Doddaballapura: Sankranti celebrations in Doddaballapura Municipal Council.

Doddaballapura: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಸಂಕ್ರಾಂತಿ ಆಚರಣೆ.. ಸಾರ್ವಜನಿಕರ ಆಕ್ರೋಶ..!

ದೊಡ್ಡಬಳ್ಳಾಪುರ (Doddaballapura): ಮಕರ ಸಂಕ್ರಾಂತಿ ಹಬ್ಬವನ್ನು ನಗರಸಭೆ ಕಾರ್‍ಯಾಲಯದ ಸೋಮವಾರ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ, ಸ್ಥಾಯಿಸಮಿತಿ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು, ಅಧಿಕಾರಿ ವರ್ಗ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡು ಸಂತೋಷದಿಂದ ಹಬ್ಬ ಆಚರಣೆ ಮಾಡಿದರು.

ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಯಿತು. ನಂತರ ಗೋಪೂಜೆ ಮಾಡಲಾಯಿತು. ನಂತರ ಎಳ್ಳು – ಬೆಲ್ಲ ಹಂಚಿ ಪರಸ್ಪರ ಹಬ್ಬದ ಶುಭಾಶಯ ಕೋರಲಾಯಿತು.

ಆಕ್ಷೇಪ

ಆದರೆ ಈ ಆಚರಣೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದು, ಜನರ ಸಮಸ್ಯೆ ಆಲಿಸುವುದೊಂದನ್ನು ಬಿಟ್ಟು ಉಳಿದೆಲ್ಲ ಕೆಲಸ ನಗರಸಭೆಯಲ್ಲಿ ನಡೆಯುತ್ತಿದೆ.. ಹಬ್ಬ ಆಚರಣೆ ನೆಪದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆ ಮಾಡಿದ್ದಾರೆ ಎಂದು ನಗರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷೆ ಸುಶೀಲ ರಾಘವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಸಂಕ್ರಾಂತಿ ಹಬ್ಬ ಇರುವುದು ಮಂಗಳವಾರ ಆದರೆ ಆಡಳಿತ ಮಂಡಳಿ, ಅಧಿಕಾರಿಗಳು ಕರ್ತವ್ಯ ಮರೆತು ಸೋಮವಾರ ಸಾರ್ವಜನಿಕ ಕೆಲಸಗಳನ್ನು ಬದಿಗೊತ್ತಿ ಹಬ್ಬವನ್ನು ಆಚರಿಸಿದ್ದಾರೆ… ಇದು ಎಷ್ಟು ಸರಿ..? ಎಂದು ಪ್ರಶ್ನಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳು ಬಿದ್ದು ಅನೇಕರ ಜೀವ ಹಾನಿಯಾಗುತ್ತಿದೆ.. ಆದರೆ ನಗರಸಭೆ ಸದಸ್ಯರು ಮೌನ, ರಸ್ತೆ ಅಗಲಿಕರವಾಗದೆ ನಗರ ಕಿಷ್ಕಿಂದೆಯಾಗಿದೆ. ಆದರೆ ನಗರಸಭೆ ಸದಸ್ಯರು ಮೌನ, ಯುಜಿಡಿ ಸಮಸ್ಯೆ ಮಿತಿ ಮೀರಿದೆ ಆದರೆ ನಗರಸಭೆ ಸದಸ್ಯರು ಮೌನ, ಮನೆ ಮನೆ ಕೊಳಾಯಿ ಯೋಜನೆ ಆರಂಭವಾಗಿ ಅನೇಕ ವರ್ಷ ಕಳೆದರು ಪೂರ್ಣಗೊಂಡಿಲ್ಲ ಆದರೂ ನಗರಸಭೆ ಸದಸ್ಯರು ಮೌನ. ನಗರಸಭೆಯಲ್ಲಿ ದಲ್ಲಾಳಿಗಳ ಹಾವಳಿ ಮಿತಿಮೀರಿದೆ. ಆದರೆ ನಗರಸಭೆ ಸದಸ್ಯರು ಇದರ ಬಗ್ಗೆ ಮಾತನಾಡುವುದಿಲ್ಲ.

ಸಾಮಾನ್ಯ ಸಭೆಯಲ್ಲಿ ಮಾಧ್ಯಮಗಳ ಮುಂದೆ ಜೋರು ಜಾರೋಗಿ ಮಾತಾಡುವ ಕೆಲ ಸದಸ್ಯರು ಬಳಿಕ ನಗರಸಭೆ ವ್ಯಾಪ್ತಿಯಲ್ಲಿನ ಜನರ ಸಮಸ್ಯೆ ಆಲಿಸುತ್ತಿಲ್ಲ ಎಂಬ ಆಕ್ರೋಶ ಜನರದ್ದಾಗಿದ್ದು, ಸಂಕ್ರಾಂತಿ ಆಯ್ತು ಸಂತೋಷ.. ಮುಂದೆ ಕ್ರಿಸ್ಮಸ್, ರಂಜಾನ್ ಆಚರಣೆ ಮಾಡಿ ಎಂದು ಸಮುದಾಯಗಳು ಪಟ್ಟುಹಿಡಿದು ಪ್ರತಿಭಟನೆಗೆ ಮುಂದಾದರೆ ಯಾವ ಖರ್ಚಿನಿಂದ ಮಾಡ್ತೀರಾ..? ಎಂದು ಸುಶೀಲಮ್ಮ ರಾಘವ ಪ್ರಶ್ನಿಸಿದ್ದಾರೆ.

ನಗರಸಭೆ ಸದಸ್ಯರ ಪ್ಯಾಷನ್ ಶೋ: ರಾಜು ಸಣ್ಣಕ್ಕಿ

ಈ ಕುರಿತು ಪತ್ರಕರ್ತ ರಾಜುಸಣ್ಣಕ್ಕಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ನಗರಸಭೆ ಸರ್ಕಾರಿ ಸಂಸ್ಥೆಯಾಗಿದ್ದು, ಜಾತ್ಯಾತೀತತೆಯನ್ನು ಪ್ರತಿಪಾದನೆ ಮಾಡಬೇಕಿದೆ. ಅಭಿವೃದ್ಧಿ ಕಾರ್ಯಗಳನ್ನು ಮರೆತು, ಒಂದು ಧಾರ್ಮಿಕ ಆಚರಣೆ ಹೆಸರಲಿ ನಗರಸಭೆ ಸದಸ್ಯರು ಪ್ಯಾಷನ್ ಶೋ ರೀತಿ ನಡೆಸುವುದು ಸರಿಯಲ್ಲ.

ಈಗ ಹಿಂದೂ ಅಧ್ಯಕ್ಷರಾಗಿದ್ದಾರೆ ಸಂಕ್ರಾಂತಿ ಆಚರಣೆ ಮಾಡಿದ್ದೀರಿ, ಮುಂದೆ ಮುಸ್ಲಿಂ ಅಥವಾ ಕ್ರಿಶ್ಚಿಯನ್ ಮುಂತಾದ ಸಮುದಾಯದವರು ಅಧ್ಯಕ್ಷರಾದಾಗ ಅವರು ಇದೇ ರೀತಿ ಆಚರಿಸಿದರೆ.. ಜಾತ್ಯಾತೀತತೆ ಎಲ್ಲಿ ಉಳಿಯುತ್ತದೆ..?

ಇಂತಹ ತೋರಿಕೆ ಡಂಬಾಚಾರಗಳನ್ನು ಬದಿಗೊತ್ತಿ, ನಗರಸಭೆಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ, ವಾರ್ಡಗಳಲ್ಲಿನ ಸಮಸ್ಯೆ, ಪ್ರಮುಖವಾಗಿ ರಸ್ತೆ ಅಗಲೀಕರಣದ ಕಡೆ ಗಮನಹರಿಸಿ ಜನಸ್ನೇಹಿ ನಗರಸಭೆ ಸದಸ್ಯರಾಗುವಂತೆ ರಾಜುಸಣ್ಣಕ್ಕಿ ಒತ್ತಾಯಿಸಿದ್ದಾರೆ‌.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!