Give justice to the candidates in the case of KAS Prelims Reexamination

R Ashoka: ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ ಎಂಬುದು ಸಿಎಂ ಸಿದ್ದರಾಮಯ್ಯನವರ ಉದ್ದೇಶ: ಆರ್ ಅಶೋಕ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ.

ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ.

ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.

ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿಸುವ ಹುನ್ನಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ.

ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಆಡಳಿತ ನೆಲ ಕಚ್ಚಿದೆ. ಅಭಿವೃದ್ಧಿ ಕಾರ್ಯವನ್ನು ಟಾರ್ಚ್‌ ಹಾಕಿ ಹುಡುಕಬೇಕಿದೆ. ಸಿಎಂ ಕುರ್ಚಿ ಖಾಲಿ ಇಲ್ಲವೆಂದು ಸಿದ್ದರಾಮಯ್ಯ ಸಾವಿರ ಬಾರಿ ಹೇಳಿದ್ದಾರೆ. ಎಲ್ಲೇ ಹೋದರೂ ಅದನ್ನೇ ಮಾತಾಡುತ್ತಿದ್ದಾರೆ.

ಎಲ್ಲ ನಾಯಕರು ಪವರ್‌ ಪಾಲಿಟಿಕ್ಸ್‌ನಲ್ಲಿ ಮುಳುಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಂಡ್ಯಕ್ಕೆ ಹೋಗಿ ಅಧಿಕಾರ ಕೊಡಿ ಎಂದು ಜನರ ಮುಂದೆ ಹೇಳಿದ್ದರು. ಈಗ ಶಾಸಕರ ಮುಂದೆ ಹೋಗಿ ಅಂಗಲಾಚುತ್ತಿದ್ದಾರೆ. ಇವರ ಕಥೆ ಕತ್ತಲಲ್ಲಿ ಕರಡಿಯನ್ನು ಹುಡುಕುವಂತಾಗಿದೆ. ಈ ಪವರ್‌ ಶೇರಿಂಗ್‌ ಎಲ್ಲಿ ನಡೆದಿದೆ ಎಂದು ಜನರಿಗೆ ಸ್ಪಷ್ಟವಾಗಿ ತಿಳಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ಲೋಕ ಹೇಳಿದರೆ, ಸಚಿವ ರಾಜಣ್ಣ ಟೀಕೆ ಮಾಡುತ್ತಿದ್ದಾರೆ. ಸಚಿವ ಪರಮೇಶ್ವರ್‌ ಕೂಡ ಕೆಂಡಕಾರಿದ್ದಾರೆ. ಕೆಲವು ಶಾಸಕರು ಮುಂದಿನ ಸಿಎಂ ಶಿವಕುಮಾರ್‌ ಎನ್ನುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಪಾಪಿ ಸರ್ಕಾರ ಯಾಕಾದರೂ ಬಂತೋ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಬಂದು ಹೋದ ಬಳಿಕವೂ ಈ ಸಮಸ್ಯೆ ನಿವಾರಣೆಯಾಗಲ್ಲ. ಪವರ್‌‌ ಶೇರಿಂಗ್‌ ಬಗ್ಗೆ ಶಾಸಕರಿಗೆ ಸ್ಪಷ್ಟವಾಗಬೇಕಿದೆ. ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮಾತು ನೀಡಿದೆ. ಅದರ ಬಗ್ಗೆ ಸರಿಯಾಗಿ ತಿಳಿಸಲಿ ಎಂದರು.

ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ನೀಡುತ್ತಿರುವ ₹2000 ಗೃಹಲಕ್ಷ್ಮಿ ಹಣದ ಬಗ್ಗೆ ನನ್ನ ತಕರಾರು ಇಲ್ಲ, ಅದಕ್ಕೆ ನನ್ನ ವಿರೋಧವೂ ಇಲ್ಲ. ಕಳೆದ ಮೂರು ವರ್ಷಗಳಿಂದ ಈ ಯೋಜನೆಯ ಮೂಲಕ ₹70,000ರಿಂದ ₹75,000 ಕೋಟಿ ನೀಡಿರಬಹುದು.

[ccc_my_favorite_select_button post_id="120025"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!