Protesting injustice is also a duty

Daily story: ಹರಿತಲೇಖನಿ ದಿನಕ್ಕೊಂದು ಕಥೆ: ಅನ್ಯಾಯದ ಪ್ರತಿಭಟನೆಯೂ ಕರ್ತವ್ಯವೇ

Daily story: ಮಾನವನ ಬದುಕಿನಲ್ಲಿ ಅನೇಕ ಬಾರಿ ಅನೇಕ ತರಹದ ಅಪ್ರಿಯ, ಅಸಹ್ಯ ಘಟನೆಗಳು ಜರಗುವುದಿದೆ. ಆಗ ಶಾಂತಿ ಪ್ರೇಮಿಗಳು ಅಂಥ ಪ್ರಸಂಗದಲ್ಲಿ ಅಹಿಂಸಾವಾದಿಗಳಾಗಿ, ಶಾಂತಿಯಿಂದ ಸಹಿಸಿಕೊಳ್ಳಬೇಕು.

ಅಶಾಂತರಾಗಿ ಹಿಂಸಾಪ್ರಿಯರಂತೆ ವಿರೋಧಿಸಬಾರದು ಎಂದು ಅಹಿಂಸಾವಾದಿಗಳು ವಾದಿಸುವುದು, ಉಪದೇಶಿಸುವುದು ಉಂಟು. ಆದರೆ ಹಿಂಸಾ ಪ್ರೇಮಿಗಳ ಅನ್ಯಾಯ, ಅತ್ಯಾಚಾರಗಳನ್ನು ಹೇಗೆ ಮತ್ತು ಏಕೆ ಪ್ರತಿಭಟಿಸಬೇಕೆಂಬುದನ್ನು ನಿರೂಪಿಸುವಂತಹ ಸ್ವಾಮಿ ವಿವೇಕಾನಂದರ ಬದುಕಿನ ಒಂದು ಮಾರ್ಗದರ್ಶಕ ಪ್ರಸಂಗ ಅತೀವ ಸ್ವಾರಸ್ಯಕರವಾಗಿದೆ.

ಇದು ಬ್ರಿಟಿಷ್‌ ಆಡಳಿತ ಕಾಲದ ಪ್ರಸಂಗ ‌ ಸ್ವಾಮಿ ವಿವೇಕಾನಂದರು ಒಮ್ಮೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಅವರು ಕುಳಿತಿದ್ದ ಕಂಪಾರ್ಟ್‌ಮೆಂಟ್‌ನಲ್ಲಿ ಒಬ್ಬ ಭಾರತೀಯ ಮಹಿಳೆಯೂ ತನ್ನ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದಳು, ಮುಂದಕ್ಕೆ ಒಂದು ರೈಲ್ವೆ ಸ್ಟೇಶನ್‌ನಲ್ಲಿ ಇಬ್ಬರು ಆಂಗ್ಲ ಅಧಿಕಾರಿಗಳು ಬಂದು ಅದೇ ಕಂಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಎದುರಿನ ಸೀಟಿನಲ್ಲಿ ಕುಳಿತರು.

ಆಂಗ್ಲರ ಆಡಳಿತ ಕಾಲವಾದ್ದರಿಂದ ಭಾರತೀಯರೊಂದಿಗೆ ಅಸಭ್ಯ ವ್ಯವಹಾರ ಮಾಡುವುದು ಸಹಜವೆಂಬಂತೆ ಆ ಮಹಿಳೆಯೆದುರು ವರ್ತಿಸತೊಡಗಿದರು.

ಮೊದಲಿಗೆ ಆ ಮಹಿಳೆಯ ಜತೆಗಿದ್ದ ಮಗುವಿನ ಕಿವಿಯನ್ನು ಹಿಂಡುವುದು, ಕೆನ್ನೆಯನ್ನು ಚಿವುಟುವುದು ಮೊದಲಾದ ಕೀಟಲೆ ಮಾಡತೊಡಗಿದರು ಇದರಿಂದ ಬೇಸರಗೊಂಡ ಮಹಿಳೆಯು ಮುಂದಿನ ಸ್ಟೇಶನ್‌ ಬಂದಾಗ, ಬೇರೆ ಕಂಪಾರ್ಟ್‌ಮೆಂಟ್‌ನಲ್ಲಿದ್ದ ಒಬ್ಬ ಭಾರತೀಯ ಪೊಲೀಸ್‌ ಅಧಿಕಾರಿಗೆ ದೂರು ನೀಡಿದಳು.

ಆ ದೂರಿನಂತೆ ಆ ಪೊಲೀಸ್‌ ಅಧಿಕಾರಿ ಬಂದರೂ ದೂರು ಬ್ರಿಟಿಷರ ವಿರುದ್ಧ ಎಂದು ಗೊತ್ತಾದಾಗ, ಆತ ಏನೂ ಹೇಳದೆ ಹೊರಟು ಹೋದರು ಇದನ್ನು ಕಂಡ ಆ ಆಂಗ್ಲ ಅಧಿಕಾರಿಗಳು ಮತ್ತೆ ಕೀಟಲೆ ಆರಂಭಿಸಿದರು.

ಇದೆಲ್ಲವನ್ನೂ ಬಹು ಹೊತ್ತಿನಿಂದ ಗಮನಿಸುತ್ತಿದ್ದ ವಿವೇಕಾನಂದರು ಈ ಆಂಗ್ಲ ಅಧಿಕಾರಿಗಳಿಗೆ ಸೂಕ್ತ ಪಾಠ ಕಲಿಸಬೇಕೆಂದು ನಿರ್ಧರಿಸಿದರು ತಕ್ಷಣ ತಾವು ಕುಳಿತಲ್ಲಿಂದ ಎದ್ದು, ಆಂಗ್ಲ ಅಧಿಕಾರಿಗಳ ಎದುರುಗಡೆ ನಿಂತುಬಿಟ್ಟರು.

ಅವರ ಬಲಿಷ್ಠ ಕಾಯವನ್ನು ವೀಕ್ಷಿಸಿದ ಆಂಗ್ಲರು ಗಾಬರಿಯಾದರು ಮೊದಲಿಗೆ ವಿವೇಕಾನಂದರು ಅವರಿಬ್ಬರ ಕಣ್ಣುಗಳನ್ನು ದಿಟ್ಟಿಸಿ ನೋಡಿದರು. ಬಳಿಕ ಎಡಗೈಯ ಶರ್ಟ್‌ನ ತೋಳನ್ನು ಮೇಲಕ್ಕೆ ಸರಿಸಿದರು ಮತ್ತು ಕೈಯನ್ನು ತಿರುಗಿಸಿ ಅವರಿಗೆ ತಮ್ಮ ಬಾಹುಗಳ ಸುಪುಷ್ಟವೂ, ಬಲಿಷ್ಠವೂ ಆದ ಮಾಂಸ ಖಂಡಗಳನ್ನು ತೋರಿಸಿದರು.

ಸ್ವಾಮಿ ವಿವೇಕಾನಂದರ ಈ ನಡವಳಿಕೆಯನ್ನು ಕಂಡು ಇಬ್ಬರೂ ಆಂಗ್ಲ ಅಧಿಕಾರಿಗಳು ಗಾಬರಿಯಾದರು ಮತ್ತು ಮುಂದಿನ ಸ್ಟೇಶನ್‌ ಬಂದೊಡನೆ ಇಳಿದು ಇನ್ನೊಂದು ಕಂಪಾರ್ಟ್‌ಮೆಂಟ್‌ಗೆ ಹತ್ತಿಕೊಂಡರು.

ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಶ್ರೇಷ್ಠತೆ, ಹಿರಿಮೆ, ಗರಿಮೆಗಳನ್ನು ಅರಿತಿದ್ದ ಧೀಮಂತ ಪುರುಷರಾಗಿದ್ದು ತಮ್ಮ ಪ್ರವಚನಗಳಲ್ಲಿ ಈ ಉದಾಹರಣೆಯನ್ನು ನೀಡುತ್ತಿದ್ದರು.

ಅವರು ಹಿಂಸೆಯ ಪರವಾಗಿರಲಿಲ್ಲ ಆದರೆ ಹಿಂಸಾತ್ಮಕವಾಗಿರುವವರನ್ನು ಎದುರಿಸಲು ಕೆಲವೊಮ್ಮೆ ದೃಢವಾದ ಶಾರೀರಿಕ ನಿಲುವುಗಳೇ ಬೇಕು.

ದೃಢವಾದ ದೇಹವನ್ನೂ ವಿವೇಕಯುತವಾದ ಪ್ರಜ್ಞೆಯನ್ನೂ ಸ್ವಾಮಿ ವಿವೇಕಾನಂದರು ಪ್ರತಿಪಾದಿಸುತ್ತಿದ್ದರು ನಾವು ಅನ್ಯಾಯವನ್ನು ಪ್ರತಿಭಟಿಸದೆ, ಸಹಿಸುತ್ತಾ ಮುನ್ನಡೆದರೆ ಅನ್ಯಾಯ ಮಾಡುವವರು ಮತ್ತಷ್ಟು ಬಲಿಷ್ಠರಾಗುತ್ತಾರೆ.

ಆದ್ದರಿಂದ ಅಧರ್ಮ, ಅನೀತಿ, ಅನ್ಯಾಯ ಮಾಡುವವರನ್ನು ಪ್ರತಿಭಟಿಸುವುದೂ ಕೂಡ ನ್ಯಾಯ, ನೀತಿ, ಧರ್ಮಗಳ ರಕ್ಷಣೆಯೇ ಆಗಿದೆ ಎಂಬುದನ್ನು ಮರೆಯುವಂತಿಲ್ಲ.

ಕೃಪೆ: ಸಾಮಾಜಿಕತಾಣ. (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!