Daily Story| ಹರಿತಲೇಖನಿ ದಿನಕ್ಕೊಂದು ಕಥೆ: ವೀರ ಅಭಿಮನ್ಯು

Daily Story: ಮಹಾಭಾರತದಲ್ಲಿ ಒಂದೊಂದು ಪಾತ್ರವೂ ಒಂದೊಂದು ನೈಪುಣ್ಯವನ್ನು ಬಿಂಬಿಸುತ್ತದೆ. ವಿವೇಚನೆಗೆ ಧರ್ಮರಾಯನಾದರೆ, ಬಿಲ್ವಿದ್ಯೆಗೆ ಅರ್ಜುನ, ಬಲಪರಾಕ್ರಮಕ್ಕೆ ಭೀಮನಾದರೆ ಪ್ರತಿಜ್ಞೆಗೆ ಭೀಷ್ಮ ಪಿತಾಮಹರನ್ನು ಉದಾಹರಿಸಲಾಗುತ್ತದೆ. ಕಪಟತನಕ್ಕೆ ಶಕುನಿಯಾದರೆ ಶೌರ್ಯಕ್ಕೆ ಅಭಿಮನ್ಯು ಹೆಸರುವಾಸಿಯಾಗಿದ್ದಾರೆ.

ಇಡಿಯ ಮಹಾಭಾರತದಲ್ಲಿ ಸೌಂದರ್ಯಕ್ಕೆ ಯಾವುದೇ ಮಹತ್ವ ಕಂಡುಬರುವುದಿಲ್ಲ, ಕೇವಲ ಪರಾಕ್ರಮ, ವೀರಮರಣ, ನ್ಯಾಯ ನೀತಿ, ಮುಂತಾದ ಸತ್ಯಾಸತ್ಯತೆಗಳೇ ಹೆಚ್ಚಾಗಿ ನಮಗೆ ಕಂಡುಬರುತ್ತದೆ. ಇಲ್ಲಿ ಮನುಷ್ಯನ ಬಾಹ್ಯರೂಪಕ್ಕಿಂತಲೂ ಆಂತರಿಕ ಗುಣಕ್ಕೆ ಹೆಚ್ಚಿನ ಮಹತ್ವ ನೀಡಬೇಕೆಂದು ಮಹಾಭಾರತ ಕಲಿಸುವ ಸತ್ಯ.

ಅರ್ಜುನ ಮತ್ತು ಸುಭದ್ರೆಯ ಮಗ ಅಭಿಮನ್ಯುನೇ ಇಂದಿನ ನಮ್ಮ ಲೇಖನದ ಕಥಾನಾಯಕ. ಬಿಲ್ವಿದ್ಯೆಯಲ್ಲಿ ಅತ್ಯಂತ ಪ್ರಾವೀಣ್ಯತೆಯನ್ನು ಹೊಂದಿದ್ದ ಈತ ಪಾಂಡವರಲ್ಲೇ ಕಳಶವಿಟ್ಟಂತಹ ವ್ಯಕ್ತಿತ್ವ ಹೊಂದಿದ್ದ.

ಒಮ್ಮೆ ಸುಭದ್ರೆ ಅಭಿಮನ್ಯುವನ್ನಿನ್ನೂ ಗರ್ಭದಲ್ಲಿಟ್ಟುಕೊಂಡಿದ್ದಾಗ ಕೃಷ್ಣನು ಯುದ್ಧದ ಅತ್ಯಂತ ಕ್ಲಿಷ್ಟಕರವಾದ ಚಕ್ರವ್ಯೂಹದ ಬಗ್ಗೆ ವಿವರ ನೀಡುತ್ತಿದ್ದ. ಇದರಲ್ಲಿ ವೃತ್ತಕಾರದಲ್ಲಿ ಸೈನ್ಯ ವ್ಯೂಹ ರಚಿಸುವುದು, ಅದರೊಳಗೆ ನುಸುಳುವುದು ಎಷ್ಟು ಕಷ್ಟವೋ ಅದರಿಂದ ಜೀವಸಹಿತ ಹೊರಬರುವುದು ಇನ್ನೂ ಕಷ್ಟ. ವ್ಯೂಹದೊಳಗೆ ನುಗ್ಗುವ ಪರಿಯನ್ನು ಹೇಳುತ್ತಿದ್ದಂತೆಯೇ ಗರ್ಭದಲ್ಲಿದ್ದ ಅಭಿಮನ್ಯು ಇದನ್ನು ಕೇಳಿಸಿಕೊಂಡು ತನ್ನ ಮನದಾಳದಲ್ಲಿ ಆಗಲೇ ಸ್ಥಾಪಿಸಿದ್ದ.

ಎಲ್ಲವನ್ನು ಬಲ್ಲ ಕೃಷ್ಣ ಕಥೆಯನ್ನು ಅರ್ಧದಲ್ಲೇ ನಿಲ್ಲಿಸಿದ…! ಆದರೆ ಅಷ್ಟು ಹೊತ್ತಿಗೆ ದಣಿವಿನಿಂದ ನಿದ್ದೆಗೆ ಜಾರಿದ ಸುಭದ್ರೆ ಮುಂದಿನ ಮಾತುಗಳನ್ನು ಕೇಳಿಸಿಕೊಳ್ಳಲಿಲ್ಲ.

ಸುಭದ್ರೆ ನಿದ್ದೆಹೋದುದನ್ನು ತಿಳಿದ ಕೃಷ್ಣನು ತನ್ನ ಮಾತುಗಳನ್ನು ಅಲ್ಲಿಗೇ ನಿಲ್ಲಿಸಿದ. ಇದರಿಂದ ಅಭಿಮನ್ಯುವಿಗೆ ಚಕ್ರವ್ಯೂಹದಿಂದ ಹೊರಬರುವ ಮಾಹಿತಿ ಸಿಗದೇ ಹೋಯಿತು. ಮುಂದಿನ ಮಾಹಿತಿ ಸಿಗುವಂತೆ ಗರ್ಭದಲ್ಲಿಯೇ ಒದ್ದಾಗ ಸುಭದ್ರೆಗೆ ಎಚ್ಚರವಾದರೂ ಆಗ ತಡವಾಗಿತ್ತು. ಕೃಷ್ಣನು ತನ್ನ ಮಾತುಗಳನ್ನು ನಿಲ್ಲಿಸಿಯಾಗಿತ್ತು..!

ಈ ವೇಳೆಗೆ ಪಾಂಡವರ ಮತ್ತು ಕೌರವರ ನಡುವೆ ಕುರುಕ್ಷೇತ್ರದ ಯುದ್ಧ ಪ್ರಾರಂಭವಾಗಿತ್ತು. ಮಹಾಭಾರತ ಯುದ್ಧ ಪ್ರಾರಂಭವಾದಾಗ ಅಭಿಮನ್ಯುವಿಗೆ ಕೇವಲ 16 ವರ್ಷ ವಯಸ್ಸು. ಆತನು ಅತ್ಯಂತ ಪರಾಕ್ರಮಿಯಾಗಿದ್ದರೂ ಶತ್ರುಗಳು ಈತನಿಗಿಂತ ಹೆಚ್ಚು ಅನುಭವ ಹಾಗೂ ತಂತ್ರಗಾರಿಕೆಯನ್ನು ಹೊಂದಿದ್ದು, ಈತನಿಗೆ ಯುದ್ಧದಲ್ಲಿ ಏಕಾಂಗಿಯಾಗಿ ಹೋರಾಡಲು ಹೆಚ್ಚಿನ ತರಬೇತಿ ಹಾಗೂ ಅನುಭವದ ಕೊರತೆಯಿತ್ತು.

ಅತೀ ಮುಖ್ಯವಾದ ಸಂಗತಿಯೆಂದರೆ, ಕುರುಕ್ಷೇತ್ರ ಯುದ್ಧ 13ನೇ ದಿನವಾದ ಅಂದು ಆತನು ಪಾಂಡವರ ಜಯದ ಹಾಗೂ ಸೋಲಿನ ನಡುವಿನ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದನು. ಈತನಿಲ್ಲದಿದ್ದರೆ ಯುಧಿಷ್ಟಿರನು ಕೌರವರ ಮುಷ್ಠಿಗೆ ಬಲಿಯಾಗಿ ಹೋಗುತ್ತಿದ್ದನು ಹಾಗೂ ಪಾಂಡವರ ಸೋಲು ಖಚಿತವಾಗುತ್ತಿತ್ತು.

ಅಭಿಮನ್ಯುವಿಗೆ ಚಕ್ರವ್ಯೂಹವನ್ನು ಬೇಧಿಸುವ ತಂತ್ರಗಾರಿಕೆಯ ಕೊಂಚ ಮಾತ್ರ ತಿಳಿದಿತ್ತು. ಯುದ್ಧದಲ್ಲಿ ಎದುರಿಗೆ ಬಂದವರ ಮೇಲೆ ನಿರಾಯಾಸವಾಗಿ ದಾಳಿ ಮಾಡುತ್ತಿದ್ದನು. ಹಾಗೇ ಚಕ್ರವ್ಯೂಹದ ಒಳಕ್ಕೆ ನುಗ್ಗಿದಾಗ ಅವನಿಗೆ ನಂತರ ಅನುಸರಿಸಬೇಕಾದ ವಿಧಾನವು ಹೊಳೆಯಲಿಲ್ಲ. ಆತನಿಗೆ ಚಕ್ರವ್ಯೂಹದ ಒಳಕ್ಕೆ ನುಗ್ಗುವ ತಂತ್ರವು ಮಾತ್ರ ಗೊತ್ತಿದ್ದು, ಅದರಿಂದ ಜಯಶಾಲಿಯಾಗಿ ಹೊರಬರುವ ವಿದ್ಯೆ ತಿಳಿದಿರಲಿಲ್ಲ. ಆದ್ದರಿಂದಲೇ, ಆತ ವಿವಿಧ ವಿಧಾನದಲ್ಲಿ ಮುನ್ನುಗ್ಗದೇ, ಏನೂ ತೋಚದೆ ನಿಂತಲ್ಲಿಯೇ ಎದುರಾಳಿಗಳೊಂದಿಗೆ ಹೋರಾಡುವ ಸ್ಥಿತಿ ಒದಗಿತು.

ಹೀಗಿರುವಾಗ ಪಾಂಡವರ ಸೈನ್ಯವಾಗಲೀ ಅಥವಾ ಅವನ ಬುದ್ಧಿಶಕ್ತಿಯಾಗಲೀ ಸಹಾಯಕ್ಕೆ ಬರಲಿಲ್ಲ. ಕೊನೆಯದಾಗಿ ಚಕ್ರವ್ಯೂಹದಲ್ಲೇ ಏಕಾಂಗಿಯಾಗಿ ಹೋರಾಡಿ ವೀರಮರಣವನ್ನಪ್ಪಿದನು.

ಇಂದಿಗೂ ಅಭಿಮನ್ಯುವಿನ ಹೋರಾಟ ಮತ್ತು ಪರಾಕ್ರಮ ಮಹಾಭಾರತದ ಪುಟಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ.

ಕೃಪೆ; ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ) ಸಾಮಾಜಿಕ ಜಾಲತಾಣದಲ್ಲಿನ ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!