ದೊಡ್ಡಬಳ್ಳಾಪುರ: ನಗರದ ಖಾಸ್ ಬಾಗ್ನಲ್ಲಿನ ಶ್ರೀಗಂಗಾ ಭಗತ್ ಸಿಂಗ್-ಚಂದ್ರಶೇಖರ್ ಆಜಾದ್ ಆಸ್ಪತ್ರೆ ವತಿಯಿಂದ ತಾಲೂಕು ಶಿವರಾಜ್ಕುಮಾರ್ ಕನ್ನಡ ಸೇನಾ ಸಮಿತಿ, ಲಯನ್ಸ್ ಕ್ಲಬ್ ಸಹಯೋಗದಲ್ಲಿ ವರನಟ ಡಾ.ರಾಜ್ಕುಮಾರ್ (Dr. Rajkumar) 98ನೇ ಜನ್ಮ ದಿನಾಚರಣೆ ಅಂಗವಾಗಿ ಏಪ್ರಿಲ್ 24 ರಂದು ಬೆಳಿಗ್ಗೆ 9.30ಕ್ಕೆ ಖಾಸ್ಬಾಗ್ನ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರಾಜ್ಕುಮಾರ್ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿಸಬೇಕಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ರಮೇಶ್ಗೌಡ ತಿಳಿಸಿದ್ದಾರೆ.

ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದಿಂದ ಜನ್ಮ ದಿನಾಚರಣೆ
ತಾಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಏಪ್ರಿಲ್ 24ರಂದು ಡಾ.ರಾಜ್ಕುಮಾರ್ 98ನೇ ಜನ್ಮ ದಿನಾಚರಣೆ ಅಂಗವಾಗಿ, ಬೆಳಿಗ್ಗೆ 9 ಗಂಟೆಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿ ಅಭಿಷೇಕ, ಪೂಜಾ ಕಾರ್ಯಂಕ್ರಮ, ಸಿಹಿ ವಿತರಣೆಯಿದೆ.
ಜಯಚಾಮರಾಜೇಂದ್ರ ವೃತ್ತದಲ್ಲಿನ ಡಾ.ರಾಜ್ಕುಮಾರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಡಾ.ರಾಜ್ಕುಮಾರ್ ಸ್ಮರಣೆ ಕಾರ್ಯಂಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಮ್ ಮೆಲೋಡಿಸ್ ತಂಡದಿಂದ ವಾದ್ಯಗೋಷ್ಟಿ ಕಾರ್ಯಕ್ರಮವಿದೆ ಎಂದು ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ ತಿಳಿಸಿದ್ದಾರೆ.
ಇನ್ಸ್ಪೆಕ್ಟರ್ ಹರೀಶ್ ಅವರಿಗೆ ಪಿತೃವಿಯೋಗ

ದೊಡ್ಡಬಳ್ಳಾಪುರ: ನಗರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದ ಇನ್ಸ್ಪೆಕ್ಟರ್ ಹರೀಶ್ ಅವರ ತಂದೆ ರಾಮಪ್ಪ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಬಿಎಂಟಿಸಿ ಬಸ್ ನಿರ್ವಾಹಕರಾಗಿ ಕಾರ್ಯನಿರ್ವಹಸಿದ್ದ ರಾಮಪ್ಪ ಅವರು, ಮಡದಿ, ಇನ್ಸ್ಪೆಕ್ಟರ್ ಹರೀಶ್ ಅವರು ಸೇರಿದಂತೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮೃತ ಅಂತಿಮ ದರ್ಶನಕ್ಕೆ ಬೆಂಗಳೂರಿನ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಂತ್ಯಕ್ರಿಯೆ ಸ್ವಗ್ರಾಮ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಸ್ಧೆನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
2022ರಲ್ಲಿ ನಡೆದಿದ್ದ ಕೊಲೆ ಮತ್ತು ಡಕಾಯಿತಿ ಪ್ರಕರಣ ಒಂದರ ಹಿನ್ನೆಲೆಯಲ್ಲಿ ತನಿಖಾ ಕಾರ್ಯದಲ್ಲಿ ನಿರತರಾಗಿದ್ದ ಹರೀಶ್ ಅವರಿಗೆ, ಗುರುವಾರ ಸಂಜೆ ತಂದೆ ಅಗಲಿಕೆಯ ಆಘಾತಕಾರಿ ಮಾಹಿತಿ ತಿಳಿದು ಬಂದಿದೆ.
