ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

DCM D.K. Shivakumar's warning to Congress MLAs

ನವದೆಹಲಿ: “ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಘರ್ಜಿಸಿದ್ದಾರೆ.

ದೆಹಲಿ ನಾಯಕರಿಗೆ ಚುನಾವಣೆ ಕುರಿತು ವರದಿ ನೀಡುತ್ತೀರಾ ಎಂದು ಕೇಳಿದಾಗ, “ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಚುನಾವಣೆ ಪ್ರವಾಸ ಮಾಡಿದ್ದೆ. ಎಲ್ಲೆಲ್ಲಿ ಏನಾಗಿದೆ ಎಂದು ನಮ್ಮ ನಾಯಕರಿಗೆ ಮಾಹಿತಿ ನೀಡಬೇಕಿದೆ. ಈ ಮೂರು ರಾಜ್ಯಗಳಲ್ಲಿ ಪ್ರಚಾರ ಮಾಡಲು ಪಕ್ಷ ನನಗೆ ಜವಾಬ್ದಾರಿ ನೀಡಿತ್ತು. ಕರ್ನಾಟಕದಲ್ಲಿ ಚುನಾವಣೆ ಮಾಡುವುದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯ. ಅದನ್ನು ಮಾಡುತ್ತೇನೆ” ಎಂದು ತಿಳಿಸಿದರು.

ರಾಜ್ಯದಲ್ಲಿ ಬದಲಾವಣೆಗಳ ಬಗ್ಗೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ಜವಾಬ್ದಾರಿ ಸ್ಥಾನದಲ್ಲಿರುವ ನಾನು ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡಲು ಆಗುವುದೇ? ನಾನು ಮಾಧ್ಯಮಗಳ‌ ಮುಂದೆ ಮಾತಾಡುವುದಿಲ್ಲ. ನೀವು ನನ್ನಿಂದ ಈ ಬಗ್ಗೆ ಮಾಹಿತಿ ಪಡೆಯುವ ಪ್ರಯತ್ನವನ್ನೂ ಮಾಡಬೇಡಿ” ಎಂದು ತಿಳಿಸಿದರು.

ಯಾರಿಗಾದರೂ ನೀರು ಕುಡಿಸುತ್ತೀರಾ ಎಂದು ಕೇಳಿದಾಗ, “ಬಿಸಿಲು ಜಾಸ್ತಿ ಇದೆ. ತಮಿಳುನಾಡು, ಪಿರಿಯಾಪಟ್ಟಣಕ್ಕೆ ಹೋದಾಗ ಅಲ್ಲಿ ಬಿಸಿಲು ಹೆಚ್ಚಾಗಿತ್ತು. ಕೇರಳದಲ್ಲಿ ಸ್ವಲ್ಪ ಪರವಾಗಿಲ್ಲ” ಎಂದರು.

ಮುಸ್ಲಿಂ ಸಮುದಾಯದ ಆಕ್ರೋಶದ ಬಗ್ಗೆ ಶಾಸಕರು ಹಾಗೂ ಸಚಿವರು ಸಿಎಂ ಭೇಟಿ ಮಾಡಿ ಈ ವಿಚಾರವಾಗಿ ಮಧ್ಯಪ್ರವೇಶಿಸಿ ಎಂದು ಚರ್ಚೆ ಮಾಡಿದ್ದಾರೆ ಎಂದು ಕೇಳಿದಾಗ, “ಪಕ್ಷದ ತಳಮಟ್ಟದಲ್ಲಿ ನಮಗೆ ಕೆಲವು ಮಾಹಿತಿ ಬಂದಿದೆ. ನಾವು ಎಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹೋಗಬೇಕು” ಎಂದರು.

ಯಾರಿಗೆ ಯಾರು ಆಪ್ತರೋ ನನಗೆ ಗೊತ್ತಿಲ್ಲ

ಸಿಎಂ ಆಪ್ತ ಸಚಿವರು ಬುಧವಾರ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ ಎಂದಾಗ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಯಾರು ಯಾರ ಆಪ್ತರು, ಯಾರಿಗೆ ಆಪ್ತರಲ್ಲ ಎಂದು ನನಗೆ ಗೊತ್ತಿಲ್ಲ. ನಾನು ಈ ಸಭೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಆಗ್ರಹಿಸಲು ಮತ್ತೆ ದೆಹಲಿ ಪ್ರವಾಸ ಮಾಡಲಿದ್ದಾರೆ ಎಂದು ಕೇಳಿದಾಗ, “ಕಾದು ನೋಡೋಣ” ಎಂದರು.

ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ

ವಿವಿಧ ರಾಜ್ಯಗಳ ಚುನಾವಣೆ ಬಗ್ಗೆ ಕೇಳಿದಾಗ, “ತಮಿಳುನಾಡು, ಕೇರಳ, ಅಸ್ಸಾಂ ರಾಜ್ಯಗಳಲ್ಲಿ ವಿಧಾನಸಭೆ ಹಾಗೂ ಕರ್ನಾಟಕದಲ್ಲಿ ಉಪಚುನಾವಣೆ ಮುಗಿಸಿದ್ದೇವೆ. ನಿನ್ನೆ ಕೂಡ ಅಸ್ಸಾಂ ಚುನಾವಣೆ ಸಂಬಂಧ ಜೂಮ್ ಸಭೆ ಮಾಡಿದ್ದೇವೆ. ನಾನು ಮತ್ತೆ ಅಸ್ಸಾಂಗೆ ತೆರಳಲಿದ್ದೇನೆ. ಕೇರಳ ಹಾಗೂ ತಮಿಳುನಾಡಿನಲ್ಲಿ ನಮ್ಮ ಮೈತ್ರಿಕೂಟದೊಂದಿಗೆ ಸರ್ಕಾರ ರಚನೆ ಮಾಡುತ್ತೇವೆ. ಅಸ್ಸಾಂನಲ್ಲಿ ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಬಹಳಷ್ಟು ಶ್ರಮಪಟ್ಟು ಕೆಲಸ ಮಾಡಿದ್ದಾರೆ. ನಮ್ಮ ಮೈತ್ರಿಕೂಟಕ್ಕೆ ಸಾಕಾರಾತ್ಮಕವಾಗಿದೆ” ಎಂದರು.

ಬೆಂಗಳೂರು ಸಮಸ್ಯೆ ಕುರಿತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಜತೆ ಚರ್ಚೆ

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ಹೈದರಾಬಾದ್ ಗೆ ಕುಟುಂಬ ಸಮೇತ ಹೋಗಿದ್ದೆ, ಅಲ್ಲಿಂದ ದೆಹಲಿಗೆ ಬಂದಿರುವೆ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ. ಬೆಂಗಳೂರು ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಬೇಕಿದೆ. ಭೇಟಿಗೆ ಸಮಯವಕಾಶ ಕೇಳಿದ್ದೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಬೆಳಗ್ಗೆ 11.45ಕ್ಕೆ ಭೇಟಿಗೆ ಸಮಯ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

ಅಲ್ಪಸಂಖ್ಯಾತ ನಾಯಕರ ಅಸಮಧಾನ ವಿಚಾರವಾಗಿ ಕೇಳಿದಾಗ, “ಅವರು ತಮ್ಮ ಭಾವನೆ, ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ತಪ್ಪಿಲ್ಲ. ಕೆಲವು ಬಾರಿ ನಾವು ಹೇಳಿರುವುದು ಸರಿ ಇಲ್ಲದಿರಬಹುದು. ಕೆಲವು ಬಾರಿ ಅವರು ಹೇಳಿದ್ದು ಸರಿ ಇಲ್ಲದಿರಬಹುದು. ನಾವೆಲ್ಲರೂ ಕೂತು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ಅಮಾನತು ವಾಪಸ್ ಪಡೆಯಬೇಕು ಎಂಬ ಆಗ್ರಹದ ಬಗ್ಗೆ ಕೇಳಿದಾಗ, “ನಾವು ಯಾರನ್ನು ಅಮಾನತು ಮಾಡಿದ್ದೇವೆ. ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಪತ್ರದಲ್ಲಿ ಏನಿದೆ ಎಂದು ಒಮ್ಮೆ ವಿಶ್ಲೇಷಣೆ ಮಾಡಿ” ಎಂದರು.

Mantralaya: 22 ದಿನಗಳಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠದ ಹುಂಡಿ ಆದಾಯ ಎಷ್ಟು ಗೊತ್ತೆ.?

Mantralaya: Do you know how much income the Raghavendra Swamy Mutt has earned in 22 days?
Mantralaya: Do you know how much income the Raghavendra Swamy Mutt has earned in 22 days?

ಮಂತ್ರಾಲಯ: ಮಾರ್ಚ್ 31, ಮಂಗಳವಾರದಿಂದ ಏಪ್ರಿಲ್ 21 ರವರೆಗೆ ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿ (Raghavendra Swamy) ಮಠದಲ್ಲಿ ಭಕ್ತರು ಅರ್ಪಿಸಿದ ಹುಂಡಿ ಕಾಣಿಕೆಗಳ ಎಣಿಕೆ ಬುಧವಾರ ನಡೆಯಿತು. ಈ ಎಣಿಕೆಯಲ್ಲಿ ಒಟ್ಟು 3,25,96,854 ರೂ.ಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯದ ಮುಖ್ಯಸ್ಥ ಸುಬುಧೇಂದ್ರ ತೀರ್ಥರ ಸೂಚನೆಯಂತೆ ಹುಂಡಿ ಎಣಿಕೆಗಾಗಿ ವಿಶೇಷ ಗ್ಯಾಲರಿಗಳನ್ನು ಸ್ಥಾಪಿಸಲಾಗಿತ್ತು. ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ, ಎಣಿಕೆ ಸಭಾಂಗಣವನ್ನು ಪ್ರವೇಶಿಸಿದ ನಂತರ ಯಾರಿಗೂ ಹೊರಹೋಗಲು ಅವಕಾಶವಿರಲಿಲ್ಲ.

ತಡವಾಗಿ ಬರುವವರು ಒಳಗೆ ಪ್ರವೇಶಿಸದಂತೆ ಸೈನ್ ಬೋರ್ಡ್‌ಗಳನ್ನು ಸ್ಥಾಪಿಸಲಾಗಿತ್ತು ಎಂದು ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸ ರಾವ್ ತಿಳಿಸಿದ್ದಾರೆ.

ಶಾಲಾ-ಕಾಲೇಜುಗಳ ರಜೆ ಹಾಗೂ ರಾಯರ ದರ್ಶನದ ಹಂಬಲದಿಂದಾಗಿ ದೇಶದ ನಾನಾ ಮೂಲೆಗಳಿಂದ ಭಕ್ತರು ಮಂತ್ರಾಲಯಕ್ಕೆ ದೌಡಾಯಿಸುತ್ತಿದ್ದು, ಬಿರುಬೇಸಿಗೆಯಲ್ಲಿಯೂ ಕಾಣಿಕೆ ಮೊತ್ತದಲ್ಲಿ ಭಾರಿ ಏರಿಕೆ ಕಂಡುಬಂದಿದೆ.

ಹುಂಡಿ ಎಣಿಕೆಯ ಅಧಿಕೃತ ವರದಿಯ ಪ್ರಕಾರ, ಒಟ್ಟು 3,15,62,354 ರೂಪಾಯಿ ಮೌಲ್ಯದ ಕರೆನ್ಸಿ ನೋಟುಗಳು ಹಾಗೂ 10,34,500 ರೂಪಾಯಿ ಮೌಲ್ಯದ ನಾಣ್ಯಗಳು ಸಂಗ್ರಹವಾಗಿವೆ. ನಗದಿನ ಜೊತೆಗೆ ಭಕ್ತರು ರಾಯರಿಗೆ ತಮ್ಮ ಭಕ್ತಿಯ ಹರಕೆಯಾಗಿ 47 ಗ್ರಾಂ ಚಿನ್ನ ಮತ್ತು 592 ಗ್ರಾಂ ಬೆಳ್ಳಿಯನ್ನು ಸಮರ್ಪಿಸಿದ್ದಾರೆ.

ಮಠದ ಆವರಣದಲ್ಲಿ ನಡೆದ ಈ ಬೃಹತ್ ಎಣಿಕೆ ಕಾರ್ಯದಲ್ಲಿ ನೂರಾರು ಮಠದ ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಅತ್ಯಂತ ಶ್ರದ್ಧೆಯಿಂದ ಭಾಗವಹಿಸಿ ಪ್ರಕ್ರಿಯೆಯನ್ನು ಸುಗಮವಾಗಿ ಪೂರೈಸಿದ್ದಾರೆ.

ಏಪ್ರಿಲ್ ತಿಂಗಳ ಅಂತ್ಯದವರೆಗೆ ರಜೆ ಇರುವುದರಿಂದ ಮುಂದಿನ ದಿನಗಳಲ್ಲಿ ಭಕ್ತರ ಸಂಖ್ಯೆ ಮತ್ತು ಕಾಣಿಕೆ ಸಂಗ್ರಹ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮಠದ ಮೂಲಗಳು ತಿಳಿಸಿವೆ.

ರಾಜಕೀಯ

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

"ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಘರ್ಜಿಸಿದ್ದಾರೆ

[ccc_my_favorite_select_button post_id="121329"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!