ಅದ್ಧೂರಿ ಸಾಸಲು ಚಿನ್ನಮ್ಮ ಉತ್ಸವ

The grand Sasalu Chinnamma festival

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿ ಕೇಂದ್ರದಲ್ಲಿ ಸಾಸಲು ಚಿನ್ನಮ್ಮ (Sasalu Chinnamma) ಉತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ಸಾಸಲು ಚಿನ್ನಮ್ಮ ಉತ್ಸವದ ಭವ್ಯ  ಮೆರವಣಿಗೆ ಸಾಸಲು ಚಿನ್ನಮ್ಮ ದೇವಾಲಯ ಮುಂಭಾಗದಿಂದ ಚಾಲನೆ ನೀಡಲಾಯಿತು. 

ಅದ್ಧೂರಿ ಸಾಸಲು ಚಿನ್ನಮ್ಮ ಉತ್ಸವ

ನೂರಾರು ಮಹಿಳೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಡೊಳ್ಳುಕುಣಿತ, ವೀರಗಾಸೆ, ಕೀಲುಕುದುರೆ, ಚಿಟ್ಟಿಮೇಳ, ಯಕ್ಷಗಾನ, ಗೊಂಬೆಗಳು, ತಮಟೆ ಮುಂತಾದ ಕಲಾ ತಂಡಗಳು ಮೆರವಣಿಗೆ ಜಾನಪದ ಮೆರಗು ನೀಡಿದ್ದವು.

ಅದ್ಧೂರಿ ಸಾಸಲು ಚಿನ್ನಮ್ಮ ಉತ್ಸವ

ಪ್ರಗತಿಪರ ರೈತ ರಾಜೇಗೌಡ ಹೊಸದಾಗಿ ಸಿದ್ದಪಡಿಸಿದ್ದ ಎತ್ತಿನ ಗಾಡಿ ಮತ್ತು ಎತ್ತುಗಳ ಜೊಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಸಾಸಲು ಚಿನ್ನಮ್ಮ ಉತ್ಸವದ ಮುಖ್ಯ ವೇದಿಕೆಯಲ್ಲಿ ದೊಡ್ಡಬಳ್ಳಾಪುರ  ಪರಿಗಣಿತ  ಕಲಾ ತಂಡ, ನಾಟ್ಯ ಮಯೂರಿ ಕಲಾತಂಡ, ಇಡಗುಂಜಿ ಕಲಾ ಸಂಘ, ಜೂನಿಯರ್ ರಾಜ್ ಕುಮಾರ್, ಜೂನಿಯರ್ ವಿಷ್ಣುವರ್ಧನ್, ಜಾನಪದ ಗಾಯಕರು, ರಂಗಭೂಮಿ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಅದ್ಧೂರಿ ಸಾಸಲು ಚಿನ್ನಮ್ಮ ಉತ್ಸವ

ಅಂತಾರಾಷ್ಟ್ರೀಯ ಛಾಯಾಗ್ರಾಹಕರಾದ ಟಿ.ಕೆಂಪಣ್ಣ ಅವರ ಕರ್ನಾಟಕ ಪ್ರಾಚೀನ ದೇವಾಲಯ ಛಾಯಾಚಿತ್ರ ಪ್ರದರ್ಶನ  ಎಲ್ಲರ ಗಮನ ಸೆಳೆಯಿತು.

ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಲು  ಸಾಂಸ್ಕೃತಿಕ ಉತ್ಸವ ಸಹಕಾರಿ ಆಗಲಿವೆ ಎಂದು ಜಾನಪದ ವಿದ್ವಾಂಸ ಸಣ್ಣ ನಾಗಪ್ಪ ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಸಲು ಚಿನ್ನಮ್ಮ ಮಹಾಸಾಧ್ವಿ ಮತ್ತು ಮಹಿಳಾ ಶಕ್ತಿಯ ಜೀವಂತ ಸಂಕೇತವಾಗಿದ್ದಾರೆ.  ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗದ ಜನಪದ ಪರಂಪರೆಯಲ್ಲಿ ಸಾಸಲು ಜೀವನ ಕುರಿತು ಸಾಕಷ್ಟು ಸಾಹಿತ್ಯ ಕಂಡು ಬರುತ್ತದೆ. ಕನ್ನಡ ಸಾಹಿತ್ಯದಲ್ಲಿ ಬರುವ ದಾನ ಚಿಂತಾಮಣಿ ಅತ್ತಿಮಬ್ಬೆಯಂತೆ, ಸಾಸಲು ಚಿನ್ನಮ್ಮ ಸಹ ಕೆರೆ, ಬಾವಿಗಳನ್ನು ಕಟ್ಟಿಸುವ ಮೂಲಕ‌ ಜನೋಪಕಾರಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಅದ್ಧೂರಿ ಸಾಸಲು ಚಿನ್ನಮ್ಮ ಉತ್ಸವ

ಸಾಸಲು ಚಿನ್ನಮ್ಮ ಕುರಿತು ಹಲವಾರು ಪವಾಡಗಳನ್ನು ಜನಪದ ಕಥೆಗಾರರು ಹೇಳುತ್ತಾರೆ. ‘ಸಾಸಲು ಚಿನ್ನಮ್ಮ ಕುರಿತು ಜನಪದ ಸಾಹಿತ್ಯದಲ್ಲಿ ಕಥೆ, ಕಾವ್ಯ, ನಾಟಕಗಳಿವೆ. ಸಾಸಲು ಸೇರಿದಂತೆ ತುಮಕೂರು ಜಿಲ್ಲೆಯ ಪಾವಗಡ, ಆಂಧ್ರಪ್ರದೇಶದ ಅನಂತಪುರ ಮುಂತಾದ ಕಡೆಗಳಲ್ಲಿ ಸಾಸಲು ಚಿನ್ನಮ್ಮ ಕುರಿತ ಜನಪದ ಸಾಹಿತ್ಯ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ‌. ಸಾಸಲು ಚಿನ್ನಮ್ಮನ ಹೆಸರಿನಲ್ಲಿ ನಿರ್ಮಾಣವಾಗಿರುವ ಕೆರೆಗಳು, ಬಾವಿಗಳು, ದೇವಾಲಯಗಳು ಆಕೆಯ ಸಮಾಜಮುಖಿ ಕಾರ್ಯ ಗಳಿಗೆ ಸಾಕ್ಷಿಯಾಗಿವೆ ಎಂದರು.

ಅದ್ಧೂರಿ ಸಾಸಲು ಚಿನ್ನಮ್ಮ ಉತ್ಸವ

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮಹಿಳೆಯರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ಸಂಕೇತವಾಗಿದೆ. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಿ, ಅವರ ಸಾಧನೆಗಳನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದಲ್ಲಿ ಮಹಿಳೆಯರಿಗೆ ಗೌರವಯುತ ಸ್ಥಾನ ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ  ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ತಾಲ್ಲೂಕು ಪಂಚಾಯಿತಿ  ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣಸ್ವಾಮಿ,   ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ‌.ಜಯರಾಮ್, ಸಾಸಲು ಚಿನ್ನಮ್ಮ ಉತ್ಸವ ಸಮಿತಿಯ ಪದಾಧಿಕಾರಿಗಳಾದ ನರಸಿಂಹಗೌಡ, ಶ್ರೀನಿವಾಸ್, ಲಾವಣ್ಯ ನಾಗರಾಜ್, ರವಿಕುಮಾರ್, ಲೋಕೇಶ್, ಪಚ್ಚಾರಲಹಳ್ಳಿ ರಮೇಶ್, ನರಸಿಂಹಮೂರ್ತಿ, ಚಂದ್ರಶೇಖರ್, ನರೇಂದ್ರ ಮುಂತಾದವರು ಭಾಗವಹಿಸಿದ್ದರು‌.

ಅದ್ಧೂರಿ ಸಾಸಲು ಚಿನ್ನಮ್ಮ ಉತ್ಸವ

ರಾಜಕೀಯ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="121146"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!