ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ (RCB) ಮತ್ತು ಸಿಎಸ್ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ, ಸಿಎಸ್ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ಬಿಸಿಸಿಐಗೆ ದೂರು ನೀಡಿದ್ದಾರೆ.

ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್ಕೆ ವಿರುದ್ಧದ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರನ್ನು ಹಾಗೂ ಅಭಿಮಾನಿಗಳನ್ನು ಅವಮಾನಿಸಿದ್ದಾರೆ ಎಂದು ಸಿಎಸ್ಕೆ ಮ್ಯಾನೇಜ್ಮೆಂಟ್ ದೂರು ನೀಡಿದ್ದಾರೆ.

🚨 CASE FILED AGAINST CHINNASWAMY DJ. 🚨
— Indian Cricket (@IPL2025Auction) April 16, 2026
– DJ played some inappropriate songs like "Idli dosa sambhar, chutney chutney" in Chinnaswamy during CSK vs RCB on 5th April 🏏
– According to CSK the choice of song ‘idli, dosa, chutney chutney’ was not in good taste. ❌
– 📝 CSK… pic.twitter.com/cGlxixCQWE
ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಉದ್ದೇಶಪೂರ್ವಕವಾಗಿ ಆ ಹಳೆಯ ಹಾಡನ್ನು ಪ್ಲೇ ಮಾಡಿ ಸಿಎಸ್ಕೆ ಆಟಗಾರರನ್ನು ಮತ್ತು ತಮಿಳುನಾಡಿನ ಸಂಸ್ಕೃತಿಯನ್ನು ಅವಹೇಳನ ಮಾಡಿದ್ದಾರೆ. ಹೋಮ್ ಟೀಮ್ ಬೆಂಬಲಿಸುವುದು ಸಹಜ, ಆದರೆ ಎದುರಾಳಿ ತಂಡದ ಆಟಗಾರರನ್ನು ಹೀಗಳೆಯುವುದು ಕ್ರೀಡಾ ಸ್ಫೂರ್ತಿಗೆ ವಿರುದ್ಧವಾಗಿದೆ ಎಂದು ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ (RCB) ಮತ್ತು ಸಿಎಸ್ಕೆ (CSK) ನಡುವೆ ನಡೆಯುವ ಪಂದ್ಯ ಕೇವಲ ಕ್ರಿಕೆಟ್ ಮೈದಾನದ ಹೋರಾಟಕ್ಕೆ ಮಾತ್ರವಲ್ಲದೆ, ಅಭಿಮಾನಿಗಳ ನಡುವಿನ ಜಿದ್ದಾಜಿದ್ದಿಗೂ ಹೆಸರುವಾಸಿ.
ಆದರೆ, ಈ ಬಾರಿ ಈ ಪೈಪೋಟಿ ಮೈದಾನದ ಹೊರಗೆ ‘ಸಾಂಸ್ಕೃತಿಕ ಅವಮಾನ’ದ ತಿರುವು ಪಡೆದುಕೊಂಡಿದೆ. ಆರ್ಸಿಬಿ (RCB) ಮತ್ತು ಸಿಎಸ್ಕೆ (CSK) ನಡುವಿನ ಪಂದ್ಯದ ವೇಳೆ ನಡೆದ ‘ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ’ ಹಾಡಿನ ವಿವಾದ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ.
ಈಗ ಇದರ ಮೇಲೂ ಪರಸ್ಪರ ಆರೋಪ ಪ್ರತ್ಯಾರೋಪ ವ್ಯಕ್ತವಾಗುತ್ತಿದ್ದು, ಕಳೆದ ಅವಧಿಯಲ್ಲಿ ಚೆನ್ನೈನಲ್ಲಿ ನಡೆದ ಆರ್ಸಿಬಿ (RCB) ಮತ್ತು ಸಿಎಸ್ಕೆ (CSK) ನಡುವಿನ ಪಂದ್ಯದ ವೇಳೆ ಜಿತೇಶ್ ಔಟಾದ ಸಂದರ್ಭದಲ್ಲಿ ‘ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ’ ಹಾಡನ್ನು ಪ್ಲೇ ಮಾಡಿ ಜಿತೇಶ್ ಅವರ ಕಿಚಾಯಿಸಿತ್ತು, ಆಗ ಕಾಣದ ಸಂಸ್ಕೃತಿಯ ಅವಹೇಳನ ಈಗೇಗ್ ಬಂತು ಎಂಬುದಾಗಿ ಆರ್ಸಿಬಿ ಬೆಂಬಲಿಗರು ತಿರುಗೇಟು ನೀಡಿದ್ದಾರೆ.
This is Chepauk last year, csk played “dosa idli sambar chutney chutney” to troll Jitesh after his dismissal, but you didn’t see RCB crying about it. They're still not recovered from 18th May humiliation 🤣😭 https://t.co/MAI6Z5PwvF pic.twitter.com/ro66sizFmZ
— Suprvirat (@Mostlykohli) April 16, 2026
CBSE ಫಲಿತಾಂಶ; MSV ಶಾಲೆ ಮಕ್ಕಳ ಮೇಲುಗೈ: ದೊಡ್ಡಬಳ್ಳಾಪುರ ತಾಲೂಕಿಗೆ ಟಾಪರ್..

ದೊಡ್ಡಬಳ್ಳಾಪುರ: ನಿನ್ನೆ (ಏ.15) ಪ್ರಕಟವಾದ
ಸಿಬಿಎಸ್ಇ (CBSE) 10ನೇ ತರಗತಿ ಫಲಿತಾಂಶದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಎಂಎಸ್ವಿ ಪಬ್ಲಿಕ್ ಶಾಲೆ (MSV Public School) ಶೇ.100 ರಷ್ಟು ಸಾಧನೆ ಮಾಡಿದೆ.
2025-26ನೇ ಸಾಲಿನ ಸಿಬಿಎಸ್ಇ ಕೇಂದ್ರೀಯ ಪರೀಕ್ಷಾ ಮಂಡಳಿಯ ಹತ್ತನೇ ತರಗತಿ ಫಲಿತಾಂಶದಲ್ಲಿ, ದೊಡ್ಡಬಳ್ಳಾಪುರ ನಗರದ ಎಂಎಸ್ವಿ ಪಬ್ಲಿಕ್ ಶಾಲೆಯು ನಿರಂತರವಾಗಿ 15ನೇ ವರ್ಷವೂ ಶೇ.100 ಸಾಧನೆ ಮಾಡಿ ಮತ್ತೊಮ್ಮೆ ಗಮನ ಸೆಳೆದಿದೆ.
ಈ ಬಾರಿ ಒಟ್ಟು 136 ವಿದ್ಯಾರ್ಥಿಗಳಲ್ಲಿ 86 ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 41 ಮಕ್ಕಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ಮಕ್ಕಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಮಕ್ಕಳ ಈ ಫಲಿತಾಂಶಕ್ಕೆ ಮತ್ತು ಅವರ ಸಾಧನೆಗೆ ಶಾಲೆಯ ಸಂಸ್ಥಾಪಕರಾದ ಸುಬ್ರಮಣ್ಯ.ಎ ರವರು ಪ್ರಶಂಸೆ ವ್ಯಕ್ತಪಡಿಸಿದರು.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, “ನಿರಂತರವಾಗಿ 15 ವರ್ಷಗಳ ಕಾಲ ಶೇ.100 ಫಲಿತಾಂಶವನ್ನು ಸಾಧಿಸುವುದು ನಮ್ಮ ಶಾಲೆಯ ಗುಣಮಟ್ಟದ ಶಿಕ್ಷಣ ಮತ್ತು ತಂಡದ ಕಾರ್ಯದ ಪ್ರತೀಕವಾಗಿದೆ. ಮಕ್ಕಳ ಈ ಸಾಧನೆ ನಮ್ಮ ಶಾಲೆಗೆ ಕೀರ್ತಿ ತಂದಿದೆ, ಮಕ್ಕಳಿಗೆ ಹಾಗೂ ವಿದ್ಯೆ ಕಲಿಸಿದ ಶಿಕ್ಷಕ ವೃಂದಕ್ಕೆ ನನ್ನ ಮನಃಪೂರ್ವಕವಾದ ಅಭಿನಂದನೆಗಳು” ಎಂದು ಮುಕ್ತ ಕಂಠದಿಂದ ಹಾರೈಸಿದ್ದಾರೆ.
ಶಾಲಾ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿ ನಯನಾ ಸ್ವರೂಪ್ ಹಾಗೂ ಪ್ರಾಂಶುಪಾಲರಾದ ರೆಮ್ಯ.ಬಿ.ವಿ ಹಾಗೂ ಸಿಬ್ಬಂದಿ ವರ್ಗಕೂಡ ಮಕ್ಕಳ ಸಾಧನೆಯನ್ನು ಮುಕ್ತ ಕಂಠದಿಂದ ಅಭಿನಂದನೆಗಳನ್ನು ಸಲ್ಲಿಸಿದರು.
ಈ ವಿಶಿಷ್ಟ ಸಾಧನೆಗೆ ಶಿಕ್ಷಕರ ಸಮರ್ಪಣೆ, ಮಾರ್ಗದರ್ಶನ, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಾಲೆಯ ಶಿಸ್ತಿನ ವಾತಾವರಣ ಪ್ರಮುಖ ಕಾರಣಗಳಾಗಿವೆ.
ಈ ಸಾಧನೆಯೊಂದಿಗೆ, ಶಾಲೆಯು ಸಿಬಿಎಸ್ಇ ಪಠ್ಯಕ್ರಮದಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಮುಂದಿನ ವರ್ಷಗಳಲ್ಲಿಯೂ ಇದೇ ಸಾಧನೆಯನ್ನು ಮುಂದುವರಿಸುವ ವಿಶ್ವಾಸ ವ್ಯಕ್ತವಾಗಿದೆ.
ಫಲಿತಾಂಶದ ವಿವರ
ಶ್ರೇಯಾ ಆರ್ – 97.00%
ಶ್ರುತಿ ಬಿ ಆರ್ – 95.60%
ಡಿ ರಕ್ಷಾ – 94.60%
ಗಗನಶ್ರೀ ಡಿ ಎಸ್ – 94.00%
ಕೆ ಹೆಚ್ ಸ್ಮೃತಿ. – 93.00%
ಅಫಿಫಾ. – 92.60%
ಧನುಶ್ರೀ ವಿ.- 92.00%.
ಚಿನ್ಮಯ್ ಎನ್ ಲೋಕೇಶ್. – 91.80%
ಪೂರ್ವಿಕಾ ಡಿ – 91.60%
ಹರಿಪ್ರಿಯಾ ಕೆ ಪಿ. – 91.60%
ರವಿನೂತಲ ತೇಜೋ ನಾಗಗೌರೀ ವೈಷ್ಣವಿ. – 91.40%
ಯೋಗಿತಾ ಕೆ ಪಿ. – 91.40%
ರಿಶಿಕಾ ರಾಜ್ ಸಿ. – 91.20%.
ಕೃತಿಕಾ ಹೆಚ್ ಎಂ. – 90.80%
ಭರಣಿ.ಎಸ್. – 90.40%
ವರ್ಷ ಬಿಂದು ಎನ್. – 90.20%
ಇಖ್ರಾ ಮರಿಯಮ್ – 90.00%