
ದೊಡ್ಡಬಳ್ಳಾಪುರ: ತಾಲೂಕಿನ ಚನ್ನವೀರನಹಳ್ಳಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (PUC) 2026-27ನೇ ಸಾಲಿನಿಂದ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ನೇಮಕಾತಿಗಾಗಿ ಪ್ರಾಂಶುಪಾಲರು ಹಾಗೂ ಸಾಸಲು ಹೋಬಳಿ ಯುವಕರು ಅವಿರತ ಶ್ರಮಿಸುತ್ತಿದ್ದಾರೆ.
ಹೌದು ದೊಡ್ಡಬಳ್ಳಾಪುರ ತಾಲೂಕು ಕೇಂದ್ರದಿಂದ 26 ಕಿಮೀ ದೂರದಲ್ಲಿರುವ ಸಾಸಲು ಹೋಬಳಿಗೊಂದು ಪಿಯು ಕಾಲೇಜು ಬೇಕೆಂಬುದು ಬಹು ವರ್ಷಗಳ ಬೇಡಿಕೆಯಾಗಿದ್ದು, ಶಾಸಕ ಟಿ.ವೆಂಕಟರಮಣಯ್ಯ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಮಂಜೂರಾಗಿದ್ದ ಕಾಲೇಜಿಗೆ, ಈಗ ಧೀರಜ್ ಮುನಿರಾಜು ಅವರು ಶಾಸಕರಾದ ಬಳಿಕ ಮತ್ತೆ ಮರು ಜೀವ ದೊರೆತಿದೆ.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇಲಾಖೆ 2026-27 ನೇ ಶೈಕ್ಷಣಿಕ ಸಾಲಿನಿಂದ ನೂತನವಾಗಿ ಪ್ರಥಮ ಪಿಯುಸಿ (PUC) ಕಾಲೇಜು ಆರಂಭಿಸುತ್ತಿದ್ದು, ವಾಣಿಜ್ಯ ವಿಭಾಗ (EBACS) ಆರಂಭಿಸುತ್ತಿದೆ.
ಚನ್ನವೀರನಹಳ್ಳಿಯ ನೂತನ ಪಿಯು ಕಾಲೇಜಿಗೆ ಪ್ರಾಂಶುಪಾಲರಾಗಿ ಸಾಸಲು ಹೋಬಳಿಯವರೇ ಆದ ಶ್ರೀರಾಮನಹಳ್ಳಿಯ ಕೇಶವ ಮೂರ್ತಿ ಎಸ್.ಎನ್ ಅವರನ್ನು ನೇಮಿಸಿದ್ದು, ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ, ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಗತಿಯಲ್ಲಿದೆ.
ಇನ್ನೂ ಚನ್ನವೀರನಹಳ್ಳಿಯಲ್ಲಿನ ಪ್ರೌಢಶಾಲಾ ಆವರಣದಲ್ಲಿ ಆರಂಭಿಸಲಾಗುತ್ತಿರುವ ನೂತನವಾಗಿ ಕಾಲೇಜಿನಲ್ಲಿ ಅರ್ಹತೆಯುಳ್ಳ ಅನುಭವಿ ಉಪನ್ಯಾಸಕರ ನೇಮಕ, ವಿದ್ಯಾರ್ಥಿ ವೇತನ ಸೇರಿದಂತೆ ಎಲ್ಲಾ ಸರ್ಕಾರಿ ಸೌಲಭ್ಯ, ವಿಶಾಲ ಆಟದ ಮೈದಾನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಯೋಜಿತ ಕಲಿಕೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶ, ಪ್ರತಿ ವಿದ್ಯಾರ್ಥಿಗಳಿಗೂ ವೈಯಕ್ತಿಕ ಗಮನ ನೀಡುವುದಾಗಿ ಪ್ರಾಂಶುಪಾಲರಾದ ಕೇಶವ ಮೂರ್ತಿ ಭರವಸೆ ನೀಡಿದ್ದಾರೆ.
ಇನ್ನೂ ಪ್ರಥಮವಾಗಿ ಆರಂಭವಾಗುತ್ತಿರುವ ಕಾಲೇಜಿಗೆ ದಾಖಲಾತಿಗಾಗಿ, ಸಾಸಲು ಗ್ರಾಮಪಂಚಾಯಿತಿ ಹಾಗೂ ಆರೂಢಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿಗಳ ಮನೆ ಮನೆಗಳಿಗೆ ಪ್ರಾಂಶುಪಾಲರಾದ ಕೇಶವ ಮೂರ್ತಿ ಹಾಗೂ ಸಾಸಲು ಹೋಬಳಿಯ ಯುವಕರು ಭೇಟಿ ನೀಡಿ, ಪೋಷಕರು, ವಿದ್ಯಾರ್ಥಿಗಳ ಮನವೊಲಿಸುತ್ತಿದ್ದು, ಶತಗತಾಯ ಸಾಸಲು ಹೋಬಳಿಯಲ್ಲಿ ಪ್ರಾರಂಭವಾಗುತ್ತಿರುವ ನೂತನ ಕಾಲೇಜಿಗೆ ಹೆಚ್ಚಿನ ದಾಖಲಾತಿ ಮಾಡಿಸಲು ಶ್ರಮಿಸುತ್ತಿದ್ದಾರೆ.
ಅದ್ಧೂರಿಯಾಗಿ ನೆರವೇರಿದ ಹೊಸಹಳ್ಳಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ (Sri Lakshminarasimha Swamy Brahmarathotsava) ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು.
ಬ್ರಹ್ಮರಥೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗಿನಿಂದಲೂ ಅಭಿಷೇಕ, ಅರ್ಚನೆ ನೆಡೆದು ಶ್ರೀಲಕ್ಷ್ಮೀನರಸಿಂಹಸ್ವಾಮಿಯನ್ನು ದೇವಾಲಯದಿಂದ ತಂದು ಪಂಚ ಕಳಸ ಊಡಿದ ರಥದಲ್ಲಿ ಪ್ರತಿಸ್ಠಾಪಿಸುತಿದ್ದಂತೆ, ಮಧ್ಯಾಹ್ನ 3ಕ್ಕೆ ವೇದಬ್ರಹ್ಮರ ಮಂತ್ರ ಘೋಷಗಳೊಂದಿಗೆ ರಥ ಮುಂದೆ ಸಾಗುತಿದ್ದಂತೆ, ಜಯಘೋಷ ಹಾಕುತ್ತ ಹರಕೆ ಹೊತ್ತ ಭಕ್ತರು, ಭಕ್ತಿ ಭಾವದಿಂದ ಬಾಳೆಹಣ್ಣು, ದವನ ಎಸೆದು ಹರಕೆ ತೀರಿಸಿದರು.
ರಥೋತ್ಸವದಲ್ಲಿ ಭಕ್ತರ ಜೈಕಾರ, ತಮಟೆ ವಾದ್ಯಗಳ ಸದ್ದು ಮುಗಿಲು ಮುಟ್ಟುವಂತಿತ್ತು.
ರಥವನ್ನು ಗ್ರಾಮದ ಮುಖ್ಯ ಬೀದಿಯಿಂದ ಗೊಡ್ಡರಾಯಿಕಲ್ಲಿನವರೆಗೆ ಎಳೆದು ತಂದರು.
ಬ್ರಹ್ಮರಥೋತ್ಸವದ ಅಂಗವಾಗಿ ರಥ ಹಾಗೂ ಗರ್ಭಗುಡಿಯಲ್ಲಿನ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ವಿವಿಧ ಸಮುದಾಯದವತಿಯಿಂದ ಬ್ರಹ್ಮರಥೊತ್ಸವದ ಬರುವ ಭಕ್ತಾಧಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಾಗೂ ಪ್ರಸಾದ ವಿತರಿಸಲು ರಸ್ತೆ ಬದಿಗಳಲ್ಲಿ ಶಾಮಿಯಾನ, ಟೆಂಟ್ ಮತ್ತು ಅರವಂಟಿಕೆಗಳ ವ್ಯವಸ್ಥೆ ಮಾಡಿದ್ದರು.
ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಜಾತ್ರಾ ಮಹೋತ್ಸವ ಮೇ.04 ಆರಂಭವಾಗಿ ಮೇ.08ರ ವರೆಗೆ ನಡೆಯಲಿದೆ.
ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ನಿನ್ನೆ ಕಲ್ಯಾಣೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯತ್ತಿದ್ದು, ವಿಶೇಷ ಅಲಂಕಾರ, ಅಭಿಷೇಕ, ಪೂಜೆ, ಆರತಿ ಕಾರ್ಯಕ್ರಮ ನೆರವೇರಿಸಲಾಗಿದೆ.
ಇಂದು ರಾತ್ರಿ ಲಕ್ಷ್ಮೀನರಸಿಂಹಸ್ವಾಮಿ ಕಲಾತಂಡದವರಿಂದ ‘ಕುರುಕ್ಷೇತ್ರ’ ಅಥವಾ ‘ಶ್ರೀಕೃಷ್ಣಸಂಧಾನ’ ಎಂಬ ಪೌರಾಣಿಕ ನಾಟಕ ನಡೆಯಲಿದೆ.

