Daily story: ಹರಿತಲೇಖನಿ ದಿನಕ್ಕೊಂದು ಕಥೆ: ಸಜ್ಜನರ ಸಹವಾಸ

Daily story: ಬಹಳ ವರ್ಷಗಳ ಹಿಂದೆ ಕಾಶಿಯ ರಾಜ ಬ್ರಹ್ಮದತ್ತನಾಗಿದ್ದ. ಆತ ತಾರುಣ್ಯ­ದಲ್ಲೇ ಪಟ್ಟಕ್ಕೇರಿದವನು. ಆತ ಧರ್ಮಜ್ಞ. ಅವನಿಗೆ ಸಕಲ ವಿದ್ಯೆಗಳೂ ಕರ­ತ­ಲಾಮಲಕವಾಗಿದ್ದವು.

ಆತನ. ಮಾತು, ನಡೆ ಅತ್ಯಂತ ನಯ. ಅವನ ಬಾಯಿಯಿಂದ ತಪ್ಪು ಮಾತುಗಳು ಬರುವುದೇ ಸಾಧ್ಯವಿರಲಿಲ್ಲ. ಅವನ ಕರುಣೆ, ನ್ಯಾಯಪರತೆ, ಜನಪ್ರೀತಿ ದಂತಕಥೆಗಳೇ ಆಗಿದ್ದವು.

ಅವನ ರಾಜ್ಯದಲ್ಲಿ ಕಳವು, ಅಪರಾಧಿಗಳೇ ಇರಲಿಲ್ಲ. ನ್ಯಾಯಾಧೀಶರಿಗೆ, ಶಿಸ್ತು­ಪಾಲನೆ ಮಾಡುವ ಸೈನಿಕರಿಗೆ ಯಾವ ಕೆಲಸವೂ ಇರಲಿಲ್ಲ. ಸಮಾಜದಲ್ಲಿ ಅತ್ಯಂತ ಶಾಂತಿ ಇತ್ತು.ಬ್ರಹ್ಮದತ್ತ ಇಷ್ಟಾದರೂ ತನ್ನಲ್ಲಿ ಯಾವುದಾದರೂ ದುರ್ಗುಣವಿದೆಯೇ ಎಂದು ಪರೀಕ್ಷಿಸಿ­ಕೊಳ್ಳುತ್ತಿದ್ದ. ಆಸ್ಥಾನದಲ್ಲಿ ಯಾರನ್ನು ಕೇಳಿದರೂ ಅವರು ಅವನಲ್ಲಿ ಒಂದು ಕೆಟ್ಟಗುಣವನ್ನೂ ಹೇಳಲಿಲ್ಲ. ಅವರು ಹೆದರಿಕೆಯಿಂದ ಹೇಳಿರಲಿ­ಕ್ಕಿಲ್ಲ­ವೆಂದುಕೊಂಡು ವೇಷ ಮರೆಸಿಕೊಂಡು ತನ್ನ ದೇಶದ ಹಳ್ಳಿಹಳ್ಳಿಗಳಲ್ಲಿ ಸಂಚರಿ­ಸಿದ.

ಅಲ್ಲಿಯೂ ಸಾಮಾನ್ಯರನ್ನು ಪ್ರಶ್ನಿಸಿದ. ಅವರಲ್ಲಿ ಒಬ್ಬರೂ ರಾಜನ ಒಂದು ದುರ್ಗುಣವನ್ನೂ ಹೇಳಲಿಲ್ಲ. ಬದಲಾಗಿ ಅವನನ್ನು ದೇವರೆಂದೇ ಭಾವಿಸುವು-ದಾಗಿ ಹೇಳಿದರು. ಬ್ರಹ್ಮದತ್ತ ಅಂದಿನ ಕಾಲದ ಮಹಾಜ್ಞಾನಿ ಎಂದು ಹೆಸರಾದ ವಿಷ್ಣುಗೋಪನನ್ನು ಕಂಡು ತನ್ನಲ್ಲಿ ಯಾವುದಾದರೂ ದೋಷವಿದ್ದರೆ ತಿಳಿಸಿ ಅದನ್ನು ಕಳೆದುಕೊಳ್ಳುವ ವಿಧಾನ­ವನ್ನು ಹೇಳಲು ಕೇಳಿಕೊಂಡ.

ಇದೇ ರೀತಿಯ ಪರಿಸ್ಥಿತಿ ಕೋಸಲ ದೇಶದ ರಾಜನಾದ ಮಲಿಕಸಿಂಹನಿಗೂ ಬಂದಿತ್ತು. ಅವನನ್ನು ಜನ ದೇವರೆಂದೇ ನಂಬುತ್ತಿದ್ದರು. ಅವನ ರಾಜ್ಯದಲ್ಲೂ ಒಂದೇ ಒಂದು ಕಳವು, ಅನ್ಯಾಯದ ಪ್ರಸಂಗ­­ಗಳು ನಡೆಯುತ್ತಿರಲಿಲ್ಲ. ಅವನೂ ಕೂಡ ವಿಷ್ಣುಗೋಪನನ್ನು ಕಂಡು ತನ್ನ ದುರ್ಗುಣಗಳನ್ನು ಕಂಡು ಹಿಡಿಯಲು ಬೇಡಿಕೊಂಡಿದ್ದ. ವಿಷ್ಣು­ಗೋಪ ಇಬ್ಬರೂ ರಾಜರ ವಿವರಗಳನ್ನೆಲ್ಲ ತರಿಸಿಕೊಂಡ. ಆಶ್ಚರ್ಯವೆಂದರೆ ಇಬ್ಬರೂ ಒಂದೇ ವಯಸ್ಸಿನವರು. ಅವರ ರಾಜ್ಯದ ವಿಸ್ತಾರ, ಐಶ್ವರ್ಯ, ಸೈನ್ಯದ ಶಕ್ತಿ, ಅವರು ಪಡೆದ ಯಶಸ್ಸು ಎಲ್ಲವೂ ಸಮನಾಗಿಯೇ ಇದ್ದವು. ಎರಡೂ ದೇಶದ ಜನರು ತಮ್ಮ ತಮ್ಮ ರಾಜನಲ್ಲಿ ಒಂದೇ ಒಂದು ತಪ್ಪನ್ನು ಕಂಡುಹಿಡಿ­ಯಲು ಅಸಮರ್ಥ­ರಾಗಿದ್ದರು. ಇಬ್ಬ­ರಲ್ಲಿ ಯಾರು ಹೆಚ್ಚು ಒಳ್ಳೆಯವರು ಎಂಬು­ದನ್ನು ಗುರುತಿಸುವುದು ಹೇಗೆ ಎಂಬುದು ವಿಷ್ಣುಗೋಪನಿಗೆ ಸವಾಲಾ­ಯಿತು.

ಆಗ ಒಂದು ದಿನ ಯೋಚನೆ ಮಾಡಿ ಇಬ್ಬರೂ ರಾಜರ ರಥಗಳನ್ನು ಒಂದೆಡೆಗೆ ಕಳುಹಿಸುವಂತೆ ಸೂಚನೆ ನೀಡಿದ. ರಾಜರ ಸಾರಥಿಗಳು ತಮ್ಮ ರಥಗಳನ್ನು ತೆಗೆದುಕೊಂಡು ತಿಳಿಸಿದ ಸ್ಥಳಕ್ಕೆ ಹೊರಟರು. ಅವರಿಬ್ಬರ ರಥಗಳೂ ಒಂದು ಇಕ್ಕಟ್ಟಾದ ಸೇತುವೆಯ ಮೇಲೆ ಬರುವಂತೆ ವಿಷ್ಣುಗೋಪ ನೋಡಿ­ಕೊಂಡ. ಸೇತುವೆಯ ಮಧ್ಯದಲ್ಲಿ ಎರಡೂ ರಥಗಳು ಮುಖಾಮುಖಿ­ಯಾಗಿ ನಿಂತವು. ಈಗ ಯಾವು­ದಾದರೂ ಒಂದು ರಥ ಹಿಂದೆ ಹೋಗದೇ ಗತಿಯಲ್ಲ..! ಆದರೆ ಹಿಂದೆ ಹೋಗು­ವವರು ಯಾರು? ವಿಷ್ಣುಗೋಪ ಇಬ್ಬರೂ ಸಾರಥಿಗಳ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ. ಸ್ವಲ್ಪ ಸಮಯದ ಮೇಲೆ ಬ್ರಹ್ಮದತ್ತನ ಸಾರಥಿ ರಥವನ್ನು ಹಿಂದೆ ತೆಗೆದುಕೊಂಡು ಹೋದ.

ಮಲಿಕಸಿಂಹನ ಸಾರಥಿ ಸಂತೋಷದಿಂದ ರಥ ಓಡಿಸಿಕೊಂಡು ನಡೆದ. ನಂತರ ವಿಷ್ಣುಗೋಪ ಇಬ್ಬರೂ ರಾಜರನ್ನು ಒಟ್ಟಿಗೇ ಕರೆದು ಹೇಳಿದ, ‘ನೀವಿಬ್ಬರೂ ಒಳ್ಳೆಯ ರಾಜರೇ, ಅಸಾಮಾನ್ಯ ಗುಣಗಳನ್ನು ಹೊಂದಿದ್ದೀರಿ. ಆದರೆ, ಮಲಿಕಸಿಂಹನಿಗೆ ಇನ್ನೂ ಸ್ವಲ್ಪ ದರ್ಪ, ಅಹಂಕಾರವಿದೆ. ಅದು ಕರಗಬೇಕು. ಯಾಕೆಂದರೆ ನಿಮ್ಮ ಸಾರಥಿ ಆ ದರ್ಪ­ವನ್ನು ತೋರಿಸಿದ. ಆದರೆ ಬ್ರಹ್ಮದತ್ತನ ಸಾರಥಿ ನಗು ಮುಖದಿಂದ ರಥವನ್ನು ಹಿಂದೆ ತೆಗೆದ. ಯಜಮಾನನ ದರ್ಪ ಸೇವಕನಿಗೂ ತಟ್ಟುತ್ತದೆ’ ಮಲಿಕಸಿಂಹ ಈ ಮಾತು ಒಪ್ಪಿದ ಹಾಗೂ ಇನ್ನೂ ವಿನಯಶೀಲನಾಗಲು ಪ್ರಯತ್ನಿಸಿ ಯಶಸ್ವಿ­ಯಾದ.

ಯಜ-ಮಾನನ ಗುಣ, ದುರ್ಗುಣಗಳು ಅವನ ಹಿಂಬಾಲಕರಿಗೂ ಅಂಟಿಕೊಳ್ಳುತ್ತವೆ. ಮೌಲ್ಯಗಳು ಮೇಲಿ­ನಿಂದ ಕೆಳಕ್ಕೆ ಇಳಿಯುತ್ತವೆ. ಯಜಮಾನ ಹೇಗಿದ್ದಾನೆ ಎಂದು ತಿಳಿಯಲು ಅವನನ್ನೇ ನೋಡಬೇಕಿಲ್ಲ, ಅವನೊಂದಿಗೇ ಇರುವ ಸಹಚರರನ್ನು ಗಮನಿಸಿದರೆ ಸಾಕು. ಸಜ್ಜನ­ನಾದ ಯಜಮಾನ ತನ್ನೊಂದಿಗೆ ಇರುವವರನ್ನೂ ಸಜ್ಜನರನ್ನಾಗಿ ಮಾಡು­ತ್ತಾನೆ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ರಾಜಕೀಯ

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ಬೆಂ.ಗ್ರಾ ಜಿಲ್ಲೆಯ ಸಾಂಪ್ರದಾಯಿಕ ಅರ್ಹ ಕುಶಲಕರ್ಮಿಗಳು, ಎಲ್ಲ ಅರ್ಹ ಕುಶಲಕರ್ಮಿಗಳು, ಆಸಕ್ತ ಯುವಕ ಯುವತಿಯರು ಪ್ರಧಾನಿ ಮಂತ್ರಿ ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಂಸದರಾದ ಡಾ.ಕೆ ಸುಧಾಕರ್

[ccc_my_favorite_select_button post_id="115398"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!