Two and a half thousand crores of bribery is illegal in the Excise Department.. R. Ashoka alleges against the minister

ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ಇದು ಸರ್ಕಾರ ಪಾಪರ್‌ ಆಗಿರುವುದರ ಸಂಕೇತವಾಗಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಔಷಧಿ ಖರೀದಿಸಲು ಹಣವಿಲ್ಲ. ಪ್ಯಾರಾಸಿಟಾಮಾಲ್‌ನಿಂದ ಆರಂಭವಾಗಿ ಅಗತ್ಯವಾದ 800 ಕ್ಕೂ ಅಧಿಕ ಔಷಧಿಗಳು ಲಭ್ಯವಿಲ್ಲವೆಂದು ನಾನು 2024 ರ ಡಿಸೆಂಬರ್‌ನ ಅಧಿವೇಶನದಲ್ಲಿ ಹೇಳಿದ್ದೆ. ಆಗ ಸಚಿವ ದಿನೇಶ್‌ ಗುಂಡೂರಾವ್‌, ಕೂಡಲೇ ಔಷಧಿ ಖರೀದಿಸಲಾಗುವುದು ಎಂದು ಹೇಳಿದ್ದರು. ಇನ್ನೂ ಯಾವುದೇ ಔಷಧಿ ದಾಸ್ತಾನಿಲ್ಲ. ಈ ಮೂಲಕ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ. ಆಸ್ಪತ್ರೆಗಳ ನಿರ್ವಹಣೆಯ ಹಣದಿಂದ ಔಷಧಿ ಖರೀದಿಸುವ ದುಸ್ಥಿತಿಗೆ ಸರ್ಕಾರ ಬಂದಿದೆ. ಸಾಲ ಮಾಡಿ ಔಷಧಿ ಖರೀದಿಸುವ ಸ್ಥಿತಿ ಬಂದಿದೆ ಎಂದರು.

ಮಾರ್ಚ್‌ಗೆ ಟೆಂಡರ್‌ಗೆ ಅಂತಿಮಗೊಳಿಸಲು ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅಂದರೆ ಮೇ, ಜೂನ್‌ವರೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಬಾರದೇ ಇದ್ದರೆ ರೋಗಿಗಳು ಸಾಯಬೇಕಾಗುತ್ತದೆ. ಅಪಘಾತವಾದರೆ ಬ್ಯಾಂಡೇಜ್‌ ಕೂಡ ಸಿಗುವುದಿಲ್ಲ. ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ಅನಿವಾರ್ಯವಾಗಿ ಹೊರಗೆ ಔಷಧಿ ಖರೀದಿಗೆ ಚೀಟಿ ಬರೆದುಕೊಡುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಹೊರಗೆ ಔಷಧಿ ಖರೀದಿಗೆ ಚೀಟಿ ಬರೆಯಬಾರದೆಂದು ಸೂಚನೆ ನೀಡಲಾಗಿತ್ತು. ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲು ಸರ್ಕಾರ ಪ್ರಯತ್ನ ಮಾಡಿದೆ. ಈಗ ಜನರು ಜನೌಷಧಿ ಕೇಂದ್ರಗಳಲ್ಲೇ ಔಷಧಿ ಖರೀದಿಸುತ್ತಿದ್ದಾರೆ ಎಂದರು.

ಕಳೆದ ಬಜೆಟ್‌ನಲ್ಲಿ ಆರೋಗ್ಯ ಇಲಾಖೆಗೆ 30% ಅನುದಾನ ಕಡಿತವಾಗಿದೆ. ಐದು ಗ್ಯಾರಂಟಿಗಳಿಗಾಗಿ ಜನರಿಗೆ ನೀಡುವ ಔಷಧಿಯನ್ನು ಕೊರತೆ ಮಾಡಲಾಗಿದೆ. ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ದ್ರಾವಣ, ನೋವು ನಿವಾರಕ ಔಷಧಿ ಇಲ್ಲದೆ ಆಪರೇಶನ್‌ ಮಾಡುವುದಿಲ್ಲ ಎಂದು ಹೇಳಲಾಗಿದೆ. ಕಮಿಶನ್‌ ತರುವ ಇಲಾಖೆಗಳಿಗೆ ಗಮನ ನೀಡಿ, ಜನರ ಸಮಸ್ಯೆ ಬಗೆಹರಿಸುವ ಇಲಾಖೆಗಳನ್ನು ಕಡೆಗಣಿಸಲಾಗಿದೆ. ಇದು ಸರ್ಕಾರ ಪಾಪರ್‌ ಆಗಿರುವುದಕ್ಕೆ ಕನ್ನಡಿ ಎಂದರು.

ವಿದೇಶ ಪ್ರವಾಸ

ಪಶುಸಂಗೋಪನಾ ಸಚಿವರು ಶಾಸಕರನ್ನು ಫಾರಿನ್‌ ಟೂರ್‌ಗೆ ಕರೆದೊಯ್ಯುತ್ತಿದ್ದಾರೆ. ಸರ್ಕಾರದ ಹಣದಲ್ಲಿ ವಿದೇಶ ಪ್ರವಾಸ ಹೋಗುವುದನ್ನು ಹಿಂದೆಯೇ ತಡೆಯಲಾಗಿದೆ. ಪ್ರವಾಸ ಹೋಗಬೇಕೆಂದರೆ ಆ ನಿಯೋಗದಲ್ಲಿ ಎಲ್ಲ ಪಕ್ಷಗಳ ಸದಸ್ಯರು ಇರುತ್ತಾರೆ. ಸಚಿವರು ಕರೆದುಕೊಂಡು ಹೋಗುತ್ತಿದ್ದಾರೆ ಎಂದರೆ ಇದಕ್ಕೆ ಸರ್ಕಾರ ಅನುಮತಿ ಹೇಗೆ ನೀಡಿದೆ? ಇದಕ್ಕೆ ಯಾರು ಹಣ ಖರ್ಚು ಮಾಡುತ್ತಿದ್ದಾರೆ ಎಂದು ತಿಳಿಸಬೇಕಿದೆ. ಸ್ಪೀಕರ್‌ ಯು.ಟಿ.ಖಾದರ್‌ ಇದನ್ನು ತಡೆಯಬೇಕಿದೆ ಎಂದರು.

ಕಾಂಗ್ರೆಸ್‌ ಶಾಸಕರು ಯಾವ ಅಧ್ಯಯನ ಮಾಡಲು ಹೋಗುತ್ತಿದ್ದಾರೆ ಎಂದು ಗೊತ್ತಿಲ್ಲ. ಈಗ ಬಜೆಟ್‌ ತಯಾರಿ ನಡೆಯುತ್ತಿದ್ದು, ಶಾಸಕರು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಬೇಕಿದೆ. ಇಂತಹ ಸಮಯದಲ್ಲಿ ಸ್ವಂತ ಹಣದಲ್ಲಿ ಹೋಗುತ್ತಿದ್ದೇವೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಸ್ವಂತ ಹಣದಲ್ಲಿ ಅಧ್ಯಯನ ಪ್ರವಾಸ ಮಾಡಲು ಸಾಧ್ಯವಿಲ್ಲ. ಅಧ್ಯಯನ ಮಾಡಿದರೂ ನಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಆದರೆ ಇಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ನಿರ್ಧಾರ ಕೈಗೊಳ್ಳಲು ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಅನುಮಾನವಿದೆ. ಇದು ಒಳ್ಳೆಯ ಸಂಸ್ಕೃತಿಯಲ್ಲ. ಸರ್ಕಾರಿ ಶಾಲೆಯ ಮಕ್ಕಳು ಬಸ್‌ ಇಲ್ಲದೆ ಜೆಸಿಬಿ, ಟಿಪ್ಪರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರೆ, ಶಾಸಕರು ಎಮಿರೇಟ್ಸ್‌ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದರು.

ಅಬಕಾರಿ ಇಲಾಖೆಯ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದ್ದು, ಬಿಜೆಪಿ ಇದರ ವಿರುದ್ಧ ಹೋರಾಟ ಮಾಡುತ್ತಿದೆ. ಇದನ್ನು ತನಿಖೆ ಮಾಡದಿದ್ದರೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಏನೂ ಕೇಳಿಲ್ಲ. ಏಕೆಂದರೆ ಇದರಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ ರಾಹುಲ್‌ ಗಾಂಧಿಗೂ ಹಣ ದೊರೆಯುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ ಆರೋಪ ಬಂದಾಗ ಸಚಿವರ ರಾಜೀನಾಮೆ ಪಡೆದು ತನಿಖೆ ಮಾಡಿಸಲಾಗಿತ್ತು ಎಂದರು.

ಕಾಂಗ್ರೆಸ್‌ ಪಕ್ಷ ಹಾಗೂ ಮಾಜಿ ಪ್ರಧಾನಿ ಪಂಡಿತ್‌ ಜವಹರಲಾಲ್‌ ನೆಹರು ವಂದೇಮಾತರಂ ಗೀತೆಯ ಸಾಲುಗಳನ್ನು ಕಡಿತ ಮಾಡಿ ಹಾಡಲು ಮಾತ್ರ ಅವಕಾಶ ಮಾಡಿತ್ತು. ವಂದೇಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡುವ ಕುರಿತು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ತಿಳಿಸುತ್ತೇನೆ. ಹಾಡಿನಲ್ಲಿ ದುರ್ಗೆಯ ಹೆಸರು ಇದೆ ಎಂಬ ಕಾರಣಕ್ಕೆ ಗೀತೆಯನ್ನು ಕಡೆಗಣಿಸಲಾಗಿತ್ತು ಎಂದರು.

ಬೇರೆ ಪಕ್ಷದಿಂದ ಬಂದವರಿಗೆ ಅಧಿಕಾರ ನೀಡಲಾಗಿದೆ ಎಂದು ಡಿ.ಕೆ.ಸುರೇಶ್‌ ಬಹಳ ತಡವಾಗಿ ಹೇಳಿ ಬಂಡಾಯದ ಬಾವುಟ ಹಾರಿಸಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್‌ ಕಾದುಕೊಂಡಿದ್ದರೆ ಯಾವುದೇ ಪ್ರಯೋಜನವಿಲ್ಲ. ಮೂಲ ಕಾಂಗ್ರೆಸ್ಸಿಗರು ದಿಕ್ಕಿಲ್ಲದಂತಾಗಿದ್ದಾರೆ ಎಂದರು.

ಆರ್‌ಸಿಬಿ ಸಂಭ್ರಮಾಚರಣೆಯನ್ನು ತಪ್ಪಾಗಿ ಆಯೋಜಿಸಿದ್ದು ಕಾಂಗ್ರೆಸ್‌ ಸರ್ಕಾರದ ತಪ್ಪು. ಆದರೆ ಆರ್‌ಸಿಬಿ ಹಾಗೂ ಕ್ರಿಕೆಟ್‌ ಅಸೋಸಿಯೇಶನ್‌ ಮೇಲೆ ತಪ್ಪು ಹೊರಿಸಲಾಗಿದೆ. ಸರ್ಕಾರಕ್ಕೆ ಯೋಗ್ಯತೆ ಇದ್ದರೆ ಭದ್ರತೆ ನೀಡಲಿ ಎಂದರು.

ರಾಜಕೀಯ

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

“ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119357"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!