ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

If it is written on the forehead, D.K. Shivakumar will become CM, otherwise not: D.K. Suresh

ಬೆಂಗಳೂರು: “ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, “ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು” ಎಂದು ಕೇಳಿದರು.

ತಾಳ್ಮೆಯ ಅಸ್ತ್ರ ಇದೆ ಎಂದಿದ್ದೀರಿ ಎಂದಾಗ, “ಈಗಲೂ ತಾಳ್ಮೆ ಇರಲಿ ಎಂದು ಹೇಳುತ್ತಿದ್ದೇನೆ” ಎಂದರು.

ಶಸ್ತ್ರ, ತಂತ್ರ, ಯುದ್ಧ ಇಲ್ಲದೇ ಬಗೆಹರಿಯುವುದೇ ಎಂದಾಗ, “ಇದು ರಾಜಕಾರಣ. ಇಲ್ಲಿ ಶಸ್ತ್ರ ಹಾಗೂ ಅಸ್ತ್ರ ಬೇಕಾಗಿಲ್ಲ” ಎಂದರು.

ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ

ಶಾಸಕರು ದೆಹಲಿಗೆ ತೆರಳಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಕೇಳುವ ಬಗ್ಗೆ ಪ್ರಶ್ನಿಸಿದಾಗ, “ಶಾಸಕರು ದೆಹಲಿಗೆ ಹೋಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಶಾಸಕರನ್ನೇ ಕೇಳಿ” ಎಂದರು.

ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎಂದಾಗ, “ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ್ಲ. ಇದು ಅವರ ವೈಯಕ್ತಿಕ ವಿಚಾರ. ಪಕ್ಷ ಅದನ್ನು ಗಮನಿಸಲಿದೆ” ಎಂದು ತಿಳಿಸಿದರು.

ಹೀಗೆ ಆದರೆ 2028ರ ಚುನಾವಣೆ ಪಕ್ಷಕ್ಕೆ ಕಷ್ಟವಾಗಲಿದೆ ಎಂದಾಗ, “ಚುನಾವಣೆಗೆ ಸ್ಪರ್ಧಿಸುವವರಿಗೆ ಕಷ್ಟವಾಗಬಹುದು. ನನಗೆ ಕಷ್ಟ ಆಗುವುದಿಲ್ಲ. ಈ ಬಗ್ಗೆ ನಾನೇಗೆ ಹೇಳಲಿ” ಎಂದು ತಿಳಿಸಿದರು.

ಶಾಸಕರ ಆಗ್ರಹದಲ್ಲಿ ನ್ಯಾಯ ಇದೆ ಅಲ್ಲವೇ ಎಂದು ಕೇಳಿದಾಗ, “ಶಾಸಕರ ವಿಚಾರಧಾರೆ ಅವರಿಗೆ ಹಾಗೂ ಸಂಬಂಧಿಸಿದ್ದೇ ಹೊರತು, ನನಗಲ್ಲ. ಪಕ್ಷ ಅವರ ವಿಚಾರಗಳನ್ನು ಗಮನಿಸಲಿದೆ. ನಾವು ಆ ವಿಚಾರದಲ್ಲಿ ಹೇಳಲು ಬರುವುದಿಲ್ಲ” ಎಂದರು.

ಶಿವಕುಮಾರ್ ಅವರು ಪಕ್ಷ ನನ್ನನ್ನು ಗಮನಿಸಲಿದೆ ಎಂದು ಹೇಳುತ್ತಲೇ ಇದ್ದಾರೆ ಎಂದಾಗ, “ಎಲ್ಲದಕ್ಕೂ ತಾಳ್ಮೆ ಇರಲಿ” ಎಂದರು.

ಸಿದ್ದರಾಮಯ್ಯ ಅವರನ್ನು ಬದಲಿಸುವುದಾದರೆ ದಲಿತ ಸಿಎಂ ಮಾಡಬೇಕು ಎಂಬ ಹೆಚ್.ಸಿ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಎಲ್ಲರಿಗೂ ಆಸೆ ಇದೆ. ಇದರಲ್ಲಿ ತಪ್ಪೇನಿಲ್ಲ” ಎಂದರು.

ನಿಮ್ಮ ಸಹೋದರರನ್ನು ಸಿಎಂ ಹುದ್ದೆಯಲ್ಲಿ ಕೂರಿಸಲು ನಿಮ್ಮ ಪ್ರಯತ್ನ ಹೇಗಿದೆ, ನಿಮ್ಮ ಬಳಿ ಶಾಸಕರ ಸಂಖ್ಯೆ ಹೆಚ್ಚಾಗಿದೆಯೇ ಎಂದು ಕೇಳಿದಾಗ, “ನನಗೆ ಆ ಬಗ್ಗೆ ಗೊತ್ತಿಲ್ಲ. ಶಾಸಕರ ವಿಚಾರ ಬಿಟ್ಟು ಬಮೂಲ್ ವಿಚಾರ ಏನಾದರೂ ಇದ್ದರೆ ಕೇಳಿ, ಪ್ರತಿಕ್ರಿಯೆ ನೀಡುವೆ’ ಎಂದರು.

ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ

ಮಾರ್ಚ್ 6 ರಂದು ಕೆಎಂಎಫ್ ಚುನಾವಣೆ ನಡೆಯಲಿದೆಯೇ ಎಂದು ಕೇಳಿದಾಗ, “ಚುನಾವಣೆ ಯಾವಾಗ ಮಾಡಬೇಕು ಎಂದು ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಆಗ ಪಕ್ಷ ತೀರ್ಮಾನ ಮಾಡುವ ವ್ಯಕ್ತಿಯೇ ಸ್ಪರ್ಧೆ ಮಾಡಲಿದ್ದಾರೆ” ಎಂದರು.

ನೀವು ಕೆಎಂಎಫ್ ಚುನಾವಣೆ ಆಕಾಂಕ್ಷಿ ಎಂದಾಗ, “ನಾನು ಯಾವುದಕ್ಕೂ ಆಕಾಂಕ್ಷಿ ಅಲ್ಲ” ಎಂದರು.

ರಾಜ್ಯಸಭೆಗೆ ಹೋಗುವ ಪ್ರಯತ್ನ ಇದೆಯೇ ಎಂದಾಗ, “ಇಲ್ಲ, ಅದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ರಾಜಕೀಯ ಪಂಡಿತನಲ್ಲ” ಎಂದರು.

ನನ್ನ ಪರವಾಗಿ ಯಾರು ದೆಹಲಿಗೆ ಹೋಗುವುದು ಬೇಡ ಎಂದು ಡಿಸಿಎಂ ಅವರು ಹೇಳಿರುವ ಬಗ್ಗೆ ಕೇಳಿದಾಗ, “ನಾನು ಶಿವಕುಮಾರ್ ಅವರನ್ನು ಭೇಟಿ ಮಾಡಿಲ್ಲ. ಹೀಗಾಗಿ ಈ ವಿಚಾರ ನನಗೆ ಗೊತ್ತಿಲ್ಲ” ಎಂದರು.

ಕೊಟ್ಟ ಗ್ಯಾರಂಟಿ ವಾಗ್ದಾನ ಉಳಿಸಿಕೊಳ್ಳಬೇಕು

ಗ್ಯಾರಂಟಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚಾಗಿದೆ ಎಂದು ಕೇಳಿದಾಗ, “ಗ್ಯಾರಂಟಿಯು ರಾಜ್ಯದ ಜನತೆಗೆ ಕೊಟ್ಟ ನಮ್ಮ ವಾಗ್ದಾನ. ನಾವು ಅದರಂತೆ ನಡೆಯಬೇಕು. ಪಕ್ಷದ ಅಧ್ಯಕ್ಷರು, ಸಿಎಂ ಸೇರಿದಂತೆ ಚುನಾವಣೆ ಎದುರಿಸಿದ ಎಲ್ಲರೂ ಗ್ಯಾರಂಟಿ ನೀಡುವುದಾಗಿ ಹೇಳಿದ್ದಾರೆ. ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು” ಎಂದರು.

ಗ್ಯಾರಂಟಿಗಳು ಹೊರೆ ಎಂಬ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಹೊರೆಯಾದರೂ ಆಗಲಿ, ಬೇರೆಯಾದರೂ ಆಗಲಿ. ಮಾತು ಕೊಡುವ ಮುನ್ನ ಚಿಂತನೆ ಮಾಡಬೇಕಿತ್ತು. ಮಾತು ಕೊಟ್ಟಾಗಿದೆ. ಅದರಂತೆ ನಡೆಯಬೇಕು. ಐದು ವರ್ಷಗಳ ಕಾಲ ಎಷ್ಟೇ ಕಷ್ಟ ಆದರೂ ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ಕೊಡಬೇಕು. ಅದು ನಮ್ಮ ನಂಬಿಕೆ” ಎಂದು ತಿಳಿಸಿದರು.

ಸಿರಿವಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುವುದು ಬೇಡ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿರಿವಂತರು ಇದನ್ನು ಪಡೆಯುತ್ತಿದ್ದರೆ ಅದು ತಪ್ಪು. ಬಡವರಿಗಾಗಿ ಗ್ಯಾರಂಟಿ ಯೋಜನೆ ತರಲಾಗಿದೆ. ಈ ಯೋಜನೆ ಎಲ್ಲರೂ ಬಳಸುತ್ತಿರುವ ಬಗ್ಗೆ ಕೆಲವರು ಮಾತನಾಡಿರಬಹುದು. ನಾವು ಕೊಟ್ಟಿರುವ ವಾಗ್ದಾನವನ್ನು ಅನುಷ್ಠಾನ ಮಾಡಲಾಗಿದ್ದು, ಇದರಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹಿಂದೆ ಸರಿದರೆ ಮಾತಿಗೆ ತಪ್ಪಿದಂತೆ ಆಗುತ್ತದೆ” ಎಂದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!