Religion, worship, devotion are tools to increase a person's self-confidence: DCM D.K. Shivakumar

ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಳೆಹೊನ್ನೂರು: “ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅಭಿಪ್ರಾಯಪಟ್ಟರು.

“ಆಕಾಶಾತ್ ಪತಿತಂ ತೋಯಂ ಯಥಾಗಚ್ಛತಿ ಸಾಗರಮ್ ಸರ್ವದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ. ಅಂದರೆ ಎಷ್ಟೇ ದೇವರಿಗೆ ನಮಸ್ಕಾರ ಮಾಡಿದರೂ ಸಹ ಅದು ಒಂದೇ ದೇವರಿಗೆ ತಲುಪುತ್ತದೆ, ಎಷ್ಟೇ ನದಿಗಳಿದ್ದರೂ ಅವು ಸೇರುವುದು ಒಂದೇ ಸಾಗರಕ್ಕೆ. ಶಿವನ ಲಿಂಗಕ್ಕೆ ಇದೇ ಆಕಾರ ಎಂಬುದು ಇಲ್ಲ. ಇಲ್ಲಿ ಇರುವುದು ನಮ್ಮ ಭಕ್ತಿ” ಎಂದು ಹೇಳಿದರು.

“ಒಕ್ಕಲಿಗನಾಗಿ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ನೀನು ಏಕೆ ಪ್ರಮಾಣ ವಚನ ಸ್ವೀಕಾರ ಮಾಡಿದೆ ಎಂದು ಕೇಳಿದರು. ಅದಕ್ಕೆ ನಾನು ಇದು ನನ್ನ ನಂಬಿಕೆ ಎಂದು ಹೇಳಿದೆ. ಅವರು ನನಗೆ ಆತ್ಮಬಲವನ್ನು ತುಂಬಿದ್ದಾರೆ. ರಂಭಾಪುರಿ ಶ್ರೀಗಳು ನನಗೆ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ” ಎಂದರು‌.

“ಅಜ್ಜಯ್ಯ ಅವರು ನನಗೆ ನೀಡಿದ ಸಾಕ್ಷಾತ್ಕಾರವನ್ನ ಬಹಿರಂಗ ಮಾಡಲು ಆಗುವುದಿಲ್ಲ. ಸಮಯ ಬಂದಾಗ ಪುಸ್ತಕ ರೂಪದಲ್ಲಿ ಹೊರತರುತ್ತೇನೆ” ಎಂದರು.

“ಎನ್ನ ಪರಮಗುರು ನೀವೇ, ಎನ್ನ ಗತಿ ಮತಿ ನೀವೇ, ಎನ್ನ ಅರಿವಿನ ಜ್ಯೋತಿ ನೀವೇ, ಎನ್ನ ಅಂತರಂಗ ಬಹಿರಂಗ ನೀವೇ ಕೂಡಲಸಂಗಮದೇವಾ ಎಂದು ಬಸವಣ್ಣ ಹೇಳುತ್ತಾರೆ. ಅಂದರೆ ಗುರುವಿಲ್ಲದೇ ಗುರಿ ಮುಟ್ಟಲು ಸಾಧ್ಯವಿಲ್ಲ” ಎಂದರು.

ರಂಭಾಪುರಿ ಮಠದ ಭವನಕ್ಕೆ 5 ಕೋಟಿ ರೂಪಾಯಿ

“ರಂಭಾಪುರಿ ಶ್ರೀಗಳು ನಿಂತು ಹೋಗಿದ್ದ ಭವನಕ್ಕೆ ನೀವು ಸಹಾಯ ಮಾಡಬೇಕು ಎಂದು ಹೇಳಿದ್ದರು. ನಾನು ಈ ಹಿಂದೆ ಸ್ವಲ್ಪ ಅಡಚಣೆಗಳಿವೆ ಎಂದು ತಡೆಯಲು ಹೇಳಿದ್ದೆ. ಈಗ ಸಮಯ ಒದಗಿ ಬಂದಿದೆ. 5 ಕೋಟಿ ರೂಪಾಯಿಗಳನ್ನು ನೀಡಲಾಗುವುದು‌. ನಾನೇ ಖುದ್ದಾಗಿ ಬಂದು ಅದನ್ನು ಉದ್ಘಾಟನೆ ಮಾಡುತ್ತೇನೆ” ಎಂದು ಹೇಳಿದರು.

“ವೀರಶೈವ, ಲಿಂಗಾಯತ ಧರ್ಮ ಹೋರಾಟ ನಡೆಯುತ್ತಿತ್ತು. ಆಗ ಶ್ರೀಗಳ ಪಾದಕ್ಕೆ ನಮಸ್ಕಾರ ಮಾಡಿ ನಮ್ಮಿಂದ ತಪ್ಪಾಯಿತು ಕ್ಷಮಿಸಿ ಎಂದು ನಾನು ಪ್ರಾರ್ಥಿಸಿದ್ದೆ. ಇಡೀ ರಾಜ್ಯದಲ್ಲಿಯೇ ಇದರ ಬಗ್ಗೆ ಚರ್ಚೆ, ಟೀಕೆ, ಟಿಪ್ಪಣಿಯಾಯಿತು. ಆಗ ನಾನು ಯಾರಿಗೂ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿ, ಆತ್ಮಸಾಕ್ಷಿಗೆ ಅನುಗುಣವಾಗಿ ಬದುಕಬೇಕು ಎಂದಿದ್ದೆ” ಎಂದು ಹೇಳಿದರು.

“ಧರ್ಮ ಯಾವುದಾದರೂ ಇರಲಿ, ತತ್ವ, ನಾಮ ನೂರಾರೂ ಇದ್ದರು ದೈವವೊಂದೇ. ಪೂಜೆ ಹಲವಾದರೂ ಭಕ್ತಿಯೊಂದೇ, ದೇವನೊಬ್ಬ ನಾಮ ಹಲವು. ಮಾನವಧರ್ಮಕ್ಕೆ ಜಯವಾಗಲಿ, ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಅಜ್ಜಯ್ಯ ಹೇಳಿದ್ದಾರೆ. ಅವರ ಮಾತಿನಂತೆ ನಾವೆಲ್ಲರೂ ನಡೆಯಬೇಕು. ಜೊತೆಗೆ ಸಾಹಿತ್ಯ, ಸಂಸ್ಕೃತಿ ಸಮೃದ್ದಿಯಾಗಲಿ. ಶಾಂತಿ ಸದ್ಬುದ್ದಿ ಸರ್ವರಿಗೂ ದೊರಕಲಿ, ಧರ್ಮಕ್ಕಾಗಿ ಏಳಲಿ, ಬಾಳಲಿ, ಆಳಲಿ ಎಂದಿದ್ದಾರೆ” ಎಂದರು.

“ಅಕ್ಕಿ ಹಾಗೂ ಅರಿಶಿನ ಬೇರೆ ಬೇರೆ ಇವೆರಡೂ ಬೆರೆತರೆ ಮಂತ್ರಾಕ್ಷತೆಯಾಗುತ್ತದೆ. ಅದೇ ರೀತಿ ಇಂದು ನನ್ನ ಕೈಯಿಂದ ಅನೇಕ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿಸಲಾಗಿದೆ. ಉದ್ಘಾಟನೆ ಮಾಡಿಸಲಾಗಿದೆ. ನಾವುಗಳು ಯಾರೂ ಸಹ ಇದೇ ಜಾತಿಯಲ್ಲಿ ಹುಟ್ಟುಬೇಕು ಎಂದು ಅರ್ಜಿ ಹಾಕಿ ಹುಟ್ಟುವುದಿಲ್ಲ. ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಪೂರ್ವಜನ್ಮದ ಪುಣ್ಯ” ಎಂದು ಹೇಳಿದರು.

“ಹಿರಿಯರು ಮನೆ ಹುಷಾರು, ಮಠ ಹುಷಾರು ಎಂದಿದ್ದಾರೆ. ನಾವು ನಮ್ಮ ಮಠಗಳನ್ನು ಉಳಿಸಿಕೊಳ್ಳಬೇಕು. ಧರ್ಮವನ್ನು ಕಾಪಾಡಿದರೆ ಧರ್ಮ ಅವರನ್ನು ಕಾಪಾಡುತ್ತದೆ. ಈ ಹುಟ್ಟು ಸಾವಿನ ಮಧ್ಯದಲ್ಲಿ ನಾವು ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಬೇಕು” ಎಂದರು.

“ರಂಭಾಪುರಿ ಮಠ ಒಂದು ಧರ್ಮದ ಆಸ್ತಿಯಲ್ಲ. ಮಾನವ ಧರ್ಮದ ಆಸ್ತಿ. ನಾನು ಸಹ ಈ ಮಠದ ಭಕ್ತ. ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯುವವನು. ನಾವು ಮಾಡುವ ಒಳ್ಳೆ ಕೆಲಸಗಳಿಗೆ ಶ್ರೀಗಳ ಆಶೀರ್ವಾದ ಮುಖ್ಯ” ಎಂದು ಹೇಳಿದರು.

“ನಮ್ಮ ಕುಟುಂಬದಲ್ಲಿ ಯಾರೇ ಜನಿಸಿದರು ಕೆಂಪೇಗೌಡ ಎಂದೇ ನಾಮಕರಣ ಮಾಡುವುದು. ನಮ್ಮ ಅಜ್ಜ, ಮುತ್ತಜ್ಜ, ತಂದೆಯ ಹೆಸರು ಸಹ ಕೆಂಪೇಗೌಡ. ನಮ್ಮ ತಂದೆ- ತಾಯಿಗೆ ಮಕ್ಕಳ ಜನನ ಸ್ವಲ್ಪ ತಡವಾದಾಗ ನಮ್ಮ ಊರಿನ ಬಳಿ ಇರುವ ಶಿವಾಲ್ದಾಪ್ಪ ಬೆಟ್ಟದಲ್ಲಿನ ಶಿವನಿಗೆ ಪೂಜಿಸದ ಮೇಲೆ ನನ್ನ ಜನನವಾಯಿತು. ಅದಕ್ಕೆ ನನಗೆ ಶಿವಕುಮಾರ ಎಂದು ಹೆಸರಿಟ್ಟಿದ್ದಾರೆ” ಎಂದರು.

“ನನಗೂ ವೀರಶೈವರಿಗೂ ಯಾವ ಕಾರಣಕ್ಕೆ ಅವಿನಾಭಾವ ಸಂಬಂಧ ಉಂಟಾಗಿದೆ ಎನ್ನುವುದು ಗೊತ್ತಿಲ್ಲ. ನಾನು ಪಿಯು ವಿದ್ಯಾಭ್ಯಾಸವನ್ನು ವೀರಶೈವ ಸಂಸ್ಥೆಯಲ್ಲಿ ಪೂರ್ಣಗೊಳಿಸಿದೆ. ನಂತರ ವೀರ ಗಂಗಾಧರ ಅಜ್ಜನವರು ಸ್ಥಾಪಿಸಿದ್ದ ರೇಣುಕಾಚಾರ್ಯ ಸಂಸ್ಥೆಯಲ್ಲಿ ಪದವಿ ಓದುತ್ತಿದ್ದೆ. ನಾನು ವೀರ ಗಂಗಾಧರ ಅಜ್ಜನವರ ಪರಮಭಕ್ತ. ಅವರನ್ನು ಸಂಪೂರ್ಣವಾಗಿ ನಂಬಿ ಕೆಲಸ ಮಾಡುವವನು” ಎಂದು ಹೇಳಿದರು.

“ಪುರಂದರ ದಾಸರ ಕೀರ್ತನೆಯಂತೆ ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ, ಪದುಮನಾಭನ ಪಾದ ಭಜನೆ ಪರಮ ಸುಖವಯ್ಯ. ಏಕೆಂದರೆ ಪರಮಗುರು ರೇಣುಕಾಚಾರ್ಯ ಅವರ ಪ್ರತಿಮೆಯನ್ನು ಉದ್ಘಾಟನೆ ಮಾಡುವ ಭಾಗ್ಯ ನನಗೆ ಸಿಕ್ಕಿದ್ದು ನನ್ನ ಪುಣ್ಯ” ಎಂದು ಹೇಳಿದರು.

ರಾಜಕೀಯ

ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮ,‌ ಪೂಜೆ, ಭಕ್ತಿ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುವ ಸಾಧನಗಳು: ಡಿಸಿಎಂ ಡಿ.ಕೆ. ಶಿವಕುಮಾರ್

"ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ ಇಲ್ಲ" ಎಂದು

[ccc_my_favorite_select_button post_id="119874"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!