Farmer Satish Babu, who was expecting a good crop, was distraught as miscreants sprayed the flower plants with herbicide

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ; ಇನ್ನೇನು 15 ದಿನಗಳಲ್ಲಿ ಕಟಾವಿಗೆ ಬರಲಿದ್ದ ಸೇವಂತಿ ಹೂ ತೋಟಕ್ಕೆ ದುಷ್ಕರ್ಮಿಗಳು ಕಳೆನಾಶಕ. (Herbicide) ಸಿಂಪಡಿಸಿದ ಪರಿಣಾಮ ಗಿಡಗಳು ಒಣಗಿದ ಘಟನೆ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

ಹೊಸಹುಡ್ಯ ಗ್ರಾಮದ ರೈತ ಸತೀಶ್ ಬಾಬು ಎಂಬುವರ ತೋಟದಲ್ಲಿಯೇ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು ತೋಟಕ್ಕೆ ಭೇಟಿ ನೀಡಿದ್ದ ಮಾಧ್ಯಮದವರ ಮುಂದೆ ರೈತ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರೈತ ಸತೀಶ್ ಬಾಬು ಅರ್ಧ ಎಕರೆಯಲ್ಲಿ ಬೆಳೆದಿದ್ದ ಸುಮಾರು 3 ಸಾವಿರ ಸೇವಂತಿಗೆ ಗಿಡಗಳಿಗೆ ಕಳೆದ ಸೋಮವಾರ ಔಷಧಿ ಸಿಂಪಡಣೆ ಮಾಡಿದ್ದರು.

ಇದಾದ ಬಳಿಕ, ಕಳೆದ ಎರಡ್ಮೂರು ದಿನಗಳ ಹಿಂದೆ ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ (Herbicide) ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ.

ಕಳೆನಾಶಕ ಸಿಂಪಡಣೆಯಿಂದ ಗಿಡಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಕೆಲ ಗಿಡಗಳು ಸಂಪೂರ್ಣ ಒಣಗಿ ಹೋಗಿವೆ.

ಇನ್ನೇನು 15 ದಿನಗಳಲ್ಲಿ ಹೂವು ಬಿಡಬೇಕಿದ್ದ ಗಿಡಗಳು ಒಣಗುವ ಹಂತಕ್ಕೆ ತಲುಪಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಬೆಳೆ ಬೆಳೆದಿದ್ದ ರೈತ ಆತಂಕದಲ್ಲಿದ್ದಾನೆ.

ಈ ಕುರಿತು ಮಾತನಾಡಿದ ರೈತ ಸತೀಶ್ ಬಾಬು, ಕಳೆದ ಬಾರಿ 1 ಎಕರೆಯಲ್ಲಿ ಇದೇ ಸೇವಂತಿ ಬೆಳೆ ಬೆಳೆದಿದ್ದೆ. ಸುಮಾರು 1ಲಕ್ಷ ರೂಗಳ ಆದಾಯ ಬಂದಿತ್ತು. ಆದರೆ, ಈ ಬಾರಿ ಯಾರೋ ದುಷ್ಕರ್ಮಿಗಳು ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದರಿಂದ ಬೆಳೆ ಹಾಳಾಗಿದೆ. ಗಿಡಗಳು ಬಾಡುತ್ತಿವೆ.

ಕಳೆನಾಶಕ ಸಿಂಪಡಣೆಯಾದರೆ ಗಿಡಗಳು ಹೂ ಬಿಡುವುದಿಲ್ಲ. ಇದರಿಂದಾಗಿ ನಾವು ನಷ್ಟದ ಭೀತಿಯಲ್ಲಿದ್ದೇವೆ. ರೈತರಿಗೆ ರೈತರೇ ವಿರೋಧಿಗಳಾಗುತ್ತಿರುವುದು ನೋವಿನ ಸಂಗತಿಯಾಗಿದೆ.

ಹೊಟ್ಟೆ ಬಟ್ಟೆ ಕಟ್ಟಿ ಕೃಷಿಯಲ್ಲಿ ತೊಡಗುವ ನಮ್ಮಂತಹ ಬಡಪಾಯಿಗಳಿಗೆ ಇದು ಆಘಾತ ತರುವ ವಿಚಾರ. ಇಂತಹವರ ವಿರುದ್ಧ ಪೊಲೀಸರು, ತೋಟಗಾರಿಕೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಸಂಕಷ್ಟಕ್ಕೆ ಸಿಲುಕುವ ನೊಂದ ರೈತಾಪಿಗಳಿಗೆ ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ಕೊಡಬೇಕು ಎಂದು ಅಳಲು ತೋಡಿಕೊಂಡರು.

ಏನೇ ಆಗಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಮೇಲೆ ಸೇಡು ತೀರಿಸಿಕೊಳ್ಳುವ ಸಂಗತಿಗಳು ಹೆಚ್ಚಾಗಿಯೇ ನಡೆಯುತ್ತಿದ್ದು, ಇದು ನಿಲ್ಲಬೇಕಿದೆ.

ಬೆವರು ಹರಿಸಿ ದುಡಿಯುವ ರೈತರ ಬೆಳೆಗಳಿಗೆ ಸರಿಯಾದ ಮಾರುಕಟ್ಟೆ ಮತ್ತು ಬೆಲೆ ದೊರೆಯಬೇಕಿದೆ, ಇಂತಹ ಅನಿರೀಕ್ಷಿತ ಘಟನೆಗಳಿಗೆ ಸಿಕ್ಕಿ ತೊಳಲಾಡುವ ರೈತರ ನೆರವಿಗೆ ಕೂಡಲೇ ಸರ್ಕಾರ ಬರಬೇಕಿದೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!