ಕಸದ ತೊಟ್ಟಿಯಾಯ್ತೇ..? ಬಾಶೆಟ್ಟಿಹಳ್ಳಿ ಕೆರೆ ಅಂಗಳ: ಸ್ಥಳೀಯರ ಆಕ್ಷೇಪ.. ತ್ಯಾಜ್ಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು

Has it become a garbage bin? Bashettihalli Lake Yard

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಹಳ್ಳಿ ಕೆರೆಯ (Bashettihalli Lake) ಅಂಗಳದಲ್ಲಿ ಕೆಲ ಕಾರ್ಖಾನೆಯವರು ಕಸ (Garbage) ತಂದು ಸುರಿದು ಪರಿಸರ ಮಾಲಿನ್ಯ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾತ್ರೋರಾತ್ರಿ ಲಾರಿ, ಟ್ರ್ಯಾಕಟರ್ಗಳಲ್ಲಿ ತ್ಯಾಜ್ಯವನ್ನು ಸುರಿಯಲಾಗುತ್ತಿದ್ದು, ಕೆರೆ ತ್ಯಾಜ್ಯದ ತೊಟ್ಟಿಯಾದಂತಾಗಿದೆ.

ಇಂದು ಬೆಳಗ್ಗಿನ ಜಾವನ ಕಿಡಿಗೇಡಿಗಳು ತ್ಯಾಜ್ಯಕ್ಕೆ ಬೆಂಕಿ ಇಟ್ಟಿದ್ದು, ತ್ಯಾಜ್ಯದ ಹೊಗೆಯಿಂದ ಈ ವ್ಯಾಪ್ತಿಯಲ್ಲಿ ಜನರ ಪರದಾಡುವಂತಾಗಿತ್ತು.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಲು ಶ್ರಮಿಸುತ್ತಿದ್ದಾರೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರುವ ಮುನ್ನ ಗ್ರಾಮಪಂಚಾಯಿತಿಯಾಗಿದ್ದು, ಆ ವೇಳೆ ಹಸಿ ಕಸ-ಒಣ ಕಸ ವಿಂಗಡಣೆ, ಸ್ವಚ್ಚತೆ ಕುರಿತು ರಾಜ್ಯ ಪ್ರಶಸ್ತಿ ಪಡೆದಿತ್ತು. ಆದರೆ ಈಗ ಕೈಗಾರಿಕಾ ತ್ಯಾಜ್ಯ ಕೆರೆಯಂಗಳಲ್ಲಿ ಸುರಿಯುವುದು, ತ್ಯಾಜ್ಯ ನೀರನ್ನು ಸಂಸ್ಕರಿಸದೆ ಅಕ್ಕಪಕ್ಕದ ಗ್ರಾಮಗಳ ಕೆರೆಗಳಿಗೆ ಬಿಟ್ಟು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ವ್ಯಾಪಕವಾಗಿದ್ದು, ಪ್ರತಿಭಟನೆಗಳು ನಡೆಯುತ್ತಿವೆ.

ಮಿತಿ ಮೀರುತ್ತಿದೆ ಬಿಸಿಲು; ಹೀಟ್ ಸ್ಟ್ರೋಕ್ ಚಿಕಿತ್ಸೆಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಸಜ್ಜು.. ವೈದ್ಯರ ಈ ಸಲಹೆ ಪಾಲಿಸಿ

Doddaballapur Government Hospital is equipped for heat stroke treatment.
Doddaballapur Government Hospital is equipped for heat stroke treatment.

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಏರುತ್ತಲೇ ಇದೆ. ರಸ್ತೆಗಿಳಿದರೆ ಬೆಂಕಿಯ ಉಂಡೆ ಮೈಗೆ ತಗುಲಿದ ಅನುಭವವಾಗುತ್ತಿದೆ. ಈ ಹೆಚ್ಚುತ್ತಿರುವ ತಾಪಮಾನದ ಜೊತೆಗೆ ಆರೋಗ್ಯದ ಸಮಸ್ಯೆಗಳು ಕೂಡ ಅಷ್ಟೇ ವೇಗವಾಗಿ ಹೆಚ್ಚುತ್ತಿವೆ. ಮುಖ್ಯವಾಗಿ ‘ಹೀಟ್ ಸ್ಟ್ರೋಕ್’ (Heat Stroke) ಅಥವಾ ಶಾಖದ ಹೊಡೆತದ ಕಾಡುವ ಆತಂಕ ಎದುರಾಗಿದೆ.

ಪ್ರಸ್ತುತ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಏ.22 ರಂದು ಬೆಳಗ್ಗೆ 9 ಗಂಟೆ ವರದಿ ಅನ್ವಯ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದ್ದು, ಸಂಜೆಯ ವೇಳೆಗೆ 39 ಡಿಗ್ರಿ ಸೆಲ್ಸಿಯಸ್ಗೆ ಏರುವ ಆತಂಕವಿದೆ. ವೈದ್ಯರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ಆರೋಗ್ಯದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಬೇಡ ಎಂದು ತಿಳಿಸಿದ್ದಾರೆ.

ಈ ಕುರಿತು ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆ ಸಜ್ಜಾಗಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ಡಾ.ರಮೇಶ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಈ ವರೆಗೆ ಯಾವುದೇ ಹೀಟ್ ಸ್ಟ್ರೋಕ್ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವರದಿಯಾಗಿಲ್ಲವಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಒಂದು ವಾರ್ಡ್‌ನಲ್ಲಿ ಎರಡು ಬೆಡ್ ಮೀಸಲಿಡಲಾಗಿದೆ. ಅಲ್ಲದೆ ಔಷಧೀ, ಉಪಕರಣ, ಸಿಬ್ಬಂದಿಗಳು ನೇಮಕ ಮಾಡಲಾಗಿದೆ ಎಂದಿದ್ದಾರೆ.

ಏನಿದು ಹೀಟ್ ಸ್ಟ್ರೋಕ್?

ಅತಿಯಾದ ಶಾಖಕ್ಕೆ ದೇಹವು ಒಡ್ಡಿಕೊಂಡಾಗ, ದೇಹದ ಉಷ್ಣತೆಯನ್ನು ನಿಯಂತ್ರಿಸಲು ಸಾಧ್ಯವಾಗದೆ ಹೋದಾಗ ‘ಹೀಟ್ ಸ್ಟ್ರೋಕ್’ ಸಂಭವಿಸುತ್ತದೆ. ಇದು ಜೀವಕ್ಕೆ ಅಪಾಯಕಾರಿಯಾಗಬಲ್ಲ ಸ್ಥಿತಿಯಾಗಿದ್ದು, ತಕ್ಷಣದ ಚಿಕಿತ್ಸೆ ಅತ್ಯಗತ್ಯ.

ಮಕ್ಕಳ ಬಗ್ಗೆ ವಿಶೇಷ ಕಾಳಜಿ ಅಗತ್ಯ

ಬೇಸಗೆ ರಜೆಯಲ್ಲಿ ಮಗು ಎಂದಿನಂತೆ ಆಟವಾಡದೆ ಮಂಕಾಗಿದ್ದರೆ, ಅತಿಯಾದ ಸುಸ್ತು ಕಂಡುಬಂದು ಪದೇ ಪದೇ ಮಲಗಿಕೊಳ್ಳುತ್ತಿದ್ದರೆ, ಆಟವಾಡಲು ಆಸಕ್ತಿ ತೋರದೇ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ. ಇದು ಹೀಟ್ ಸ್ಟೋಕ್‌ನ ಆರಂಭಿಕ ಲಕ್ಷಣವಾಗಿರಬಹುದು.

ಹೀಟ್ ಸ್ಟೋಕ್‌ನ ಪ್ರಮುಖ ಲಕ್ಷಣಗಳು

ಅಧಿಕ ದೇಹದ ಉಷ್ಣತೆ: ದೇಹದ ತಾಪಮಾನ ಅತಿಯಾಗಿ ಏರುವುದು ಮತ್ತು ತೀವ್ರ ಜ್ವರ ಕಾಣಿಸಿಕೊಳ್ಳುವುದು.

ಮಾನಸಿಕ ಸ್ಥಿತಿಯಲ್ಲಿ ಬದಲಾವಣೆ: ಗೊಂದಲಕ್ಕೊಳಗಾಗುವುದು, ಮಾತಿನಲ್ಲಿ ತೊದಲುವುದು, ಅತಿಯಾದ ಕಿರಿಕಿರಿ ಅಥವಾ ಪ್ರಜ್ಞೆ ತಪ್ಪುವುದು.

ಬೆವರಿನ ಕೊರತೆ: ವಿಪರೀತ ಶಾಖವಿದ್ದರೂ ದೇಹ ಬೆವರುವುದಿಲ್ಲ. ಚರ್ಮವು ತುಂಬಾ ಬಿಸಿ ಮತ್ತು ಒಣಗಿದಂತೆ ಭಾಸವಾಗುತ್ತದೆ.

ವಾಕರಿಕೆ ಮತ್ತು ವಾಂತಿ: ಹೊಟ್ಟೆ ಕೆಟ್ಟ ಅನುಭವವಾಗುವುದು ಮತ್ತು ಸತತವಾಗಿ ವಾಂತಿ ಬರುವುದು.

ವೇಗದ ಉಸಿರಾಟ: ಹೃದಯ ಬಡಿತ ಜೋರಾಗುವುದು ಮತ್ತು ಉಸಿರಾಟದಲ್ಲಿ ವೇಗ ಕಂಡುಬರುವುದು (ದೇಹವನ್ನು ತಂಪಾಗಿಸಲು ಹೃದಯವು ಹೆಚ್ಚು ಶ್ರಮ ಪಡುತ್ತದೆ).

ತಲೆತಿರುಗುವಿಕೆ: ವಿಪರೀತ ತಲೆನೋವು ಅಥವಾ ತಲೆ ಸುತ್ತು ಬರುವುದು.

ಮುನ್ನೆಚ್ಚರಿಕೆ ಕ್ರಮಗಳು

ಅತಿಯಾದ ನೀರು ಮತ್ತು ದ್ರವ ಪದಾಯಗಳನ್ನು (ಎಳನೀರು, ಮಜ್ಜಿಗೆ) ಸೇವಿಸಿ.

ಮಧ್ಯಾಹ್ನದ ವೇಳೆ ಅನಗತ್ಯವಾಗಿ ಬಿಸಿಲಿಗೆ ಹೋಗಬೇಡಿ.

ಸಡಿಲವಾದ ಮತ್ತು ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ.

ತಲೆತಿರುಗುವಿಕೆ ಅಥವಾ ಪ್ರಜ್ಞೆ ತಪ್ಪುವ ಲಕ್ಷಣ ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಿ.

ಬಿಸಿಲು ಕೇವಲ ಬೆವರಿಸುವುದಿಲ್ಲ, ನಿಮ್ಮ ಆರೋಗ್ಯವನ್ನೂ ಹದಗೆಡಿಸಬಹುದು. ಮುನ್ನೆಚ್ಚರಿಕೆಯೇ ಮದ್ದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!