ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

Bowring Hospital tragedy; H.D. Deve Gowda sad, H.D. Kumaraswamy shocked..

ಬೆಂಗಳೂರು: ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು, ಮಳೆ ಅನಾಹುತಗಳು ಸಂಭವಿಸಿದಂತೆ ಶಾಶ್ವತ ಪರಿಹಾರೋಪಾಯಗಳನ್ನು ರೂಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಮಕ್ಕಳು ಸೇರಿ ಏಳು ಜನರು ದುರ್ಮರಣಕ್ಕೆ ತುತ್ತಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಈ ಹೃದಯವಿದ್ರಾವಕ ದುರಂತ ನನ್ನ ಮನ ಕಲಕಿದೆ ಎಂದಿದ್ದಾರೆ.

ಮೃತರ ಕುಟುಂಬಗಳಿಗೆ ನನ್ನ ಪ್ರಗಾಢ ಸಂತಾಪಗಳು ಹಾಗೂ ರಾಜ್ಯ ಸರಕಾರವು ಗಾಯಾಳುಗಳಿಗೆ ಎಲ್ಲಾ ಬಗೆಯ ತುರ್ತುಚಿಕಿತ್ಸೆ ನೀಡಿ ಅವರ ಕುಟುಂಬಗಳಿಗೆ ಅಗತ್ಯ ನೆರವು ನೀಡಬೇಕು ಮತ್ತು ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಹೇಳಿದಾರೆ.

ಪ್ರತಿ ಬಾರಿ ಮಳೆ ಬಂದಾಗಲೂ ದುರಂತಗಳು ಸಂಭವಿಸುತ್ತಿವೆ. ಸರಕಾರ ಪಾಠ ಕಲಿಯುತ್ತಿಲ್ಲ. ನಗರದಲ್ಲಿ ಇಂತಹ ಅನಾಹುತಗಳು ಸಂಭವಿಸಿದಂತೆ ಶಾಶ್ವತ ಪರಿಹಾರಗಳನ್ನು ರೂಪಿಸುವ ಅಗತ್ಯವಿದೆ. ಇಷ್ಟಕ್ಕೂ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದಿದ್ದು ಹೇಗೆ? ಅದನ್ನು ಯಾವಾಗ ನಿರ್ಮಿಸಿದ್ದರು? ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇದು ಯಾರ ನಿರ್ಲಕ್ಷ ಎಂಬುದನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.

ಸರಕಾರವು ಮೃತರ ಕುಟುಂಬಗಳ ನೆರವಿಗೆ ಧಾವಿಸುವುದು ಎಂದರೆ ಪರಿಹಾರ ನೀಡಿ ಕೈ ತೊಳೆದುಕೊಳ್ಳುವುದಲ್ಲ. ಇಂತಹ ಘೋರ ಘಟನೆಗಳು ಮರುಕಳಿಸದಂತೆ ಕಠಿಣ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ನಿರ್ವಹಣೆ, ಕಟ್ಟೆಚ್ಚರ ಎಂದರೆ ನಿರಂತರ ಪ್ರಕ್ರಿಯೆ. ಆದರೆ, ಇಲ್ಲಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ನಡೆಯುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಬೌರಿಂಗ್ ಕಾಂಪೌಂಡ್ ಕುಸಿದು ದುರಂತ; ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ದುಃಖ

ಬೆಂಗಳೂರಿನಲ್ಲಿ ಮಳೆ ಅನಾಹುತದಿಂದ ಬೋರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಮಂದಿ ಮೃತಪಟ್ಟಿರುವ ದುರದೃಷ್ಟಕರ ಘಟನೆ ನನಗೆ ಅತ್ಯಂತ ನೋವು ತಂದಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿಗಳು; ಈ ಘಟನೆ ನನಗೆ ಬಹಳ ದುಃಖ ತಂದಿದೆ. ದಯವಿಟ್ಟು ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗದವರಿಗೆ ನೋವುನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ದೇವೇಗೌಡರು; ಸಾರ್ವಜನಿಕರು ದಯವಿಟ್ಟು ಗಾಳಿ, ಮಳೆ, ಗುಡುಗು, ಸಿಡಿಲಿನಂತಹ ಸಂದರ್ಭಗಳಲ್ಲಿ ಎಚ್ಚರದಿಂದ ಇರಬೇಕು. ರಕ್ಷಣೆಗಾಗಿ ಮರಗಳು, ಶೆಡ್, ಕಾಂಪೌಂಡ್ ಸೇರಿದಂತೆ ಹಳೆಯದಾದ ಕಟ್ಟಡಗಳ ಬಳಿ ನಿಲ್ಲಬೇಡಿ. ಪ್ರತಿಯೊಂದು ಜೀವವೂ ಅಮೂಲ್ಯ. ನಿಮ್ಮ ಪ್ರೀತಿ ಪಾತ್ರರೂ ನಿಮಗಾಗಿ ಕಾದಿರುತ್ತಾರೆ ಎಂಬುದನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಇನ್ನು ಕೆಲವು ದಿನಗಳಲ್ಲಿ ಮಳೆಗಾಲ ಶುರುವಾಗಲಿದೆ. ರಾಜ್ಯ ಸರ್ಕಾರವು ಸಹ ಮಳೆ ಅನಾಹುತಗಳನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ.
ಮೃತರ ಕುಟುಂಬಕ್ಕೆ ಮಾನವೀಯ ನೆಲೆಗಟ್ಟಿನಲ್ಲಿ ಮುಖ್ಯಮಂತ್ರಿಗಳು ಸೂಕ್ತ ಪರಿಹಾರವನ್ನು ಕೊಡಬೇಕೆಂದು ವಿನಂತಿ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿದ್ದಾರೆ.

ರಾಜಕೀಯ

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121541"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]