ಬೆಂ.ಗ್ರಾ ಜಿಲ್ಲೆ: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು, ನಾದಸ್ವರ (Drum and percussion) ಸಂಗೀತ ತರಬೇತಿ ಪಡೆಯಲು 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

ಡೋಲು-11 ಮತ್ತು ನಾದಸ್ತರ-17 ಒಟ್ಟು 28 ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಸಲುವಾಗಿ ಆಪ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರವೇಶ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2(ಎ)ರಲ್ಲಿ ಬರುವ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ..

ಏ. 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಜಿ ಪಡೆಯಲು ಹಾಗೂ ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಮಿನಿ ವಿಧಾನ ಸೌಧದ ಹಿಂಭಾಗ, ಡಿವಿಎಂ ಕಾಲೋನಿ, ದೇವನಹಳ್ಳಿ ಟೌನ್/ ತಾಲ್ಲೂಕು, ಸಹಾಯವಾಣಿ: 080-22449999 (ಸಮಯ ಬೆಳಿಗ್ಗೆ 10.00 ರಿಂದ ಸಂಜೆ 5.30ರವರೆಗೆ.
ಸಾರ್ವಜನಿಕ ರಜಾ ಹೊರೆತು ಪಡಿಸಿ ಬೇರೆ ಎಲ್ಲಾ ದಿನಗಳಲ್ಲೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
CBSE ಫಲಿತಾಂಶ; MSV ಶಾಲೆ ಮಕ್ಕಳ ಮೇಲುಗೈ: ದೊಡ್ಡಬಳ್ಳಾಪುರ ತಾಲೂಕಿಗೆ ಟಾಪರ್..

ದೊಡ್ಡಬಳ್ಳಾಪುರ: ಏ.15ರಂದು ಪ್ರಕಟವಾದ
ಸಿಬಿಎಸ್ಇ (CBSE) 10ನೇ ತರಗತಿ ಫಲಿತಾಂಶದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಎಂಎಸ್ವಿ ಪಬ್ಲಿಕ್ ಶಾಲೆ (MSV Public School) ಶೇ.100 ರಷ್ಟು ಸಾಧನೆ ಮಾಡಿದೆ.
2025-26ನೇ ಸಾಲಿನ ಸಿಬಿಎಸ್ಇ ಕೇಂದ್ರೀಯ ಪರೀಕ್ಷಾ ಮಂಡಳಿಯ ಹತ್ತನೇ ತರಗತಿ ಫಲಿತಾಂಶದಲ್ಲಿ, ದೊಡ್ಡಬಳ್ಳಾಪುರ ನಗರದ ಎಂಎಸ್ವಿ ಪಬ್ಲಿಕ್ ಶಾಲೆಯು ನಿರಂತರವಾಗಿ 15ನೇ ವರ್ಷವೂ ಶೇ.100 ಸಾಧನೆ ಮಾಡಿ ಮತ್ತೊಮ್ಮೆ ಗಮನ ಸೆಳೆದಿದೆ.
ಈ ಬಾರಿ ಒಟ್ಟು 136 ವಿದ್ಯಾರ್ಥಿಗಳಲ್ಲಿ 86 ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 41 ಮಕ್ಕಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ಮಕ್ಕಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಮಕ್ಕಳ ಈ ಫಲಿತಾಂಶಕ್ಕೆ ಮತ್ತು ಅವರ ಸಾಧನೆಗೆ ಶಾಲೆಯ ಸಂಸ್ಥಾಪಕರಾದ ಸುಬ್ರಮಣ್ಯ.ಎ ರವರು ಪ್ರಶಂಸೆ ವ್ಯಕ್ತಪಡಿಸಿದರು.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, “ನಿರಂತರವಾಗಿ 15 ವರ್ಷಗಳ ಕಾಲ ಶೇ.100 ಫಲಿತಾಂಶವನ್ನು ಸಾಧಿಸುವುದು ನಮ್ಮ ಶಾಲೆಯ ಗುಣಮಟ್ಟದ ಶಿಕ್ಷಣ ಮತ್ತು ತಂಡದ ಕಾರ್ಯದ ಪ್ರತೀಕವಾಗಿದೆ. ಮಕ್ಕಳ ಈ ಸಾಧನೆ ನಮ್ಮ ಶಾಲೆಗೆ ಕೀರ್ತಿ ತಂದಿದೆ, ಮಕ್ಕಳಿಗೆ ಹಾಗೂ ವಿದ್ಯೆ ಕಲಿಸಿದ ಶಿಕ್ಷಕ ವೃಂದಕ್ಕೆ ನನ್ನ ಮನಃಪೂರ್ವಕವಾದ ಅಭಿನಂದನೆಗಳು” ಎಂದು ಮುಕ್ತ ಕಂಠದಿಂದ ಹಾರೈಸಿದ್ದಾರೆ.
ಶಾಲಾ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿ ನಯನಾ ಸ್ವರೂಪ್ ಹಾಗೂ ಪ್ರಾಂಶುಪಾಲರಾದ ರೆಮ್ಯ.ಬಿ.ವಿ ಹಾಗೂ ಸಿಬ್ಬಂದಿ ವರ್ಗಕೂಡ ಮಕ್ಕಳ ಸಾಧನೆಯನ್ನು ಮುಕ್ತ ಕಂಠದಿಂದ ಅಭಿನಂದನೆಗಳನ್ನು ಸಲ್ಲಿಸಿದರು.
ಈ ವಿಶಿಷ್ಟ ಸಾಧನೆಗೆ ಶಿಕ್ಷಕರ ಸಮರ್ಪಣೆ, ಮಾರ್ಗದರ್ಶನ, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಾಲೆಯ ಶಿಸ್ತಿನ ವಾತಾವರಣ ಪ್ರಮುಖ ಕಾರಣಗಳಾಗಿವೆ.
ಈ ಸಾಧನೆಯೊಂದಿಗೆ, ಶಾಲೆಯು ಸಿಬಿಎಸ್ಇ ಪಠ್ಯಕ್ರಮದಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಮುಂದಿನ ವರ್ಷಗಳಲ್ಲಿಯೂ ಇದೇ ಸಾಧನೆಯನ್ನು ಮುಂದುವರಿಸುವ ವಿಶ್ವಾಸ ವ್ಯಕ್ತವಾಗಿದೆ.
ಫಲಿತಾಂಶದ ವಿವರ
ಶ್ರೇಯಾ ಆರ್ – 97.00%
ಶ್ರುತಿ ಬಿ ಆರ್ – 95.60%
ಡಿ ರಕ್ಷಾ – 94.60%
ಗಗನಶ್ರೀ ಡಿ ಎಸ್ – 94.00%
ಕೆ ಹೆಚ್ ಸ್ಮೃತಿ. – 93.00%
ಅಫಿಫಾ. – 92.60%
ಧನುಶ್ರೀ ವಿ.- 92.00%.
ಚಿನ್ಮಯ್ ಎನ್ ಲೋಕೇಶ್. – 91.80%
ಪೂರ್ವಿಕಾ ಡಿ – 91.60%
ಹರಿಪ್ರಿಯಾ ಕೆ ಪಿ. – 91.60%
ರವಿನೂತಲ ತೇಜೋ ನಾಗಗೌರೀ ವೈಷ್ಣವಿ. – 91.40%
ಯೋಗಿತಾ ಕೆ ಪಿ. – 91.40%
ರಿಶಿಕಾ ರಾಜ್ ಸಿ. – 91.20%.
ಕೃತಿಕಾ ಹೆಚ್ ಎಂ. – 90.80%
ಭರಣಿ.ಎಸ್. – 90.40%
ವರ್ಷ ಬಿಂದು ಎನ್. – 90.20%
ಇಖ್ರಾ ಮರಿಯಮ್ – 90.00%
