ದೊಡ್ಡಬಳ್ಳಾಪುರ: ನಿನ್ನೆಯಷ್ಟೆ ಕೆಎಸ್ಆರ್ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿರುವ ಘಟನೆ ಪಾಲನಜೋಗಿಹಳ್ಳಿ ಬಳಿ ಸಂಭವಿಸಿದೆ.

ಕಂಟನಕುಂಟೆ ಕಡೆಯಿಂದ ಬಂದ ಬೈಕ್ ಪಾಲನಜೋಗಿಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದು ಸವಾರ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ರಸ್ತೆಯಲ್ಲಿಯೇ ಜಾರುತ್ತಾ ಸಾಗಿದ ಬೈಕ್, ಗಣೇಶ ದೇವಸ್ಥಾನದ ಬಳಿ ನಿಂತಿದ್ದ ಮಹಿಳೆ ಮತ್ತು ಮಗುವಿಗೆ ಗುದ್ದಿದೆ.
ಘಟನೆಯಲ್ಲಿ ಮಹಿಳೆಯ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಗಾಯಾಳು ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ..!

ದೊಡ್ಡಬಳ್ಳಾಪುರ: ಕೆಎಸ್ಆರ್ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಗುರುವಾರ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.
ಮೃತ ದುರ್ದೈವಿಯನ್ನು ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29 ವರ್ಷ) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಸಾವರ ತೆರಳುತ್ತಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಈ ವ್ಯಾಪ್ತಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸಾರ್ವಜನಿಕರ ಆಕ್ರೋಶ
ಇನ್ನೂ ಪ್ರಾವಾಸಿ ಮಂದಿರದಿಂದ ಪಾಲನಜೋಗಿಹಳ್ಳಿ ಕಡೆ ಸಾಗುವ ರಾಜ್ಯ ಹೆದ್ದಾರಿಯ ಎರಡು ಬದಿಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಹೆದ್ದಾರಿ ಸುಂಕ ವಸೂಲಿ ಮಾಡುವ ಟೋಲ್ ಸಂಸ್ಥೆ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಸದ ಕಾರಣ, ವಾಹನ ಸವಾರರು ಈ ರಸ್ತೆ ಎರಡೂ ಬದಿಗಳಲ್ಲಿ ಇರುವ ಅಂಗಡಿಗಳ ಬಳಿ ಬೇಕಾಬಿಟ್ಟಿಯಾಗಿ ರಸ್ತೆ ಬದಿಯಲ್ಲಿಯೇ ವಾಹನ ನಿಲ್ಲಿಸುತ್ತಿದ್ದು, ಇದರಿಂದ ವಾಹನ ದಟ್ಟಣೆಯ ಜೊತೆ ಪದೇ ಪದೇ ಅಪಘಾತಗಳಿಗೆ ಕಾರಣವಾಗುತ್ತಿದ್ದು, ಟೋಲ್ ಸಿಬ್ಬಂದಿಗಳು ಹಾಗೂ ಪೊಲೀಸರು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.