Ghati subramanya| ಘಾಟಿ ಕ್ಷೇತ್ರದಲ್ಲಿ ವಿಜೃಂಭಣೆಯ ಬ್ರಹ್ಮ ರಥೋತ್ಸವ: ಸಾವಿರಾರು ಮಂದಿ ಭಾಗಿ| ಗರುಡ ಪ್ರದಕ್ಷಿಣೆ ಹಾಕಿದ VIDEO ನೋಡಿ

ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲಿ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶ್ರೀ ಸುಬ್ರಮಣ್ಯ ಘಾಟಿ ಪುಣ್ಯಕ್ಷೇತ್ರದಲ್ಲಿ (Ghati subramanya) ಭಾನುವಾರವಾದ ಇಂದು ಸ್ವಾಮಿಯ ಬ್ರಹ್ಮರಥೋತ್ಸವ ಅತ್ಯಂತ ವೈಭವದಿಂದ ನಡೆಯಿತು.

ಸಾವಿರಾರು ಜನ ಭಕ್ತಾಧಿಗಳು ರಾಜ್ಯದ ಹಲವು ಪ್ರದೇಶಗಳಿಂದಲೇ ಅಲ್ಲದೇ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದಲೂ ರಥೋತ್ಸವಕ್ಕೆ ಆಗಮಿಸಿದ್ದರು.

ಭಾನುವಾರ ಮಧ್ಯಾಹ್ನ 12-15 ಗಂಟೆಗೆ ಸ್ವಾಮಿಯನ್ನು ಪ್ರತಿಷ್ಠಿಸಲಾಗಿದ್ದ ತೇರನ್ನು ಅರ್ಚಕರ ವೇದಘೋಷಗಳ ನಡುವೆ ಭಕ್ತಾಧಿಗಳು ಎಳೆದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ರಥೋತ್ಸವಕ್ಕೆ ಚಾಲನೆ ನೀಡಿದರು, ಜಿಲ್ಲಾಧಿಕಾರಿ ಶಿವಶಂಕರ್, ಶಾಸಕ ಧೀರಜ್ ಮುನಿರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸುಮಾರು 600 ವರ್ಷಗಳ ಇತಿಹಾಸವಿರುವ ಘಾಟಿ ಪುಣ್ಯಕ್ಷೇತ್ರದಲ್ಲಿ ಶ್ರೀ ಸುಬ್ಯಮಣ್ಯ ಸ್ವಾಮಿ ಸರ್ಪ ರೂಪದಲ್ಲಿ ನೆಲೆಸಿದ್ದಾರೆ.

ದೇವಾಲಯದ ಗರ್ಭಗುಡಿಯಲ್ಲಿರುವ ಏಕಶಿಲೆ ವಿಗ್ರಹದಲ್ಲಿ ಮುಂಭಾಗದಲ್ಲಿ ಸುಬ್ರಮಣ್ಯ,ಹಿಂಭಾಗದಲ್ಲಿ ನರಸಿಂಹಸ್ವಾಮಿ ನೆಲೆಸಿರುವುದು ಘಾಟಿಕ್ಷೇತ್ರದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣುವುದಿಲ್ಲ.

ಸರ್ಪ ದೋಷ ಮತ್ತು ಕುಜದೋಷಗಳಿರುವವರು ಇಲ್ಲಿ ನಾಗರಕಲ್ಲನ್ನು ಪ್ರತಿಷ್ಠಿಸಿ ಪೂಜಿಸಿದರೆ ದೋಷನಿವಾರಣೆಯಾಗುತ್ತದೆಂಬುದು ಅದೇರೀತಿ ಇಲ್ಲಿನ ದೇವಾಲಯದ ಹಿಂಭಾಗದಲ್ಲಿರುವ ಕಳ್ಯಾಣಿಗಳಲ್ಲಿ ಸ್ನಾನ ಮಾಡಿದರೆ ಸರ್ವ ರೋಗಗಳು ವಾಸಿಯಾಗುತ್ತವೆ ಎಂದು ಭಕ್ತಾಧಿಗಳ ವಿಶ್ವಾಸ.

ಘಾಟಿ ಕ್ಷೇತ್ರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರತಿನಿತ್ಯವೂ ಎಲ್ಲೆಂದರಲ್ಲಿ ಸರ್ಪಗಳು ಕಾಣಿಸುತ್ತಿರುತ್ತವೆಂದು. ಆದರೆ ಸರ್ಪಗಳಿಗೆ ಗ್ರಾಮಸ್ತರಾಗಲಿ,ಗ್ರಾಮಸ್ತರಿಗೆ ಸರ್ಪಗಳಾಗಲೀ ಯಾವುದೇ ಹಾನಿ ಮಾಡುವುದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ಶ್ರೀ ಸುಬ್ರಹ್ಮಣ್ಯಸ್ವಾಮಿಯ ದರ್ಶನ ಪಡೆಯಲು ಬೆಳಗಿನಿಂದಲೇ ಭಕ್ತಾದಿಗಳು ಸಾಲುಗಟ್ಟಿ ನಿಂತಿದ್ದರು. ಕ್ಷೇತ್ರದಲ್ಲಿರುವ ನಾಗರಕಲ್ಲುಗಳಿಗೆ ಭಕ್ತ ಸಮೂಹ ಹಾಲೆರೆದು ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಜಾತ್ರೆಯ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಸವಿತಾ ಯುವ ಜನ ವೇದಿಕೆ, ಆಂಧ್ರ ದೇವಾಂಗ ಸಂಘ, ನಗರ್ತರ ಸಂಘ ಸೇರಿದಂತೆ ವಿವಿಧ ಭಕ್ತ ಮಂಡಲಿಗಳಿಂದ ಅರವಂಟಿಗೆ ಹಾಗೂ ಅನ್ನ ಸಂತರ್ಪಣೆಗಳನ್ನು ಏರ್ಪಡಿಸಲಾಗಿತ್ತು.

ವೀಕೆಂಡ್ ಸಾವಿರಾರು ಮಂದಿ ಭಾಗಿ

Ghati subramanya| ಘಾಟಿ ಕ್ಷೇತ್ರದಲ್ಲಿ ವಿಜೃಂಭಣೆಯ ಬ್ರಹ್ಮ ರಥೋತ್ಸವ: ಸಾವಿರಾರು ಮಂದಿ ಭಾಗಿ| ಗರುಡ ಪ್ರದಕ್ಷಿಣೆ ಹಾಕಿದ VIDEO ನೋಡಿ

ಷಷ್ಠಿ ಹಾಗೂ ಭಾನುವಾರ ರಜೆಯ ಕಾರಣ ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು. ದೇವಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ನೆರವು, ಮಾಹಿತಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಪಿಸುವ ಸಲುವಾಗಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ, ನಗರಸಭೆ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಹಂತದ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿತ್ತು.

ರಥೋತ್ಸವ ಕರ್ತವ್ಯಕ್ಕೆ ನಿಯೋಜನೆಗಳೊಂಡಿರುವ ಎಲ್ಲಾ ಅಧಿಕಾರಿಗಳು ಬೆಳಿಗ್ಗೆ 4 ಗಂಟೆಯಿಂದಲೇ ಹಾಜರಿದ್ದರು. ಭಕ್ತರ ಸಹಾಯಕ್ಕಾಗಿ ಮಾಹಿತಿ ಕೇಂದ್ರವನ್ನು ತೆರೆಯಲಾಗಿತ್ತು.

ಭದ್ರತಾ ವ್ಯವಸ್ಥೆ: ಘಾಟಿ ಕ್ಷೇತ್ರಕ್ಕೆ ಬಸ್ಗಳು ಗೌರಿಬಿದನೂರು ರಸ್ತೆಯ ಮಾಕಳಿ ಮಾರ್ಗವಾಗಿ ಸಂಚರಿಸಲಿವೆ. ದೇವಾಲಯದಿಂದ ದೂರದಲ್ಲೇ ಬಸ್ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.

ಬಸ್ ನಿಲ್ದಾಣದಿಂದ ಹಾಗೂ ಕಾರುಗಳ ನಿಲುಗಡೆ ಸ್ಥಳದಿಂದ ದೇವಾಲಯದ ಬಳಿಗೆ ಹೋಗಲು ಹಿರಿಯ ನಾಗರೀಕರು, ಮಕ್ಕಳಿಗೆ ಉಚಿತ ಆಟೋ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.

ಕಾರು, ಬೈಕ್ಗಳ ಮೂಲಕ ಬರುವ ಜನರು ಕಂಟನಕುಂಟೆ, ಹಾಡೋನಹಳ್ಳಿ ಮಾರ್ಗವಾಗಿ ಘಾಟಿ ಕ್ಷೇತ್ರಕ್ಕೆ ಬರಲು ಪ್ರತ್ಯೇಕ ಮಾರ್ಗ ನಿಗದಿ ಮಾಡಲಾಗಿದೆ. ಕಾರು ಹಾಗೂ ಬೈಕ್ಗಳ ನಿಲುಗಡೆಗಾಗಿಯೇ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.

ಈ ಎಲ್ಲಾ ಉಸ್ತುವಾರಿಗಳನ್ನು ನೋಡಿಕೊಳ್ಳಲು 10 ಜನ ಇನ್ಸ್ಪೆಕ್ಟರ್, 15 ಜನ ಸಬ್ ಇನ್ಸ್ಪೆಕ್ಟರ್, 400 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ ಸಿಸಿ ಟಿವಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆಗಳಿಂದ ಕೆಎಸ್ಆರ್ಟಿಸಿ ಬಸ್ಗಳ ಸೌಲಭ್ಯ ಇತ್ತು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!