
ಬೆಂ. ಗ್ರಾ ಜಿಲ್ಲೆ: ಕೃಷಿ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ (Assistant Technical Manager) ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕನಿಷ್ಠ 01 ವರ್ಷ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
ಆಸಕ್ತರು ಅಗತ್ಯ ದಾಖಲಾತಿಗಳು ಹಾಗೂ ತಮ್ಮ ಬಯೋಡೇಟಾದೊಂದಿಗೆ ಮೇ. 22 ರೊಳಗೆ ಕೃಷಿ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ 208 & 209, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.
ಶೃಂಗೇರಿ ಕ್ಷೇತ್ರದ ಮರುಎಣಿಕೆಯ ಬಗ್ಗೆ ಕೇಳಿದಾಗ, ಚುನಾವಣೆ ಮತ ಎಣಿಕೆ ಸಮಯದಲ್ಲಿ ಪ್ರತಿ ಅಂಚೆ ಮತವನ್ನು ತೆರೆದು ಎರಡೂ ಪಕ್ಷಗಳ ಏಜೆಂಟರು ಹಾಗೂ ಅಧಿಕಾರಿಗಳಿಗೆ ತೋರಿಸಿ ಅದನ್ನು ಮಾನ್ಯ ಮಾಡಿ ಎಣಿಕೆ ಮಾಡಲಾಗಿರುತ್ತದೆ.
ಈ ರೀತಿ ಮತ ಎಣಿಕೆ ಮಾಡಿದ ಬಳಿಕ ಬಿಜೆಪಿ ಅಭ್ಯರ್ಥಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳನ್ನು ತಿದ್ದಲಾಗಿದೆ. ಹೀಗಾಗಿಯೇ ಅವರು ನಿರ್ದಿಷ್ಟ ಮತಗಳ ಬಂಡಲ್ ಅನ್ನೇ ಮರು ಎಣಿಕೆ ಮಾಡಿ ಎಂದು ಪಟ್ಟು ಹಿಡಿದಿದ್ದರು.
ಅಧಿಕಾರಿಗಳು ಹಾಗೂ ಬಿಜೆಪಿ ಅಭ್ಯರ್ಥಿ ಈ ಅಕ್ರಮದಲ್ಲಿ ಭಾಗಿಯಾಗಿದ್ದು, ಗಂಭೀರವಾದ ತನಿಖೆ ನಡೆಯಬೇಕಿದೆ. ಚುನಾವಣಾ ಆಯೋಗವು ಈ ವಿಚಾರದಲ್ಲಿ ನ್ಯಾಯ ಒದಗಿಸಬೇಕಿದೆ. ಇದು ದೇಶದಲ್ಲೇ ಅತಿ ದೊಡ್ಡ ಷಡ್ಯಂತ್ರವಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಇಂತಹ ಕೆಲಸದಲ್ಲಿ ಭಾಗಿಯಾಗಿದ್ದು, ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ರಾಜಕೀಯ ಹೇಗೆ ಮಾಡಬೇಕು ಎಂದು ನಮಗೆ ಗೊತ್ತಿದೆ ಎಂದು ಕಿಡಿಕಾರಿದರು.

