Doddaballapura: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಸಂಕ್ರಾಂತಿ ಆಚರಣೆ.. ಸಾರ್ವಜನಿಕರ ಆಕ್ರೋಶ..!

Doddaballapura: Sankranti celebrations in Doddaballapura Municipal Council.

ದೊಡ್ಡಬಳ್ಳಾಪುರ (Doddaballapura): ಮಕರ ಸಂಕ್ರಾಂತಿ ಹಬ್ಬವನ್ನು ನಗರಸಭೆ ಕಾರ್‍ಯಾಲಯದ ಸೋಮವಾರ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ, ಸ್ಥಾಯಿಸಮಿತಿ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು, ಅಧಿಕಾರಿ ವರ್ಗ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡು ಸಂತೋಷದಿಂದ ಹಬ್ಬ ಆಚರಣೆ ಮಾಡಿದರು.

ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಯಿತು. ನಂತರ ಗೋಪೂಜೆ ಮಾಡಲಾಯಿತು. ನಂತರ ಎಳ್ಳು – ಬೆಲ್ಲ ಹಂಚಿ ಪರಸ್ಪರ ಹಬ್ಬದ ಶುಭಾಶಯ ಕೋರಲಾಯಿತು.

ಆಕ್ಷೇಪ

ಆದರೆ ಈ ಆಚರಣೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದು, ಜನರ ಸಮಸ್ಯೆ ಆಲಿಸುವುದೊಂದನ್ನು ಬಿಟ್ಟು ಉಳಿದೆಲ್ಲ ಕೆಲಸ ನಗರಸಭೆಯಲ್ಲಿ ನಡೆಯುತ್ತಿದೆ.. ಹಬ್ಬ ಆಚರಣೆ ನೆಪದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆ ಮಾಡಿದ್ದಾರೆ ಎಂದು ನಗರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷೆ ಸುಶೀಲ ರಾಘವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Doddaballapura: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಸಂಕ್ರಾಂತಿ ಆಚರಣೆ.. ಸಾರ್ವಜನಿಕರ ಆಕ್ರೋಶ..!

ಈ ಕುರಿತು ಮಾತನಾಡಿರುವ ಅವರು, ಸಂಕ್ರಾಂತಿ ಹಬ್ಬ ಇರುವುದು ಮಂಗಳವಾರ ಆದರೆ ಆಡಳಿತ ಮಂಡಳಿ, ಅಧಿಕಾರಿಗಳು ಕರ್ತವ್ಯ ಮರೆತು ಸೋಮವಾರ ಸಾರ್ವಜನಿಕ ಕೆಲಸಗಳನ್ನು ಬದಿಗೊತ್ತಿ ಹಬ್ಬವನ್ನು ಆಚರಿಸಿದ್ದಾರೆ… ಇದು ಎಷ್ಟು ಸರಿ..? ಎಂದು ಪ್ರಶ್ನಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳು ಬಿದ್ದು ಅನೇಕರ ಜೀವ ಹಾನಿಯಾಗುತ್ತಿದೆ.. ಆದರೆ ನಗರಸಭೆ ಸದಸ್ಯರು ಮೌನ, ರಸ್ತೆ ಅಗಲಿಕರವಾಗದೆ ನಗರ ಕಿಷ್ಕಿಂದೆಯಾಗಿದೆ. ಆದರೆ ನಗರಸಭೆ ಸದಸ್ಯರು ಮೌನ, ಯುಜಿಡಿ ಸಮಸ್ಯೆ ಮಿತಿ ಮೀರಿದೆ ಆದರೆ ನಗರಸಭೆ ಸದಸ್ಯರು ಮೌನ, ಮನೆ ಮನೆ ಕೊಳಾಯಿ ಯೋಜನೆ ಆರಂಭವಾಗಿ ಅನೇಕ ವರ್ಷ ಕಳೆದರು ಪೂರ್ಣಗೊಂಡಿಲ್ಲ ಆದರೂ ನಗರಸಭೆ ಸದಸ್ಯರು ಮೌನ. ನಗರಸಭೆಯಲ್ಲಿ ದಲ್ಲಾಳಿಗಳ ಹಾವಳಿ ಮಿತಿಮೀರಿದೆ. ಆದರೆ ನಗರಸಭೆ ಸದಸ್ಯರು ಇದರ ಬಗ್ಗೆ ಮಾತನಾಡುವುದಿಲ್ಲ.

ಸಾಮಾನ್ಯ ಸಭೆಯಲ್ಲಿ ಮಾಧ್ಯಮಗಳ ಮುಂದೆ ಜೋರು ಜಾರೋಗಿ ಮಾತಾಡುವ ಕೆಲ ಸದಸ್ಯರು ಬಳಿಕ ನಗರಸಭೆ ವ್ಯಾಪ್ತಿಯಲ್ಲಿನ ಜನರ ಸಮಸ್ಯೆ ಆಲಿಸುತ್ತಿಲ್ಲ ಎಂಬ ಆಕ್ರೋಶ ಜನರದ್ದಾಗಿದ್ದು, ಸಂಕ್ರಾಂತಿ ಆಯ್ತು ಸಂತೋಷ.. ಮುಂದೆ ಕ್ರಿಸ್ಮಸ್, ರಂಜಾನ್ ಆಚರಣೆ ಮಾಡಿ ಎಂದು ಸಮುದಾಯಗಳು ಪಟ್ಟುಹಿಡಿದು ಪ್ರತಿಭಟನೆಗೆ ಮುಂದಾದರೆ ಯಾವ ಖರ್ಚಿನಿಂದ ಮಾಡ್ತೀರಾ..? ಎಂದು ಸುಶೀಲಮ್ಮ ರಾಘವ ಪ್ರಶ್ನಿಸಿದ್ದಾರೆ.

ನಗರಸಭೆ ಸದಸ್ಯರ ಪ್ಯಾಷನ್ ಶೋ: ರಾಜು ಸಣ್ಣಕ್ಕಿ

ಈ ಕುರಿತು ಪತ್ರಕರ್ತ ರಾಜುಸಣ್ಣಕ್ಕಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ನಗರಸಭೆ ಸರ್ಕಾರಿ ಸಂಸ್ಥೆಯಾಗಿದ್ದು, ಜಾತ್ಯಾತೀತತೆಯನ್ನು ಪ್ರತಿಪಾದನೆ ಮಾಡಬೇಕಿದೆ. ಅಭಿವೃದ್ಧಿ ಕಾರ್ಯಗಳನ್ನು ಮರೆತು, ಒಂದು ಧಾರ್ಮಿಕ ಆಚರಣೆ ಹೆಸರಲಿ ನಗರಸಭೆ ಸದಸ್ಯರು ಪ್ಯಾಷನ್ ಶೋ ರೀತಿ ನಡೆಸುವುದು ಸರಿಯಲ್ಲ.

Doddaballapura: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಸಂಕ್ರಾಂತಿ ಆಚರಣೆ.. ಸಾರ್ವಜನಿಕರ ಆಕ್ರೋಶ..!

ಈಗ ಹಿಂದೂ ಅಧ್ಯಕ್ಷರಾಗಿದ್ದಾರೆ ಸಂಕ್ರಾಂತಿ ಆಚರಣೆ ಮಾಡಿದ್ದೀರಿ, ಮುಂದೆ ಮುಸ್ಲಿಂ ಅಥವಾ ಕ್ರಿಶ್ಚಿಯನ್ ಮುಂತಾದ ಸಮುದಾಯದವರು ಅಧ್ಯಕ್ಷರಾದಾಗ ಅವರು ಇದೇ ರೀತಿ ಆಚರಿಸಿದರೆ.. ಜಾತ್ಯಾತೀತತೆ ಎಲ್ಲಿ ಉಳಿಯುತ್ತದೆ..?

ಇಂತಹ ತೋರಿಕೆ ಡಂಬಾಚಾರಗಳನ್ನು ಬದಿಗೊತ್ತಿ, ನಗರಸಭೆಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ, ವಾರ್ಡಗಳಲ್ಲಿನ ಸಮಸ್ಯೆ, ಪ್ರಮುಖವಾಗಿ ರಸ್ತೆ ಅಗಲೀಕರಣದ ಕಡೆ ಗಮನಹರಿಸಿ ಜನಸ್ನೇಹಿ ನಗರಸಭೆ ಸದಸ್ಯರಾಗುವಂತೆ ರಾಜುಸಣ್ಣಕ್ಕಿ ಒತ್ತಾಯಿಸಿದ್ದಾರೆ‌.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!