TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

Governor's move to block TVK's right to form government is not right: DCM D.K. Shivakumar

ಬೆಂಗಳೂರು: “TVK ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಟಿವಿಕೆ ಪಕ್ಷಕ್ಕೆ ತಮಿಳುನಾಡು ರಾಜ್ಯಪಾಲರು ಬಹುಮತ ಸಾಬೀತಿಗೆ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದಾಗ, ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು.‌

ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಈ ರೀತಿ ಮಾಡಿದ್ದರು. ವಾಜಪೇಯಿ ಅವರಿಗೂ ಸಹ ಇದೇ ರೀತಿ ಸರ್ಕಾರ ರಚಿಸಲು ಅನುಮತಿ ನೀಡಿ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಟಿವಿಕೆಗೆ ಅವಕಾಶ ನೀಡದಿರುವುದು ತಪ್ಪು ಎಂದರು.

“ಮೊದಲು ಬಹುಮತ ಸಾಬೀತಿಗೆ ಅವಕಾಶ ನೀಡಬೇಕು. ಒಂದು ರಾಜ್ಯದ ಜನರ ಭಾವನೆಗಳಿಗೆ ಬೆಲೆ ಕೊಡಬೇಕು. ಇದು ಪ್ರಜಾಪ್ರಭುತ್ವ. ಒಂದು ಮತದಿಂದ ಬಹುಮತ ಬರಬಹುದು ಅಥವಾ ಕಳೆದುಕೊಳ್ಳಬಹುದು‌. ವಾಜಪೇಯಿ ಅವರಿಗೆ ಇದೇ ರೀತಿ ಆಗಲಿಲ್ಲವೇ? ಒಂದೊಮ್ಮೆ ಬಹುಮತ ಸಾಬೀತು ಆಗದೇ ಹೋದರೆ ಮುಂದಿನ ಆಯ್ಕೆ ನೋಡಬಹುದು” ಎಂದರು.

ಹೊಸ ಪಾಲಿಕೆ ಕಚೇರಿ; ಸ್ಥಳ ಪರಿಶೀಲನೆ ನಂತರ ತೀರ್ಮಾನ

ಬೆಂಗಳೂರು ಉತ್ತರ ಪಾಲಿಕೆಯ ಹೊಸ ಕಚೇರಿ ನಿರ್ಮಾಣ ಮಾಡಬೇಕು ಎಂದು ಮೂರು- ನಾಲ್ಕು ಸ್ಥಳಗಳ ಪ್ರಸ್ತಾವನೆಯಿದೆ. ಸ್ಥಳ ಪರಿಶೀಲನೆ ಮಾಡಿ ನಿರ್ಧಾರ ಮಾಡಬೇಕಿದೆ. ಇದರ ಬಗ್ಗೆ ಮಂತ್ರಿಗಳು, ಶಾಸಕರು ತಮ್ಮದೇ ಆದ ಅಭಿಪ್ರಾಯ ನೀಡಿದ್ದಾರೆ. ಸ್ಥಳ ಪರಿಶೀಲನೆ ನಂತರ ತೀರ್ಮಾನ ಮಾಡಲಾಗುವುದು.

ಜಿಕೆವಿಕೆಯಲ್ಲಿ ನಿರ್ಮಾಣ ಮಾಡಲಾಗುವುದೇ ಎಂದಾಗ, “ಇಲ್ಲ, ಸದ್ಯಕ್ಕೆ ಆ ಆಲೋಚನೆ ಇಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದು ಉತ್ತರಿಸಿದರು.

ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭೇಟಿ ಮಾಡಿದ್ದರ ಬಗ್ಗೆ ಕೇಳಿದಾಗ, “ಬೆಳಗಾವಿ ಜಿಲ್ಲೆಯ ಒಂದಷ್ಟು ನೀರಾವರಿ ಯೋಜನೆಗಳನ್ನು ಚರ್ಚೆ ನಡೆಸಲು ಭೇಟಿ ಮಾಡಿದ್ದರು”ಎಂದರು.

ಕಾಂಗ್ರೆಸ್ ಶಾಸಕಿಯ ಬಲವಂತವಾಗಿ ಅಪ್ಪಿಕೊಳ್ಳಲು ಮುಂದಾದ ವ್ಯಕ್ತಿ; Video ವೈರಲ್

Man forcibly tries to hug Congress MLA; Video goes viral
Man forcibly tries to hug Congress MLA; Video goes viral

ತಿರುವನಂತಪುರಂ: ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ತಿರುವನಂತಪುರಂ ಪ್ರಧಾನ ಕಚೇರಿಯಿಂದ ಬಂದಿರುವ ವಿಡಿಯೋವೊಂದು ವೈರಲ್ ಆಗಿದ್ದು, ಕೊಲ್ಲಂ ಶಾಸಕಿ ಅಡ್ವ. ಬಿಂದು ಕೃಷ್ಣ ಅವರನ್ನು ಶಾಸಕಾಂಗ ಪಕ್ಷದ ಸಭೆಯ ವೇಳೆ ಚೆರಿಯನ್ ಫಿಲಿಪ್ ಇಷ್ಟವಿಲ್ಲದಿದ್ದರೂ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಬಿಂದು ಕೃಷ್ಣ ಮಾಧ್ಯಮದ ಸದಸ್ಯರನ್ನು ಸ್ವಾಗತಿಸುತ್ತಾ, ಚೆರಿಯನ್ ಫಿಲಿಪ್ ಅವರನ್ನು ಸಮೀಪಿಸುತ್ತಿರುವ ದೃಶ್ಯಗಳಿವೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ದೃಶ್ಯಗಳ ಪ್ರಕಾರ, ಮಹಿಳಾ ಶಾಸಕಿ ಬಿಂದು ಕೃಷ್ಣ ಹಸ್ತಲಾಘವಕ್ಕಾಗಿ ಕೈ ಚಾಚುತ್ತಿರುವಂತೆ ಕಂಡುಬಂದಿದೆ. ಆದಾಗ್ಯೂ, ಚೆರಿಯನ್ ಫಿಲಿಪ್ ಅವರನ್ನು ಅಪ್ಪಿಕೊಳ್ಳಲು ಮುಂದೆ ಬಂದಿದ್ದಾರೆ.

ಬಿಂದು ಕೃಷ್ಣ ದೂರ ಸರಿದಂತೆ ಕಂಡುಬಂದಾಗ, ಅವರು ಮತ್ತೊಮ್ಮೆ ಅಪ್ಪಿಕೊಳ್ಳಲು ಪ್ರಯತ್ನಿಸುವ ಮೊದಲು ಅವರು ಕೈಮುಗಿದು ಮುಂದೆ ಸಾಗಿದರು.

ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ, ಅನೇಕ ಬಳಕೆದಾರರು ಸಾರ್ವಜನಿಕ ಮತ್ತು ವೃತ್ತಿಪರ ನೆಲೆಯಲ್ಲಿ ಈ ದುರ್ವತೆನೆಯನ್ನು ಪ್ರಶ್ನಿಸಿದ್ದಾರೆ.

ಹಲವಾರು ವ್ಯಾಖ್ಯಾನಕಾರರು ಒಮ್ಮೆ ಅಸ್ವಸ್ಥತೆ ಅಥವಾ ಇಷ್ಟವಿಲ್ಲದಿರುವಿಕೆ ವ್ಯಕ್ತಪಡಿಸಿದ ನಂತರ, ವೈಯಕ್ತಿಕ ಗಡಿಗಳನ್ನು ಗೌರವಿಸಬೇಕು ಎಂದು ವಾದಿಸಿದ್ದಾರೆ.

ಈ ಘಟನೆಯು ರಾಜಕೀಯ ಸ್ಥಳಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಡವಳಿಕೆ, ಒಪ್ಪಿಗೆ ಮತ್ತು ಸಾರ್ವಜನಿಕ ಸಭ್ಯತೆಯ ಬಗ್ಗೆ ಚರ್ಚೆಗಳನ್ನು ಮತ್ತೆ ಹುಟ್ಟುಹಾಕಿದೆ.

ರಾಜಕೀಯ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ

"TVK ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಹೇಳಿದರು.

[ccc_my_favorite_select_button post_id="121880"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]