Doddaballapura; ದಿ.ಹೆಚ್.ಅಪ್ಪಯ್ಯಣ್ಣ ನುಡಿ ನಮನ: ಅಪ್ಪಯ್ಯಣ್ಣ ನಡೆದು ಬಂದ ದಾರಿ ಕಿರು ಹೊತ್ತಿಗೆ ಬಿಡುಗಡೆ

ದೊಡ್ಡಬಳ್ಳಾಪುರ, (Doddaballapura): ಸಹಕಾರ ಹಾಗೂ ರಾಜಕೀಯದ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಚ್.ಅಪ್ಪಯ್ಯಣ್ಣ ಅವರ ಸ್ಥಾನವನ್ನು ತುಂಬುಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ ಹೆಚ್.ಅಪ್ಪಯ್ಯಣ್ಣ ಅವರಿಗೆ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ, ಸಹಕಾರ ಕ್ಷೇತ್ರದ ವಿವಿಧ ಸ್ಥಾನಗಳನ್ನು ಅಲಂಕರಿಸಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಬಮೂಲ್ ಅಧ್ಯಕ್ಷರಾಗಿ ರಾಜಕೀಯದಲ್ಲಿ ಬೆಳೆದವರು ಅಪ್ಪಯ್ಯಣ್ಣರವರು. ನನ್ನ ಮಟ್ಟಿಗೆ ದೊಡ್ಡಬಳ್ಳಾಪುರ ಹಾಗೂ ಕನಕಪುರದಲ್ಲಿ ರಾಜಕೀಯ ನಡೆಸುವುದು ಕ್ಲಿಷ್ಟಕರ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ಅಪ್ಪಯ್ಯಣ್ಣ ಅವರ ಪಾತ್ರ ಹಿರಿದಾಗಿದೆ.

ಬಮೂಲ್ ಅಧ್ಯಕ್ಷರಾಗಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಜೆಡಿಎಸ್‌ನಲ್ಲಿದ್ದರೂ ಇತರೆ ಪಕ್ಷದವರ ಜೊತೆ ಉತ್ತಮ ಬಾಂಧವ್ಯ ಹೊಂದಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದರು. ರಾಜಕೀಯ, ಸಮಾಜ ಸೇವೆಯಲ್ಲಿ ಅಪ್ಪಯ್ಯಣ್ಣರವರು ಬಹಳ ಕೆಲಸ ಮಾಡಿದ್ದಾರೆ.

ಚುನಾವಣೆ ಬಂದಾಗ ಪಕ್ಷದ ನಿಷ್ಠಾವಂತರಾಗಿ ಕೆಲಸ ಮಾಡಿದ್ದವರು. ಅವರ ಪಕ್ಷ ನಿಷ್ಠೆಯಿಂದ ತಳ ಮಟ್ಟದಲ್ಲಿ ಪಕ್ಷ ಬೆಳೆಯಲು ಸಹಾಯವಾಗಿದೆ. ಅವರ ಸಾವಿನ ದಿನ ನಮ್ಮ ಕುಟುಂಬದಿಂದ ಯಾರೂಬ್ಬರು ಬಾರದೆ ಇರುವುದಕ್ಕೆ ಬಹಳ ನೋವಿದೆ. ಇಂದು ಉಪ ರಾಷ್ಟ್ರಪತಿಗಳ ಜೊತೆ ಭಾಗವಹಿಸಬೇಕಾದ ಅನಿವಾರ್‍ಯತೆ ಇದ್ದರೂ ಮಧ್ಯಾಹ್ನದ ನಂತರ ಬರುತ್ತೇನೆ ಎಂದು ಈ ಕಾರ್‍ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದರು.

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಶರಣರ ಬಾಳನ್ನು ಮರಣದಲ್ಲಿ ಕಾಣು ಎಂಬಂತೆ ಅಪ್ಪಯ್ಯಣ್ಣ ಅವರು ಸಲ್ಲಿಸಿದ್ದ ಸೇವೆಯನ್ನು ಜನರು ಸ್ಮರಿಸುತ್ತಿದ್ದಾರೆ.

ಶ್ರೀ ಮಠದ ಅವರ ನಿಕಟ ಸಂಪರ್ಕದಿಂದಾಗಿ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ಬಳಿಯಲ್ಲಿ ಉತ್ತಮ ಪರಿಸರದ ಶಾಲೆ ನಿರ್ಮಾಣವಾಯಿತು. ಅವರ ಆಶಯದಂತೆ ಇಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು.

ನಗರದಲ್ಲಿ ಒಕ್ಕಲೀಗರ ಭವನ, ಘಾಟಿ ಕ್ಷೇತ್ರದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವಲ್ಲಿಯೂ ಅವರ ಪಾತ್ರ ಇದೆ. ಶ್ರೀಮಠಕ್ಕೆ ನಾವು ಬೇಡುವ ಬಿಕ್ಷೆಗಾಗಿ ಸುಮಾರು 2000 ಕ್ವಿಂಟಾಲ್ ರಾಗಿಯನ್ನು ಸಂಗ್ರಹಿಸಿ ರಾಶಿ ಪೂಜೆಗೆ ಕರೆದಿದ್ದರು.

ಬಮೂಲ್‌ನಲ್ಲಿ ಅಧ್ಯಕ್ಷರಾಗಿದ್ದಾಗ ಅವ್ಯವಹಾರದ ಆರೋಪ ಬಂದಾಗ ಸಾಬೀತಾದರೆ ರಾಜೀನಾಮೆ ನೀಡಲು ಸಿದ್ದ ಎಂದಿದ್ದರು. ಅವರ ಮೊಮ್ಮಗಳು ವೈದ್ಯರಾಗಿ ತಾತನಿಗೆ ಚಿಕಿತ್ಸೆ ನೀಡುವೆ ಎಂದಿದ್ದರು. ಆದರೆ ಮಲಗಿದ್ದವರು ಏಳದೇ ಇರುವ ಅವರ ಸಾವು ಎಲ್ಲರಿಗೂ ದಿಗ್ಬ್ರೆಮೆಯಾಗಿತ್ತು ಎಂದರು.

ಹೆಚ್.ಅಪ್ಪಯ್ಯಣ್ಣ ಅವರು ಪುತ್ರ ಗ್ರಾ.ಪಂ ಸದಸ್ಯ ಎಚ್.ಎ.ನಾಗರಾಜ್ ಭಾವುಕರಾಗಿ ಮಾತನಾಡಿ, ತಮ್ಮ ತಂದೆಯ ರಾಜಕೀಯ ಜೀವಿತದಲ್ಲಿ ಬಮೂಲ್ ಚುನಾವಣೆ ನಡೆದಾಗ, ಆಣೆ ಪ್ರಮಾಣ ಮಾಡಿ ಮತ ಹಾಕುತ್ತೇವೆ ಎಂದು ಅವರನ್ನು ಸೋಲಿಸಿದ್ದನ್ನು ನೆನೆದು ತುಂಬಾ ನೋವುಂಡಿದ್ದರು.

ದೇಶಿ ತಳಿಗಳ ರಕ್ಷಣೆ, ಹೈನುಗಾರಿಕೆಯಿಂದ ರೈತರಿಗೆ ಅನುಕೂಲವಾಗಬೇಕೆಂದು ಅಪಾರವಾಗಿ ಶ್ರಮಿಸಿದ್ದರು. ಅವರ ರಾಜಕೀಯ ಬದುಕು ಹಾಗೂ ಸಮಾಜ ಸೇವೆ ನಮೆಗೆಲ್ಲ ಮಾದರಿಯಾಗಿದ್ದು ಅದನ್ನು ಮುಂದುವರೆಸಿಕೊಂಡು ತಂದೆಯವರ ಹೆಸರು ಉಳಿಸುವುದಾಗಿ ತಿಳಿಸಿದರು.

ಕಾರ್‍ಯಕ್ರಮದಲ್ಲಿ ಭಾಗವಹಿಸಿದ್ದ ಮುಖಂಡರು ಸುಮಾರು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು ಬೆಂಗಳೂರು ಜಿ ಜೆಡಿಎಸ್ ಉಪಾಧ್ಯಕ್ಷರಾಗಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್ ಅಧ್ಯಕ್ಷರಾಗಿ, ಜಿ ಪಂಚಾಯಿತಿ ಅಧ್ಯಕ್ಷರಾಗಿ, ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಹೀಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಉಳಿಸಿಕೊಂಡಿದ್ದರು ಎಂದು ಹೆಚ್.ಅಪ್ಪಯ್ಯಣ್ಣ ಅವರ ರಾಜಕೀಯ ಬದುಕು ಹಾಗೂ ಅವರೊಂದಿಗಿನ ಒಡನಾಟಗಳನ್ನು ಸ್ಮರಿಸಿದರು.

ಇದೇ ವೇಳೆ ಅಪ್ಪಯ್ಯಣ್ಣನವರು ನಡೆದು ಬಂದ ದಾರಿ ಕುರಿತ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.

ಇದಕ್ಕೂ ಮುನ್ನ ಕಾರ್‍ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಅಪ್ಪಯ್ಯಣ್ಣ ಅವರ ಸಮಾಧಿ ಬಳಿಗೆ ತೆರಳಿ ನಮನ ಸಲ್ಲಿಸಿದರು.

ಕಾರ್‍ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳ ಮುನಿಶ್ಯಾಮಪ್ಪ, ವಿಧಾಣಪರಿಷತ್ ಮಾಜಿ ಸದಸ್ಯರಾದ ಇ.ಕೃಷ್ಣಪ್ಪ, ರಮೇಶ್ ಗೌಡ, ಚೌಡರೆಡ್ಡಿ, ರಾಜ್ಯ ತೆಂಗು ನಾರು ಸಹಕಾರ ಮಂಡಳಿ ಅಧ್ಯಕ್ಷ ವೆಂಕಟೇಶ ಬಾಬು ಜೆಡಿಎಸ್ ರಾಜ್ಯ ಕಾರ್‍ಯದರ್ಶಿಗಳಾದ ಡಾ.ಎಚ್.ಜಿ.ವಿಜಯ ಕುಮಾರ್, ಎಸ್.ಎಂ.ಹರೀಶ್ ಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಪುರುಷೋತ್ತಮ್, ಹಿರಿಯ ಮುಖಂಡರಾದ ನರಸಿಂಹಯ್ಯ, ಕೆ.ಎಂ.ಹನುಮಂತರಾಯಪ್ಪ, ರಾಜಣ್ಣ, ಜೆಡಿಎಸ್ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!