ಘಾಟಿ ದೇವಾಲಯಕ್ಕೆ ಜಗ್ಗೇಶ್ ಭೇಟಿ

Jaggesh visits Ghati temple

ದೊಡ್ಡಬಳ್ಳಾಪುರ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ (Ghati Subrahmanya) ದೇವಾಲಯಕ್ಕೆ ರಾಜ್ಯಸಭಾ ಸದಸ್ಯ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ (Jaggesh) ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ವೇಳೆ ದೇವಾಲಯದ ಆಡಳಿತ ಮಂಡಳಿ ಜಗ್ಗೇಶ್ ಅವರಿಗೆ ಪೂಜೆ ವ್ಯವಸ್ಥೆ ಕಲ್ಪಿಸಿ, ಗೌರವಿಸಿದರು.

ದೊಡ್ಡಬಳ್ಳಾಪುರ: ತೀವ್ರವಾದ ರೈತರ ಹೋರಾಟ

Doddaballapura: Intense farmers' struggle
Doddaballapura: Intense farmers’ struggle

ದೊಡ್ಡಬಳ್ಳಾಪುರ: ಅಭಿವೃದ್ದಿಗೆ ನಾವು ವಿರೋಧಿಗಳಲ್ಲ. ಆದರೆ ಎಲ್ಲಾ ಭೂಮಿಯನ್ನು ನಮ್ಮ ತಾಲ್ಲೂಕಿನ ರೈತರಿಂದಲೇ ಕಸಿದುಕೊಂಡು ಇಲ್ಲಿನ ರೈತರು (Farmers) ಗೂಳೆ ಹೋಗುವಂತೆ ಮಾಡುವ ಸರ್ಕಾರದ ಅವೈಜ್ಞಾನಿಕ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹಿರಿಯ ವಕೀಲರು ಹಾಗೂ ಸ್ಥಳೀಯ ರೈತರಾದ ಸಿ.ಎಚ್.ಹನುಮಂತರಾಯ (C.H. Hanumantharaya) ಹೇಳಿದರು.

ತಾಲ್ಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ, ಸೊಣ್ಣೇನಹಳ್ಳಿ, ನಾರಾನಹಳ್ಳಿ ಸುತ್ತಮುತ್ತ ಕೆಐಎಡಿಬಿ ಫಲವತ್ತಾದ 2,100 ಎಕರೆ ಕೃಷಿ ಭೂಮಿ ಸ್ವಾಧಿನ ಮಾಡಿಕೊಳ್ಳುವುದನ್ನು ವಿರೋಧಿಸಿ ಬುಧವಾರದಿಂದ ರೈತರು ಪ್ರಾರಂಭಿಸಿರುವ ಅನಿರ್ಧಿಷ್ಟಾವದಿ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದರು.

ಐದು ಸಾವಿರ ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ಅಭಿವೃದ್ದಿಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ಶೇ.80ರಷ್ಟು ಕೃಷಿ ಭೂಮಿಯು ದೊಡ್ಡಬೆಳವಂಗಲ ಹೋಬಳಿಯದ್ದೇ ಆಗಿದೆ. ಇದಿಷ್ಟೇ ಸಾಲದೆಂಬಂತೆ ಈಗ ಅಡಿಕೆ, ತೆಂಗು ಇರುವ ಫಲವತ್ತಾದ 2,100 ಎಕರೆ ಭೂಮಿಯನ್ನು ಇದೇ ಹೋಬಳಿಯಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವುದು ಖಂಡನೀಯ.

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕನಿಷ್ಟ ನಿಯಮಗಳನ್ನು ಸಹ ಪಾಲಿಸದೇ ಇಲ್ಲಿನ ಕೃಷಿ ಭೂಮಿ ಉದ್ಯಮಿಗಳ ಪಾಲಾಗುವಂತೆ ಮಾಡುವ ಹುನ್ನಾರ ರೂಪಿಸಿದೆ. ಸ್ಥಳೀಯ ಜನ್ರತಿಧಿಗಳು ರೈತರ ಭೂಮಿ ಉಳಿಸಲು ಎದೆಗಾರಿಕೆ ತೋರಬೇಕು. ಇದಕ್ಕೆ ಪೂರಕಾಗಿ ಸ್ಥಳೀ ರೈತರು ಯಾವುದೇ ರೀತಿಯ ಗೊಂದಲಗಳಿಗೆ ಒಳಗಾಗದೇ ಜನ್ರತಿನಿಧಿಗಳಿಗೆ ಬೆಂಬಲವಾಗಿ ನಿಂತು ಧರಣಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ನಮ್ಮ ಪೂರ್ವಜರ ಕಾಲದಿಂದಲೂ ಬೆಳೆ ಬೆಳೆಯುತ್ತ ಬಂದಿರುವ ಕೃಷಿ ಭೂಯನ್ನು ಖಾಲಿ ಭೂಮಿ ಎಂದು ಕಂದಾಯ ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದರ ವಿರುದ್ಧ ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಲಾಗುವುದು. ರೈತರು ಆತಂಕ ಪಡದೆ ಒಗ್ಗಟ್ಟಿನಿಂದ ಮಾನಸಿಕವಾಗಿ ಹೋರಾಟಕ್ಕೆ ಸಜ್ಜಾಗಬೇಕು ಎಂದರು.

ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ ಮಾತನಾಡಿ, ಕೆಐಎಡಿಬಿ ಅಧಿಕಾರಿಗಳು ರೈತರೊಂದಿಗೆ ಚರ್ಚೆ ನಡೆಸದೆ ಭೂಮಿ ಸ್ವಾಧೀನಕ್ಕೆ ಸಿದ್ಧತೆ ನಡೆಸಿರುವುದು ಖಂಡನೀಯ, ಈ ಆತಂಕ ಕೇವಲ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ, ಸೊಣ್ಣೇನಹಳ್ಳಿ, ನಾರಾನಹಳ್ಳಿ ಮಾತ್ರ ಸಿಮೀತವಾಗಿಲ್ಲ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ಅನೇಕರು ಸಮಸ್ಯೆ ಎದುರಿಸಬೇಕಿದೆ. ಏಕೆಂದರೆ ದಾಸ್ ಪೇಟೆಯಿಂದ ಆರಂಭವಾಗಿ ಭೂ ಸ್ವಾಧೀನ ಈ ದೊಡ್ಡಬೆಳವಂಗಲ ವರೆಗೂ ಬಂದಿದ್ದು ಮುಂದಿನ ದಿನಗಳಲ್ಲಿ ಹುಸ್ಕೂರು ವರೆಗೂ ವ್ಯಾಪಿಸುವ ಆತಂಕ ಇದೆ.

ಇವರ ಕಣ್ಣು ಸಾಸಲು ಹೋಬಳಿ ಮೇಲೆ ಬಿದ್ದಿಲ್ಲ. ಏಕೆಂದರೆ ಬೆಂಗಳೂರಿನ ತ್ಯಾಜ್ಯ ಸುರಿದು ಅಲ್ಲಿನ ಅಂತರ್ಜಲವನ್ನು ಮಲಿನ ಮಾಡಿದ್ದಾರೆ.

ಈ ವ್ಯಾಪ್ತಿಯಲ್ಲಿ ಡ್ರೋನ್ ಮೂಲಕ ಸರ್ವೆ ಕಾರ್ಯ ನಡೆಸಿದ್ದಾರೆ ಎಂಬ ಆತಂಕ ರೈತರದ್ದಾಗಿದೆ. ದೊಡ್ಡಬಳ್ಳಾಪುರದ ಎಸಿ ರೈತರ ಪರವಾಗಿ ಅಲ್ಲದೆ ಬಂಡವಾಳ ಶಾಹಿಗಳ ಪರ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ.

ಭೂ ಸ್ವಾಧೀನ ವಿರೋಧಿಸಿ ಆರಂಭವಾಗಿರುವ ಹೋರಾಟ ಕ್ಷಿಪ್ರ ಬೆಳವಣಿಗೆ ಕಂಡು ತ್ವರಿತವಾಗಿ ಅಂತ್ಯಗೊಳ್ಳಬೇಕಿದೆ. ನಿಮ್ಮ ಹೋರಾಟಕ್ಕೆ ಮದುರೆ ಹೋಬಳಿ ರೈತರ ಸಂಪೂರ್ಣ ಬೆಂಬಲವಿದೆ. ಸರ್ಕಾರದ ಈ ನಿಲುವಿನ ವಿರುದ್ಧ ಹೋರಾಟಕ್ಕೆ ಕೇವಲ 5 ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಇಡೀ ಕರ್ನಾಟಕಕ್ಕೆ ಮಾದರಿಯಾಗುವಂತೆ ರೂಪುರೇಷೆ ಸಿದ್ದಪಡಿಸಬೇಕಿದೆ ಎಂದರು.

ಬುಧವಾರ ಸಂಜೆಯಿಂದ ಪ್ರಾರಂಭವಾಗಿರುವ ನಿರಂತರ ಧರಣಿ ಸತ್ಯಾಗ್ರಹದಲ್ಲಿ ವಕೀಲರಾದ ರುದ್ರಾರಾದ್ಯ, ಕೇಶವಕುಮಾರ್, ಸ್ಥಳೀಯ ಮುಖಂಡರಾದ ಪ್ರಭಬೆಳವಂಗಲ, ಎಂ.ಗೋವಿಂದರಾಜು, ಆರ್. ಚಂದ್ರತೇಜಸ್ವಿ, ಸುನಿಲ್ಕುಮಾರ್, ತಿಮ್ಮೇಗೌಡ, ರಂಗನಾಥ್, ಸಿ.ಎಚ್.ರಾಮಕೃಷ್ಣಯ್ಯ, ವಿಜಯ್ ಕುಮಾರ್, ಡಿ.ಸಿ.ರಾಮೇಗೌಡ, ಡಿ.ಸಿ.ನಾಗರಾಜು, ಕಿಶೋರ್ ಕುಮಾರ್ ಇದ್ದರು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]