ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ. ಲೋಕೇಶ್

H.D. Kumaraswamy thanked N.R. Lokesh in a packed meeting.

ರಾಯಚೂರು (ಸಿಂಧನೂರು): ಬಹುತೇಕ ಖಾಸಗಿಯವರ ಪಾಲಾಗಲಿದ್ದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಉಳಿಸಿದ ಘನಕೀರ್ತಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರಿಗೆ ಸಲ್ಲುತ್ತದೆ ಎಂದು ಆಂಧ್ರ ಪ್ರದೇಶದ ಮಾಹಿತಿ ತಂತ್ರಜ್ಞಾನ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ನಾ.ರಾ. ಲೋಕೇಶ್ (NA.Ra. Lokesh) ಅವರು ಹೇಳಿದರು.

ವಿಶಾಖ ಉಕ್ಕು ಆಂಧ್ರುಲ ಹಕ್ಕು ಎನ್ನುವ ನಿನಾದದಂತೆ ನಾವು ವೈಜಾಗ್ ಸ್ಟೀಲ್ ಬಗ್ಗೆ ಭಾವನಾತ್ಮಕ ಸಂಬಂಧವನ್ನು ಬೆಳೆಸಿಕೊಂಡಿದ್ದೇವೆ. ಆದರೆ, ನಮ್ಮ ರಾಜ್ಯದ ಹಿಂದಿನ ಸರ್ಕಾರದ ತಪ್ಪು ನೀತಿಗಳಿಂದಾಗಿ ಆ ಕಾರ್ಖಾನೆಯು ಮುಚ್ಚಲ್ಪಡುವ ಅಥವಾ ಖಾಸಗಿಯವರ ಪಾಲಾಗುವ ಅಪಾಯವನ್ನು ಎದುರಿಸುತ್ತಿತ್ತು. ಕುಮಾರಸ್ವಾಮಿ ಕೇಂದ್ರದ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಈ ಕಾರ್ಖಾನೆಯನ್ನು ಉಳಿಸಿಕೊಡುವ ಭರವಸೆ ನೀಡಿದರು. ಕೊಟ್ಟ ಮಾತಿನಂತೆ ಕಾರ್ಖಾನೆಯನ್ನು ಕುಮಾರಸ್ವಾಮಿ ಅವರು ಕಾರ್ಖಾನೆಯನ್ನು ಉಳಿಸಿದರು. ಇವತ್ತು ಆ ಕಾರ್ಖಾನೆ ಲಾಭದ ದಾರಿಯಲ್ಲಿ ನಡೆಯುತ್ತಿದೆ ಎಂದು ಲೋಕೇಶ್ ಹೇಳಿದರು.

ವಿಶಾಖಪಟ್ಟಣ ಸಂಸದರಾದ ಶ್ರೀಭರತ್ ಅವರಿಗೆ ನಾನು ಯಾವಾಗಲೂ ಒತ್ತಡ ಹಾಕುತ್ತಿದ್ದೆ. ನೀವು ದೆಹಲಿಗೆ ಹೋದಾಗಲಿಲ್ಲ ತಪ್ಪದೇ ಸಚಿವರಾದ ಕುಮಾರಸ್ವಾಮಿಯವರನ್ನು ಭೇಟಿಯಾಗಿ ವೈಜಾಗ್ ಕಾರ್ಖಾನೆಯನ್ನು ಉಳಿಸುವ ಬಗ್ಗೆ ಮಾತನಾಡಿ ಎಂದು ಹೇಳುತ್ತಿದ್ದೆ. ಅದರಂತೆ ಭರತ್ ಅವರು ಕೂಡ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮನವಿ ಮಾಡುತ್ತಿದ್ದರು. ಒಮ್ಮೆ ಹೀಗೆ ಅವರಿಬ್ಬರೂ ಭೇಟಿಯಾದಾಗ ಮೊಬೈಲ್ ಮೂಲಕ ನನ್ನನ್ನು ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿಸಿದರು.

ನಾನು ಅವರಲ್ಲಿ ಒಂದೇ ಮನವಿಯನ್ನು ಮಾಡಿಕೊಂಡೆ. ತಾವು ಹೇಗಾದರೂ ಮಾಡಿ ಈ ಕಾರ್ಖಾನೆಯನ್ನು ಉಳಿಸಿಕೊಡಬೇಕು ಎಂದು ಕೋರಿದೆ. ಕುಮಾರಸ್ವಾಮಿ ಅವರು ಒಂದೇ ಮಾತು ಹೇಳಿದರು, “ಬ್ರದರ್ ನೀವು ನಿಶ್ಚಿಂತೆಯಿಂದ ಇರಿ. ಕಾರ್ಖಾನೆಯ ವಿಷಯವನ್ನು ನನಗೆ ಬಿಡಿ” ಎಂದು ಹೇಳಿದರು. ಅದರಂತೆ ಅವರು ವೈಜಾಗ್ ಉಕ್ಕು ಕಾರ್ಖಾನೆಯನ್ನು ಉಳಿಸಿಕೊಟ್ಟಿದ್ದಾರೆ. ಇದಕ್ಕಾಗಿ ಇಡೀ ಆಂಧ್ರ ಪ್ರದೇಶದ ಜನರು ಕುಮಾರಸ್ವಾಮಿಯವರಿಗೆ ಋಣಿಯಾಗಿದ್ದೇವೆ ಎಂದು ನಾ.ರಾ. ಲೋಕೇಶ್ ಹೇಳಿದರು.

ಅಷ್ಟೇ ಅಲ್ಲ ಕೆಲವೇ ದಿನಗಳ ಹಿಂದೆ ಆಂಧ್ರ ಪ್ರದೇಶದ ಅನಕಾಪಲ್ಲಿಯಲ್ಲಿ ಅರ್ಸಿಲರ್ ಮಿತ್ತಲ್ ಮತ್ತು ನಿಫಾನ್ ಸ್ಟಿಲ್ ಕಂಪನಿಗಳ ಸಹಯೋಗದಲ್ಲಿ ದೇಶದಲ್ಲಿ ಅತಿದೊಡ್ಡ ಗ್ರೀನ್ ಸ್ಟಿಲ್ ಉತ್ಪಾದನಾ ಸ್ಥಾವರ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಆ ಕಾರ್ಖಾನೆ ಆಂಧ್ರ ಪ್ರದೇಶಕ್ಕೆ ಬರಲು ಕುಮಾರಸ್ವಾಮಿಯವರೇ ಮೂಲ ಕಾರಣ ಎಂದು ಲೋಕೇಶ್ ಕೃತಜ್ಞತೆಗಳನ್ನು ಸಲ್ಲಿಸಿದರು.

ನಮ್ಮ ಕುಟುಂಬಕ್ಕೂ ಮತ್ತು ಕುಮಾರಸ್ವಾಮಿ ಅವರು ಕುಟುಂಬಕ್ಕೂ ಅತ್ಯಂತ ಆಳವಾದ ಬಾಂಧವ್ಯ ಇದೆ. ಕಳೆದ 30 ವರ್ಷಗಳ ಹಿಂದೆ ಕೇಂದ್ರದಲ್ಲಿ ಸಂಯುಕ್ತ ರಂಗ ಸರ್ಕಾರ ಇದ್ದಾಗ ನಮ್ಮ ತಂದೆಯವರಾದ ಚಂದ್ರಬಾಬು ನಾಯ್ಡು ಅವರು ಸಂಚಾಲಕರಾಗಿದ್ದರು. ಆಗ ಮಣ್ಣಿನ ಮಗ ಹೆಚ್.ಡಿ. ದೇವೇಗೌಡರು ಈ ರಾಷ್ಟ್ರದ ಪ್ರಧಾನಿಯಾಗಿದ್ದರು. ಈಗ ಕುಮಾರಸ್ವಾಮಿಯವರು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಅವರ ಪಕ್ಕದಲ್ಲಿ ಇವತ್ತು ನಿಂತು ಮಾತನಾಡುವ ಭಾಗ್ಯ ನನಗೆ ಸಿಕ್ಕಿದೆ. ಇದಕ್ಕಾಗಿ ಆ ಭಗವಂತನಿಗೆ ಧನ್ಯವಾದಗಳು ಅರ್ಪಿಸುತ್ತಿದ್ದೇನೆ ಎಂದು ಲೋಕೇಶ್ ಭಾವುಕರಾದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!