Give justice to the candidates in the case of KAS Prelims Reexamination

R Ashoka: ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ ಎಂಬುದು ಸಿಎಂ ಸಿದ್ದರಾಮಯ್ಯನವರ ಉದ್ದೇಶ: ಆರ್ ಅಶೋಕ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ.

ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ.

ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.

ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿಸುವ ಹುನ್ನಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ.

ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಆಡಳಿತ ನೆಲ ಕಚ್ಚಿದೆ. ಅಭಿವೃದ್ಧಿ ಕಾರ್ಯವನ್ನು ಟಾರ್ಚ್‌ ಹಾಕಿ ಹುಡುಕಬೇಕಿದೆ. ಸಿಎಂ ಕುರ್ಚಿ ಖಾಲಿ ಇಲ್ಲವೆಂದು ಸಿದ್ದರಾಮಯ್ಯ ಸಾವಿರ ಬಾರಿ ಹೇಳಿದ್ದಾರೆ. ಎಲ್ಲೇ ಹೋದರೂ ಅದನ್ನೇ ಮಾತಾಡುತ್ತಿದ್ದಾರೆ.

ಎಲ್ಲ ನಾಯಕರು ಪವರ್‌ ಪಾಲಿಟಿಕ್ಸ್‌ನಲ್ಲಿ ಮುಳುಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಂಡ್ಯಕ್ಕೆ ಹೋಗಿ ಅಧಿಕಾರ ಕೊಡಿ ಎಂದು ಜನರ ಮುಂದೆ ಹೇಳಿದ್ದರು. ಈಗ ಶಾಸಕರ ಮುಂದೆ ಹೋಗಿ ಅಂಗಲಾಚುತ್ತಿದ್ದಾರೆ. ಇವರ ಕಥೆ ಕತ್ತಲಲ್ಲಿ ಕರಡಿಯನ್ನು ಹುಡುಕುವಂತಾಗಿದೆ. ಈ ಪವರ್‌ ಶೇರಿಂಗ್‌ ಎಲ್ಲಿ ನಡೆದಿದೆ ಎಂದು ಜನರಿಗೆ ಸ್ಪಷ್ಟವಾಗಿ ತಿಳಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ಲೋಕ ಹೇಳಿದರೆ, ಸಚಿವ ರಾಜಣ್ಣ ಟೀಕೆ ಮಾಡುತ್ತಿದ್ದಾರೆ. ಸಚಿವ ಪರಮೇಶ್ವರ್‌ ಕೂಡ ಕೆಂಡಕಾರಿದ್ದಾರೆ. ಕೆಲವು ಶಾಸಕರು ಮುಂದಿನ ಸಿಎಂ ಶಿವಕುಮಾರ್‌ ಎನ್ನುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಪಾಪಿ ಸರ್ಕಾರ ಯಾಕಾದರೂ ಬಂತೋ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಬಂದು ಹೋದ ಬಳಿಕವೂ ಈ ಸಮಸ್ಯೆ ನಿವಾರಣೆಯಾಗಲ್ಲ. ಪವರ್‌‌ ಶೇರಿಂಗ್‌ ಬಗ್ಗೆ ಶಾಸಕರಿಗೆ ಸ್ಪಷ್ಟವಾಗಬೇಕಿದೆ. ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮಾತು ನೀಡಿದೆ. ಅದರ ಬಗ್ಗೆ ಸರಿಯಾಗಿ ತಿಳಿಸಲಿ ಎಂದರು.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!