Doddaballapura: Sankranti celebrations in Doddaballapura Municipal Council.

Doddaballapura: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಸಂಕ್ರಾಂತಿ ಆಚರಣೆ.. ಸಾರ್ವಜನಿಕರ ಆಕ್ರೋಶ..!

ದೊಡ್ಡಬಳ್ಳಾಪುರ (Doddaballapura): ಮಕರ ಸಂಕ್ರಾಂತಿ ಹಬ್ಬವನ್ನು ನಗರಸಭೆ ಕಾರ್‍ಯಾಲಯದ ಸೋಮವಾರ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ, ಸ್ಥಾಯಿಸಮಿತಿ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು, ಅಧಿಕಾರಿ ವರ್ಗ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡು ಸಂತೋಷದಿಂದ ಹಬ್ಬ ಆಚರಣೆ ಮಾಡಿದರು.

ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಯಿತು. ನಂತರ ಗೋಪೂಜೆ ಮಾಡಲಾಯಿತು. ನಂತರ ಎಳ್ಳು – ಬೆಲ್ಲ ಹಂಚಿ ಪರಸ್ಪರ ಹಬ್ಬದ ಶುಭಾಶಯ ಕೋರಲಾಯಿತು.

ಆಕ್ಷೇಪ

ಆದರೆ ಈ ಆಚರಣೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದು, ಜನರ ಸಮಸ್ಯೆ ಆಲಿಸುವುದೊಂದನ್ನು ಬಿಟ್ಟು ಉಳಿದೆಲ್ಲ ಕೆಲಸ ನಗರಸಭೆಯಲ್ಲಿ ನಡೆಯುತ್ತಿದೆ.. ಹಬ್ಬ ಆಚರಣೆ ನೆಪದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆ ಮಾಡಿದ್ದಾರೆ ಎಂದು ನಗರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷೆ ಸುಶೀಲ ರಾಘವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Doddaballapura: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಸಂಕ್ರಾಂತಿ ಆಚರಣೆ.. ಸಾರ್ವಜನಿಕರ ಆಕ್ರೋಶ..!

ಈ ಕುರಿತು ಮಾತನಾಡಿರುವ ಅವರು, ಸಂಕ್ರಾಂತಿ ಹಬ್ಬ ಇರುವುದು ಮಂಗಳವಾರ ಆದರೆ ಆಡಳಿತ ಮಂಡಳಿ, ಅಧಿಕಾರಿಗಳು ಕರ್ತವ್ಯ ಮರೆತು ಸೋಮವಾರ ಸಾರ್ವಜನಿಕ ಕೆಲಸಗಳನ್ನು ಬದಿಗೊತ್ತಿ ಹಬ್ಬವನ್ನು ಆಚರಿಸಿದ್ದಾರೆ… ಇದು ಎಷ್ಟು ಸರಿ..? ಎಂದು ಪ್ರಶ್ನಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳು ಬಿದ್ದು ಅನೇಕರ ಜೀವ ಹಾನಿಯಾಗುತ್ತಿದೆ.. ಆದರೆ ನಗರಸಭೆ ಸದಸ್ಯರು ಮೌನ, ರಸ್ತೆ ಅಗಲಿಕರವಾಗದೆ ನಗರ ಕಿಷ್ಕಿಂದೆಯಾಗಿದೆ. ಆದರೆ ನಗರಸಭೆ ಸದಸ್ಯರು ಮೌನ, ಯುಜಿಡಿ ಸಮಸ್ಯೆ ಮಿತಿ ಮೀರಿದೆ ಆದರೆ ನಗರಸಭೆ ಸದಸ್ಯರು ಮೌನ, ಮನೆ ಮನೆ ಕೊಳಾಯಿ ಯೋಜನೆ ಆರಂಭವಾಗಿ ಅನೇಕ ವರ್ಷ ಕಳೆದರು ಪೂರ್ಣಗೊಂಡಿಲ್ಲ ಆದರೂ ನಗರಸಭೆ ಸದಸ್ಯರು ಮೌನ. ನಗರಸಭೆಯಲ್ಲಿ ದಲ್ಲಾಳಿಗಳ ಹಾವಳಿ ಮಿತಿಮೀರಿದೆ. ಆದರೆ ನಗರಸಭೆ ಸದಸ್ಯರು ಇದರ ಬಗ್ಗೆ ಮಾತನಾಡುವುದಿಲ್ಲ.

ಸಾಮಾನ್ಯ ಸಭೆಯಲ್ಲಿ ಮಾಧ್ಯಮಗಳ ಮುಂದೆ ಜೋರು ಜಾರೋಗಿ ಮಾತಾಡುವ ಕೆಲ ಸದಸ್ಯರು ಬಳಿಕ ನಗರಸಭೆ ವ್ಯಾಪ್ತಿಯಲ್ಲಿನ ಜನರ ಸಮಸ್ಯೆ ಆಲಿಸುತ್ತಿಲ್ಲ ಎಂಬ ಆಕ್ರೋಶ ಜನರದ್ದಾಗಿದ್ದು, ಸಂಕ್ರಾಂತಿ ಆಯ್ತು ಸಂತೋಷ.. ಮುಂದೆ ಕ್ರಿಸ್ಮಸ್, ರಂಜಾನ್ ಆಚರಣೆ ಮಾಡಿ ಎಂದು ಸಮುದಾಯಗಳು ಪಟ್ಟುಹಿಡಿದು ಪ್ರತಿಭಟನೆಗೆ ಮುಂದಾದರೆ ಯಾವ ಖರ್ಚಿನಿಂದ ಮಾಡ್ತೀರಾ..? ಎಂದು ಸುಶೀಲಮ್ಮ ರಾಘವ ಪ್ರಶ್ನಿಸಿದ್ದಾರೆ.

ನಗರಸಭೆ ಸದಸ್ಯರ ಪ್ಯಾಷನ್ ಶೋ: ರಾಜು ಸಣ್ಣಕ್ಕಿ

ಈ ಕುರಿತು ಪತ್ರಕರ್ತ ರಾಜುಸಣ್ಣಕ್ಕಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ನಗರಸಭೆ ಸರ್ಕಾರಿ ಸಂಸ್ಥೆಯಾಗಿದ್ದು, ಜಾತ್ಯಾತೀತತೆಯನ್ನು ಪ್ರತಿಪಾದನೆ ಮಾಡಬೇಕಿದೆ. ಅಭಿವೃದ್ಧಿ ಕಾರ್ಯಗಳನ್ನು ಮರೆತು, ಒಂದು ಧಾರ್ಮಿಕ ಆಚರಣೆ ಹೆಸರಲಿ ನಗರಸಭೆ ಸದಸ್ಯರು ಪ್ಯಾಷನ್ ಶೋ ರೀತಿ ನಡೆಸುವುದು ಸರಿಯಲ್ಲ.

Doddaballapura: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಸಂಕ್ರಾಂತಿ ಆಚರಣೆ.. ಸಾರ್ವಜನಿಕರ ಆಕ್ರೋಶ..!

ಈಗ ಹಿಂದೂ ಅಧ್ಯಕ್ಷರಾಗಿದ್ದಾರೆ ಸಂಕ್ರಾಂತಿ ಆಚರಣೆ ಮಾಡಿದ್ದೀರಿ, ಮುಂದೆ ಮುಸ್ಲಿಂ ಅಥವಾ ಕ್ರಿಶ್ಚಿಯನ್ ಮುಂತಾದ ಸಮುದಾಯದವರು ಅಧ್ಯಕ್ಷರಾದಾಗ ಅವರು ಇದೇ ರೀತಿ ಆಚರಿಸಿದರೆ.. ಜಾತ್ಯಾತೀತತೆ ಎಲ್ಲಿ ಉಳಿಯುತ್ತದೆ..?

ಇಂತಹ ತೋರಿಕೆ ಡಂಬಾಚಾರಗಳನ್ನು ಬದಿಗೊತ್ತಿ, ನಗರಸಭೆಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ, ವಾರ್ಡಗಳಲ್ಲಿನ ಸಮಸ್ಯೆ, ಪ್ರಮುಖವಾಗಿ ರಸ್ತೆ ಅಗಲೀಕರಣದ ಕಡೆ ಗಮನಹರಿಸಿ ಜನಸ್ನೇಹಿ ನಗರಸಭೆ ಸದಸ್ಯರಾಗುವಂತೆ ರಾಜುಸಣ್ಣಕ್ಕಿ ಒತ್ತಾಯಿಸಿದ್ದಾರೆ‌.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!