ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.
ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದ ಪ್ರಕರಣ ಕುರಿತು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಆದೇಶ ಪ್ರಕಟಿಸಿದ್ದಾರೆ.
ಸಾಕ್ಷಾಧಾರಗಳ ಕೊರತೆ ಮತ್ತು ಆರೋಪಪಟ್ಟಿಯಲ್ಲಿ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಕೇಜ್ರವಾಲ್, ಸಿಸೋಡಿಯಾ ಸೇರಿದಂತೆ ಇತರ 21 ಜನರನ್ನು ಖುಲಾಸೆಗೊಳಿಸಿ ಜಿತೇಂದ್ರ ಸಿಂಗ್ ತೀರ್ಪು ನೀಡಿದ್ದಾರೆ.
ಅಲ್ಲದೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅವರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು, ಯಾವುದೇ ಸಾಕ್ಷಿ ಅಥವಾ ಹೇಳಿಕೆಯಿಂದ ಬೆಂಬಲಿಸದ ಬೃಹತ್ ಆರೋಪಪಟ್ಟಿಯಲ್ಲಿ ಹಲವು ದೋಷಗಳಿವೆ ಎಂದು ನ್ಯಾಯಾಲಯ ಹೇಳಿದೆ.
ಕೋರ್ಟ್ ಅವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರವಾಲ್, ‘ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಕಳೆದ ಕೆಲವು ವರ್ಷಗಳಿಂದ ಬಿಜೆಪಿ ನಾಯಕರು ನಮ್ಮ ಮೇಲೆ ಆರೋಪ ಮಾಡುತ್ತಿದ್ದರು. ಇಂದು ನ್ಯಾಯಾಲಯವು ಈ ಎಲ್ಲಾ ಆರೋಪಗಳನ್ನು ತಿರಸ್ಕರಿಸಿದೆ. ಇದು ಸತ್ಯಕ್ಕೆ ಲಭಿಸಿದ ಗೆಲುವು’ ಎಂದು ಭಾವುಕರಾಗಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಪಕ್ಷದ (ಎಎಪಿ) ವಿರುದ್ಧ ಪಿತೂರಿ ನಡೆಸಿದ್ದರು. ಹಾಲಿ ಮುಖ್ಯಮಂತ್ರಿಯಾಗಿದ್ದ ನನ್ನನ್ನೂ ಸೇರಿದಂತೆ ಐವರು ಎಎಪಿ ನಾಯಕರನ್ನು ಬಂಧಿಸಲಾಗಿತ್ತು. ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಲಾಗಿತ್ತು. ಪ್ರತಿ ಚಾನೆಲ್ನಲ್ಲಿಯೂ ನಮ್ಮನ್ನು ಭ್ರಷ್ಟರೆಂದು ಬಿಂಬಿಸಲಾಗಿತ್ತು. ಆದರೆ, ನಾನು ಭ್ರಷ್ಟನಲ್ಲ. ನಾನು ಪ್ರಾಮಾಣಿಕತೆಯನ್ನು ಮಾತ್ರ ಗಳಿಸಿದ್ದೇನೆ. ಕೇಜ್ರವಾಲ್, ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರು ಪ್ರಾಮಾಣಿಕರು ಎಂದು ನ್ಯಾಯಾಲಯ ಹೇಳಿದೆ’ ಎಂದು ಅವರು ಕಣ್ಣೀರು ಹಾಕಿದ್ದಾರೆ.
सत्य परेशान हो सकता है,
— Aam Aadmi Party – Bihar (@AAPBihar) February 27, 2026
पराजित नहीं❗️
CBI से तुम हमें क्या डराओगे,
जब हम हैं सही‼️
ये आंसू BJP की झूठी और फ़र्ज़ी राजनीति पर भारी पड़ेंगे!✊️
आज कोर्ट ने कह दिया है कि अरविंद केजरीवाल कट्टर ईमानदार हैं, मनीष सिसोदिया कट्टर ईमानदार हैं और आम आदमी पार्टी कट्टर ईमानदार है।🤗 pic.twitter.com/FEwcGwRzAb
ದೆಹಲಿ ಅಬಕಾರಿ ನೀತಿ ಪ್ರಕರಣ ಕುರಿತು ಫೆಬ್ರುವರಿ 12ರಂದು ಸಿಬಿಐ, ಕೇಜ್ರವಾಲ್, ಸಿಸೋಡಿಯಾ ಸೇರಿದಂತೆ ಇತರ 21 ಆರೋಪಿಗಳಿಂದ ವಿವರವಾದ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.
ಪ್ರಕರಣ ದಾಖಲಾಗಿದ್ದ ವೇಳೆ ಕೇಜ್ರವಾಲ್ ಅವರು ದೆಹಲಿ ಮುಖ್ಯಮಂತ್ರಿಯಾಗಿ ಮತ್ತು ಸಿಸೋಡಿಯಾ ಅವರು ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
2022ರಲ್ಲಿ ಸಿಬಿಐ ಮೊದಲ ಚಾರ್ಜ್ಶೀಟ್ ಅನ್ನು ಸಲ್ಲಿಸಿತ್ತು. ಪ್ರಕರಣದಲ್ಲಿ ಕೇಜ್ರವಾಲ್, ಸಿಸೋಡಿಯಾ, ಕೆ. ಕವಿತಾ, ಕುಲದೀಪ್ ಸಿಂಗ್, ನರೇಂದರ್ ಸಿಂಗ್, ವಿಜಯ್ ನಾಯರ್, ಅಭಿಷೇಕ್ ಬೋಯಿನಪಲ್ಲಿ, ಅರುಣ್ ರಾಮಚಂದ್ರ ಪಿಳ್ಳೆ, ಮೂತ ಗೌತಮ್, ಸಮೀರ್ ಮಹೇಂದ್ರು, ಅಮನದೀಪ್ ಸಿಂಗ್ ಧಲ್, ಅರ್ಜುನ್ ಪಾಂಡೆ, ಬುಚ್ಚಿಬಾಬು ಗೋರ್ನಲ್ಲಾ, ರಾಜಮೋದೇಶ್ ಪ್ರಸಾದ್ ಶರ್ಮಾ, ರಾಕೇಶ ಪ್ರಸಾದ್ ಜೊನತ್ತಾ, ರಾಕೇಶ ಪ್ರಸಾದ್ ಜೊನತ್ತಾ ಸೇರಿದಂತೆ ಒಟ್ಟು 23 ಆರೋಪಿಗಳನ್ನು ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ರಾಯತ್, ಅರವಿಂದ್ ಕುಮಾರ್ ಸಿಂಗ್, ದುರ್ಗೇಶ್ ಪಾಠಕ್, ಅಮಿತ್ ಅರೋರಾ, ವಿನೋದ್ ಚೌಹಾಣ್, ಆಶಿಶ್ ಮಾಥುರ್, ಮತ್ತು ಪಿ ಶರತ್ ಚಂದ್ರಾ ರೆಡ್ಡಿ ಹೆಸರು ತಳುಕು ಹಾಕಿಕೊಂಡಿತ್ತು.
2024ರ ಮಾರ್ಚ್ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಅರವಿಂದ ಕೇಜ್ರವಾಲ್ ಅವರನ್ನು ಬಂಧಿಸಿತ್ತು.
ಈ ಆದೇಶ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ವಿರುದ್ಧ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಈ ಪ್ರಕರಣ ಕೂಡ ಸಾಕ್ಷಿಯಾಗಿದೆ ಎಂಬ ಆರೋಪ ವಿರೋಧ ಪಕ್ಷಗಳ ಮುಖಂಡರದ್ದಾಗಿದೆ.