಂಗೊಳಿಸುತ್ತಿದ್ದ ತಮನ್ನಾ ಮಾತನಾಡಿ, ʻಮೈಸೂರು ಸ್ಯಾಂಡಲ್‌ ಸೋಪು ಕೇವಲ ಒಂದು ಸಾಬೂನಲ್ಲ. ಇದರೊಂದಿಗೆ ಭಾವನೆಗಳು, ಬಾಲ್ಯ ಮತ್ತು ಸುಮಧುರ ನೆನೆಪುಗಳೆಲ್ಲ ಹೆಣೆದುಕೊಂಡಿವೆ. ಇದು ಪರಿಪೂರ್ಣತೆ ಮತ್ತು ಸತ್ಯಗಳ ಸಂಗಮ. ಮಾರುಕಟ್ಟೆಯಲ್ಲಿ ಇದಕ್ಕೆ ಸಾಟಿಯಾದ ಇನ್ನೊಂದು ಸೋಪ್‌ ಇಲ್ಲ. ಮೈಸೂರು ಸ್ಯಾಂಡಲ್‌ ಸೋಪ್‌ಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಮುಂದಿನ ಎರಡು ವರ್ಷ ನಾನು ಈ ಗುಣಮಟ್ಟದ ಉತ್ಪನ್ನಗಳ ರಾಯಭಾರಿಯಾಗಿ ಕೆಲಸ ಮಾಡಲಿದ್ದೇನೆ,ʼ ಎಂದು ಬಣ್ಣಿಸಿದರು.

ಬಳಿಕ ಮಾತನಾಡಿದ ಸಚಿವ ಎಂ ಬಿ ಪಾಟೀಲ, ʻಕೆಎಸ್‌ಡಿಎಲ್‌ ಕೇವಲ ಸ್ಯಾಂಡಲ್‌ ಸೋಪ್‌ಗೆ ಮಾತ್ರ ಸೀಮಿತವಾಗಿಲ್ಲ. ನಾವೀಗ ಜಾಸ್ಮೀನ್‌ ಪರಿಮಳದ ಐಷಾರಾಮಿ ಸೋಪನ್ನೂ ತಯಾರಿಸುತ್ತಿದ್ದೇವೆ. ಮಲ್ಲಿಗೆಯ ತೈಲ ಲೀಟರಿಗೆ 4 ಲಕ್ಷ ರೂಪಾಯಿಗೂ ಜಾಸ್ತಿ ಇದೆ. ನಮ್ಮಲ್ಲಿ ತಯಾರಾಗುವ ಈ ಸೋಪ್‌ಗೆ 400 ರೂಪಾಯಿ ಇಟ್ಟಿದ್ದೇವೆ. ಯೂರೋಪಿನ ಮಾರುಕಟ್ಟೆಯಲ್ಲಿ ಈ ತರಹದ ಸಾಬೂನಿಗೆ ಭಾರೀ ಬೇಡಿಕೆ ಇದೆ. ಇದೇ ರೀತಿಯಲ್ಲಿ ಸುಗಂಧ ದ್ರವ್ಯಗಳ ವಲಯವನ್ನೂ ಪ್ರವೇಶಿಸಿದ್ದೇವೆ. ಇದಕ್ಕಾಗಿ ಸಂಸ್ಥೆಯ ಉನ್ನತಾಧಿಕಾರಿಗಳು ಕೊಯಮತ್ತೂರು, ಕನೌಜ್‌ಗೆ ತೆರಳಿ, ಒಡಂಬಡಿಕೆ ಮಾಡಿಕೊಂಡು ಬಂದಿದ್ದಾರೆʼ ಎಂದರು.

ಜತೆಗೆ, ಕೆಎಸ್‌ಡಿಎಲ್‌ ಉತ್ಪನ್ನಗಳ ಪೈಕಿ ಸದ್ಯಕ್ಕೆ ಶೇಕಡ 1ರಷ್ಟು ಮಾತ್ರ ರಫ್ತಾಗುತ್ತಿದೆ. ಇದನ್ನು ಹೆಚ್ಚು ಮಾಡಲು ನೀಲನಕ್ಷೆ ಸಿದ್ಧಪಡಿಸಲಾಗಿದೆ. ಹೊಸ ಉತ್ಪನ್ನಗಳಲ್ಲಿ ಮಹಾರಾಜ ಮತ್ತು ಮಹಾರಾಣಿ ಸೀರೀಸ್‌ ಇವೆ. ಪರಂಪರೆಯ ಮಹತ್ವವನ್ನು ಬಿಟ್ಟುಕೊಡದೆ ಸಮಕಾಲೀನ ಅಭಿರುಚಿಯನ್ನು ಇಲ್ಲಿ ಬೆಸೆದಿದ್ದೇವೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯ ಅಧ್ಯಕ್ಷ ಸಿ ಎಸ್‌ ಅಪ್ಪಾಜಿ ನಾಡಗೌಡ ಮಾತನಾಡಿ, ʻಈ ಸಾಲಿನಲ್ಲಿ ಸಂಸ್ಥೆಯ ವಹಿವಾಟು 2,000 ಕೋಟಿ ರೂ. ಮುಟ್ಟಲಿದ್ದು, ಲಾಭವು 500 ಕೋಟಿ ರೂ. ದಾಟಲಿದೆ. ಇದಕ್ಕಾಗಿ ಆಧುನಿಕ ವಹಿವಾಟು ತಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ 3 ಕೋಟಿ ಫಾಲೋಯರ್ಸ್‌ ಹೊಂದಿರುವ, ಅಖಿಲ ಭಾರತ ಮಟ್ಟದ ವರ್ಚಸ್ಸಿರುವ ತಮನ್ನಾ ಅವರನ್ನು ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಂಡಿರುವುದು ಇದರ ಒಂದು ಭಾಗವಾಗಿದೆʼ ಎಂದಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಎಂ. ಪ್ರಶಾಂತ್‌ ಪ್ರಾಸ್ತಾವಿಕವಾಗಿ‌ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಸ್ವತಂತ್ರ ನಿರ್ದೇಶಕ ಅರವಿಂದ ಗಲಗಲಿ, ತಾಂತ್ರಿಕ ಸಲಹೆಗಾರ ರಜನೀಕಾಂತ್‌, ಶಿವಕುಮಾರ್‌, ಪ್ರತಿಮಾ ವಂದಗಾರು, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ, ಸ್ವತಂತ್ರ ನಿರ್ದೇಶಕ ಶಾಮರಾಜು ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!